
ಮೈಸೂರು -ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡಲು ಎಸ್.ಎಂ.ಕೃಷ್ಣ ಮನವಿ
Team Udayavani, Jan 1, 2023, 5:41 PM IST

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮೈಸೂರು -ಬೆಂಗಳೂರು 275 ರಾಷ್ಟ್ರೀಯ ಹೆದ್ದಾರಿ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಹೆಸರನ್ನು ನಾಮಕರಣ ಮಾಡಲು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಜನವರಿ 01 ರಂದು ಎಸ್.ಎಂ.ಕೃಷ್ಣ ಅವರು ಈ ಬಗ್ಗೆ ಪತ್ರ ಬರೆದಿದ್ದು, ಹೊಸತಾಗಿ ನಿರ್ಮಾಣಗೊಂಡಿರುವ ರಸ್ತೆಗೆ 1902 -1940ರ ವರೆಗೆ ಮೈಸೂರಿನ ಅರಸರಾಗಿದ್ದ ಒಡೆಯರ್ ಹೆಸರಿಡಲು ಮನವಿ ಮಾಡಿದ್ದಾರೆ.
ಅನೇಕ ಶತಮಾನಗಳ ಪರಂಪರೆ ಮತ್ತು ಪದ್ಧತಿಗಳಲ್ಲಿ ಸಮೃದ್ಧವಾಗಿರುವ ಮೈಸೂರು ಸಂಸ್ಕೃತಿಯನ್ನು ರೂಪಿಸಿದ, ಸಮುದಾಯ ಸಹ ಅಸ್ತಿತ್ವದ ಮಾನವೀಯ ಆವೃತ್ತಿಯನ್ನು ಬೆಳೆಸಿದವರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೃಷ್ಣರಾಜ ಸಾಗರ ಅಣೆಕಟ್ಟು ನಿರ್ಮಾಣ ಮಾಡಿದ್ದು ಜೀವಮಾನದ ಮಹತ್ಸಾಧನೆಯಾಗಿದೆ ಎಂದು ಬಣ್ಣಿಸಿದ್ದಾರೆ.
ಮಹಾರಾಜರ ಆಡಳಿತ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅವರನ್ನು ಎಲ್ಲರೂ ರಾಜಶ್ರೀ ಎಂದು ಕರೆಯುತ್ತಿದ್ದರು. ಆ ಹೆಸರನ್ನು ಅವರ ಆಡಳಿತಾತ್ಮಕ ಕಾರ್ಯ ವೈಖರಿಯನ್ನು ಮೆಚ್ಚಿ ಮಹಾತ್ಮ ಗಾಂಧೀಜಿ ಅವರೇ ನೀಡಿದ್ದರು ಎಂದು ಸುದೀರ್ಘ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train Tragedy ತಾಯ್ನಾಡಿಗೆ ವಾಪಸ್ ಆದ ಹುಣಸೂರಿನ ಕ್ರೀಡಾಪಟುಗಳು

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

Congress Guarantee ಘೋಷಣೆಯಿಂದ ಬಿಜೆಪಿಗೆ ಆತಂಕ: ಸಚಿವ ಸತೀಶ್ ಜಾರಕಿಹೊಳಿ

ಸಿದ್ರಾಮಣ್ಣೋರ್ ಫೈವ್ ಗ್ಯಾರಂಟಿ ಕೊಟ್ಮ್ಯಾಕೆ ಲೈಫ್ ಈಸ್ ಜಿಂಗಾಲಾಲಾ…
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
