ಜಾಗದ ಸರ್ವೆಗೆ ನೀವೇ ಬನ್ನಿ ಹೂಗುಚ್ಛ ನೀಡಿ ಸ್ವಾಗತಿಸುವೆ :ಆಯುಕ್ತರಿಗೆ ಸಾ.ರಾ.ಮಹೇಶ್ ಹೇಳಿಕೆ


Team Udayavani, Sep 6, 2021, 12:56 PM IST

ಜಾಗ ಸರ್ವೆಗೆ ನೀವೇ ಬನ್ನಿ ನನ್ನ ಸ್ವಾಗತವಿದೆ : ಆಯುಕ್ತರಿಗೆ ಶಾಸಕ ಸಾ.ರಾ. ಮಹೇಶ್ ಹೇಳಿಕೆ

ಮೈಸೂರು : ಕಲ್ಯಾಣ ಮಂಟಪದ ಜಾಗ ಒತ್ತುವರಿಯಾಗಿದೆ ಅದರ ಸರ್ವೆ ಕಾರ್ಯ ಆಗಬೇಕಿದೆ ಎಂದ ಭೂಮಾಪನ ಇಲಾಖೆ ಆಯುಕ್ತ ಮನೀಶ್ ಮೌದ್ಗಿಲ್‌ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕೆಂಡಾಮಂಡಲವಾಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ನಾನು ಗೊಮ್ಮಟೇಶ್ವರನ ಭಕ್ತ, ಆಂಜನೇಯನ ಭಕ್ತ. ಆದ್ದರಿಂದ ಸರ್ವೇ ಕಮಿಷನರ್ ಆದೇಶವನ್ನು ಸ್ವಾಗತ ಮಾಡುತ್ತೇನೆ. ರೋಹಿಣಿ ಸಿಂಧೂರಿ ಅವರು ಸಾ.ರಾ.ಚೌಲ್ಟ್ರಿ ರಾಜಕಾಲುವೆ ಮೇಲೆ ನಿರ್ಮಾಣವಾಗಿದೆ, ಅದು ಗೋಮಾಳ ಅಂತ ಹೇಳಿದ್ದರು‌. ನಾನೇ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಧರಣಿ ಮಾಡಿ ತನಿಖೆಗೆ ಆಗ್ರಹಿಸಿದ್ದೆ. ನನ್ನ ಒತ್ತಡ, ಹೋರಾಟದ ಮೇಲೆ ಸರ್ವೇ ಕಾರ್ಯ ನಡೆದಿತ್ತು.

ಆದರೆ ಈಗ ಸರ್ವೇ ಆಯುಕ್ತರು ಒಂದು ಪತ್ರ ಬರೆದಿದ್ದಾರೆ. ಜೆಡಿಎಲ್‌ಆರ್ 3-4 ಜಿಲ್ಲೆಗಳ ಹೆಡ್ ಆಗಿರುತ್ತಾರೆ ಪ್ರಾದೇಶಿಕ ಆಯುಕ್ತರಿಗೆ ಜ್ಯುಡಿಷಿಯಲ್ ಪವರ್ ಇರುತ್ತೆ ಎಂದು.

ಇದನ್ನೂ ಓದಿ :ಅನಂತನಾಗ್‌ ಬರ್ತ್‌ಡೇಗೆ ‘ವಿಜಯಾನಂದ’ ಲುಕ್‌ ಹೊರಕ್ಕೆ

ಆರ್‌ಟಿಸಿ ಎಲ್ಲಿ ತೆಗೆದರೂ ದಾಖಲೆಗಳು ಸಿಗುತ್ತವೆ. ಒಂದು ವೇಳೆ ಚೌಲ್ಟ್ರಿ ಜಾಗದಲ್ಲಿ ಒಂದೇ ಒಂದು ಗುಂಟೆ ಜಾಗ ಒತ್ತುವರಿ ಆಗಿದ್ದರೆ ಅದನ್ನ ರಾಜ್ಯಪಾಲರಿಗೆ ಬರೆದುಕೊಡುವೆ ಅಲ್ಲದೆ ಸಾರ್ವಜನಿಕ ಬದುಕು, ರಾಜಕೀಯ ಬದುಕಿನಿಂದ ನಿವೃತ್ತಿ ತೆಗೆದುಕೊಳ್ಳುವೆ ಎಂದರು.

8 ವರ್ಷದಿಂದ ಅಲ್ಲೇ ಇದ್ದೀರಲ್ಲ, ಎಷ್ಟು ಸಾಗುವಳಿ ದಾಖಲೆ ಕೊಟ್ಟಿದ್ದೀರಿ ಮನೀಶ್ ಮೌದ್ಗಿಲ್ ಅವರೇ ? ಎಂದು ಪ್ರಶ್ನಿಸಿದರು.
ಸಾ.ರಾ.ಕಲ್ಯಾಣ ಮಂಟಪದ ಸುತ್ತ ಸರ್ವೇ ಮಾಡಲು ಅಧಿಕಾರಿಗಳು ಬೇಡ. ಖುದ್ದು ಮನೀಷ್ ಮುದ್ಗಲ್ ಅವರೇ ಬಂದು ಸರ್ವೇ ಮಾಡಲಿ ನಾನು ಬೊಕ್ಕೆ ಹಿಡಿದು ಸ್ವಾಗತಿಸುತ್ತೇನೆ. ರಾಜ ಕಾಲುವೆ ಒತ್ತುವರಿ ಮಾಡಿಲ್ಲ ಇದು ಗೋಮಾಳ ಅಲ್ಲ ಇದಕ್ಕೆ ನಾನು ಈಗಲೂ ಬದ್ದ. ಕಾನೂನು ಪ್ರಕಾರವೇ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗಿದೆ. ಒತ್ತುವರಿಯಾಗಿದ್ದರೆ ಬಂದು ಪರಿಶೀಲನೆ ಮಾಡಿ. ಗೋಮಾಳ ಆಗಿದ್ದರೆ ನಿಮ್ಮ ಬಳಿಯೇ ದಾಖಲೆ ಇದೆ ನೀವೊಬ್ಬ ಪ್ರಾಮಾಣಿಕ ಅಧಿಕಾರಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.