ಪಂಜಾಬ್ ನಲ್ಲಿ ಶಿರೋಮಣಿ ಅಕಾಲಿದಳ, ಬಿಎಸ್ಪಿ ಮೈತ್ರಿಕೂಟ ಅಧಿಕಾರಕ್ಕೇರಲಿದೆ; ಮಾಯಾವತಿ
ಕೇವಲ ಕೆಲವೇ ಪಕ್ಷಗಳು ಮಾತ್ರ ದೇಶಕ್ಕಾಗಿ ದೀರ್ಘಕಾಲ ಸೇವೆ ಸಲ್ಲಿಸಿವೆ.
Team Udayavani, Dec 14, 2021, 3:38 PM IST
ಲಕ್ನೋ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳ(ಎಸ್ ಎಡಿ) ಮತ್ತು ಬಹುಜನ್ ಸಮಾಜ್ ಪಕ್ಷ (ಬಿಎಸ್ಪಿ) ಮೈತ್ರಿ ಮೂಲಕ ಪೂರ್ಣ ಪ್ರಮಾಣದ ಬಹುಮತದೊಂದಿಗೆ ಪಂಜಾಬ್ ನಲ್ಲಿ ಅಧಿಕಾರಕ್ಕೇರುವ ವಿಶ್ವಾಸ ಇದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಭರವಸೆ ವ್ಯಕ್ತಪಡಿಸಿದ್ದಾರೆ.
ಶಿರೋಮಣಿ ಅಕಾಲಿದಳ ಪಕ್ಷದ ಶತಮಾನೋತ್ಸವ ಸಂಭ್ರಮಕ್ಕೆ ಮಾಯಾವತಿ ಈ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ. ಕೇವಲ ಕೆಲವೇ ಪಕ್ಷಗಳು ಮಾತ್ರ ದೇಶಕ್ಕಾಗಿ ದೀರ್ಘಕಾಲ ಸೇವೆ ಸಲ್ಲಿಸಿವೆ. ಭಾರತದಲ್ಲಿನ ಎರಡನೇ ಅತೀ ಹಳೆಯ ಪಕ್ಷವಾಗಿದೆ ಎಂದರು.
ಪಂಜಾಬ್ ನಲ್ಲಿ ಶಿರೋಮಣಿ ಅಕಾಲಿದಳ ಮತ್ತು ಬಿಎಸ್ಪಿ ಮೈತ್ರಿಯಿಂದ ಅಧಿಕಾರದ ಗದ್ದುಗೆ ಏರುವ ನಿರೀಕ್ಷೆ ಇದೆ ಎಂದು ಮಾಯಾವತಿ ಹೇಳಿದರು. ಇತ್ತೀಚೆಗಷ್ಟೇ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್ ಬೀರ್ ಸಿಂಗ್ ಬಾದಲ್, ಒಂದು ವೇಳೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೈತ್ರಿ ಪಕ್ಷವಾದ ಬಿಎಸ್ಪಿಗೆ ಉಪ ಮುಖ್ಯಮಂತ್ರಿ ಹುದ್ದೆ ಕೊಡುವುದಾಗಿ ಘೋಷಿಸಿದ್ದರು.
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಸಾಲು, ಸಾಲು ಘೋಷಣೆ, ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಹೊಸ ಯೋಜನೆಯನ್ನು ಘೋಷಿಸುತ್ತಿದೆ. ಆದರೆ ಇದರಿಂದ ಯಾವುದೇ ಲಾಭವಾಗುವುದಿಲ್ಲ ಎಂದು ಮಾಯಾವತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ