ಕೊಹ್ಲಿ ನೀಡಿದ್ದ ಪವಿತ್ರ ಉಡುಗೊರೆ ಹಿಂದಿರುಗಿಸಿದ್ದ ತೆಂಡೂಲ್ಕರ್!

ಯಾವಾಗಲೂ ನೆನಪಿನಲ್ಲಿರುವ ಭಾವನಾತ್ಮಕ ಕ್ಷಣ ನೆನಪಿಸಿಕೊಂಡ ಸಚಿನ್

Team Udayavani, Feb 18, 2022, 12:39 PM IST

1-ttert

ಮುಂಬಯಿ : 2013 ರಲ್ಲಿ ಕ್ರಿಕೆಟ್ ದೇವರು ಎಂದು ಕರೆಸಿಕೊಂಡ ಭಾರತ ರತ್ನ ಸಚಿನ್ ತೆಂಡೂಲ್ಕರ್ ಅವರ ನಿವೃತ್ತಿ ಅಭಿಮಾನಿಗಳಿಗೆ ಭಾವನಾತ್ಮಕ ಕ್ಷಣವಾಗಿತ್ತು. ಕ್ರಿಕೆಟ್ ದಿಗ್ಗಜ ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳಿಗೆ ಆರಾಧ್ಯ ದೈವವಾಗಿದ್ದರು ಮಾತ್ರವಲ್ಲದೆ ಅವರ ಕಿರಿಯ ಸಹ ಆಟಗಾರರಿಗೂ  ನೆಚ್ಚಿನವರಾಗಿದ್ದರು.

ವಿರಾಟ್ ಕೊಹ್ಲಿ ಕೂಡ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದ ಆರಂಭಿಕ ವರ್ಷಗಳಲ್ಲಿ ತೆಂಡೂಲ್ಕರ್ ಅವರ ಒಡನಾಟ ಮತ್ತು ಮಾರ್ಗದರ್ಶನ ಪಡೆದಿದ್ದರು. ಇತ್ತೀಚೆಗಷ್ಟೇ ತೆಂಡೂಲ್ಕರ್ ತಮ್ಮ ನಿವೃತ್ತಿಯ ಭಾವನಾತ್ಮಕ ಕ್ಷಣವನ್ನು ನೆನಪಿಸಿಕೊಂಡಿದ್ದು,ಕೊಹ್ಲಿ ಅವರು ತನ್ನ ದಿವಂಗತ ತಂದೆ ನೀಡಿದ ಪವಿತ್ರ ದಾರವನ್ನು ಸಚಿನ್ ಅವರಿಗೆ ಉಡುಗೊರೆ ಯಾಗಿ ನೀಡಿದ್ದರು.

ತೆಂಡೂಲ್ಕರ್ ಯೂಟ್ಯೂಬ್ ಚಾನೆಲ್‌ನಲ್ಲಿ ಅಮೆರಿಕದ ಪತ್ರಕರ್ತ ಗ್ರಹಾಂ ಬೆನ್‌ಸಿಂಗರ್‌ಗೆ ನೀಡಿದ ಸಂದರ್ಶನದಲ್ಲಿ, ನಾನೊಬ್ಬನೇ ಒಂದು ಮೂಲೆಯಲ್ಲಿ ತಲೆಯ ಮೇಲೆ ಟವೆಲ್ ಹಾಕಿಕೊಂಡು ಕುಳಿತು, ಕಣ್ಣೀರು ಒರೆಸುತ್ತಿದ್ದೆ ಮತ್ತು ನಾನು ನಿಜವಾಗಿಯೂ ಭಾವುಕನಾಗಿದ್ದೆ. ಆ ಸಮಯದಲ್ಲಿ, ವಿರಾಟ್ ನನ್ನ ಬಳಿಗೆ ಬಂದರು ಮತ್ತು ಅವರ ತಂದೆ ಅವರಿಗೆ ನೀಡಿದ ಪವಿತ್ರ ದಾರವನ್ನು ನನಗೆ ನೀಡಿದರು” ಎಂದು ಹೇಳಿಕೊಂಡಿದ್ದಾರೆ.

ತಮ್ಮ ಉಡುಗೊರೆ ಆಯ್ಕೆಯ ಹಿಂದಿನ ಕಾರಣವನ್ನು ಕೊಹ್ಲಿ ವಿವರಿಸಿದ್ದು, “ನಾವು ಸಾಮಾನ್ಯವಾಗಿ ನಮ್ಮ ಮಣಿಕಟ್ಟಿನ ಸುತ್ತಲೂ ದಾರಗಳನ್ನು ಧರಿಸುತ್ತೇವೆ. ಭಾರತದಲ್ಲಿ, ಬಹಳಷ್ಟು ಜನರು ಧರಿಸುತ್ತಾರೆ. ನನ್ನ ತಂದೆ  ಒಂದನ್ನು ಕೊಟ್ಟಿದ್ದರು ಅದನ್ನು ನನ್ನ ಚೀಲದಲ್ಲಿ ನನ್ನೊಂದಿಗೆ ಇಡುತ್ತಿದ್ದೆ. ನಂತರ ನಾನು ಯೋಚಿಸಿದೆ, ನನ್ನ ಬಳಿ ಇರುವ ಅತ್ಯಮೂಲ್ಯವಾದ ವಸ್ತು ಅದು, ನಾನು ಸಚಿನ್ ಅವರಿಗೆ ಹೆಚ್ಚು ಬೆಲೆಬಾಳುವ ಯಾವುದನ್ನೂ ನೀಡಲು ಸಾಧ್ಯವಿಲ್ಲ ಮತ್ತು ಅವರು ನನಗೆ ಎಷ್ಟು ಸ್ಫೂರ್ತಿ ನೀಡಿದ್ದಾರೆ. ಹಾಗಾಗಿ ಚಿಕ್ಕದಾದ ಉಡುಗೊರೆ ಕೊಟ್ಟಿ ದ್ದೇನೆ ಎಂದು ಹೇಳಿದ್ದಾರೆ.

ಕೊಹ್ಲಿಗೆ ಆ ಉಡುಗೊರೆಯನ್ನು ಹಿಂದಿರುಗಿಸಬೇಕೆಂದು ನಾನು ಭಾವಿಸಿದೆ. ಅದನ್ನು ಸ್ವಲ್ಪ ಸಮಯದವರೆಗೆ ಇಟ್ಟುಕೊಂಡ ನಂತರ ಅವನಿಗೆ ಹಿಂತಿರುಗಿಸಿದ್ದೇನೆ. ಇದು ಬೆಲೆ ಕಟ್ಟಲಾಗದ್ದು,  ಇದು ನಿಮ್ಮೊಂದಿಗೆ ಇರಬೇಕೆ ಹೊರತು ಬೇರೆ ಯಾರೊಂದಿಗೂ ಅಲ್ಲ ಎಂದು ಹೇಳಿದ್ದೆ. ನಿಜವಾಗಿ ಇದು ಒಂದು ಭಾವನಾತ್ಮಕ ಕ್ಷಣವಾಗಿತ್ತು, ಅದು ನನ್ನ ನೆನಪಿನಲ್ಲಿ ಯಾವಾಗಲೂ ಇರುತ್ತದೆ ಎಂದು ಸಚಿನ್ ಹೇಳಿದ್ದಾರೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.