ಮೈಸೂರು -ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡಲು ಎಸ್.ಎಂ.ಕೃಷ್ಣ ಮನವಿ
Team Udayavani, Jan 1, 2023, 5:41 PM IST
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮೈಸೂರು -ಬೆಂಗಳೂರು 275 ರಾಷ್ಟ್ರೀಯ ಹೆದ್ದಾರಿ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಹೆಸರನ್ನು ನಾಮಕರಣ ಮಾಡಲು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಜನವರಿ 01 ರಂದು ಎಸ್.ಎಂ.ಕೃಷ್ಣ ಅವರು ಈ ಬಗ್ಗೆ ಪತ್ರ ಬರೆದಿದ್ದು, ಹೊಸತಾಗಿ ನಿರ್ಮಾಣಗೊಂಡಿರುವ ರಸ್ತೆಗೆ 1902 -1940ರ ವರೆಗೆ ಮೈಸೂರಿನ ಅರಸರಾಗಿದ್ದ ಒಡೆಯರ್ ಹೆಸರಿಡಲು ಮನವಿ ಮಾಡಿದ್ದಾರೆ.
ಅನೇಕ ಶತಮಾನಗಳ ಪರಂಪರೆ ಮತ್ತು ಪದ್ಧತಿಗಳಲ್ಲಿ ಸಮೃದ್ಧವಾಗಿರುವ ಮೈಸೂರು ಸಂಸ್ಕೃತಿಯನ್ನು ರೂಪಿಸಿದ, ಸಮುದಾಯ ಸಹ ಅಸ್ತಿತ್ವದ ಮಾನವೀಯ ಆವೃತ್ತಿಯನ್ನು ಬೆಳೆಸಿದವರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೃಷ್ಣರಾಜ ಸಾಗರ ಅಣೆಕಟ್ಟು ನಿರ್ಮಾಣ ಮಾಡಿದ್ದು ಜೀವಮಾನದ ಮಹತ್ಸಾಧನೆಯಾಗಿದೆ ಎಂದು ಬಣ್ಣಿಸಿದ್ದಾರೆ.
ಮಹಾರಾಜರ ಆಡಳಿತ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅವರನ್ನು ಎಲ್ಲರೂ ರಾಜಶ್ರೀ ಎಂದು ಕರೆಯುತ್ತಿದ್ದರು. ಆ ಹೆಸರನ್ನು ಅವರ ಆಡಳಿತಾತ್ಮಕ ಕಾರ್ಯ ವೈಖರಿಯನ್ನು ಮೆಚ್ಚಿ ಮಹಾತ್ಮ ಗಾಂಧೀಜಿ ಅವರೇ ನೀಡಿದ್ದರು ಎಂದು ಸುದೀರ್ಘ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್