ಸರ್ಕಾರದ ಹಿಡಿತದಿಂದ ದೇಗುಲ ಮುಕ್ತಿಗೊಳಿಸಿ: ಸದ್ಗುರು
ಈಶಾ ಫೌಂಡೇಶನ್ನಿಂದ 100 ಟ್ವೀಟ್ಗಳ ಅಭಿಯಾನ
Team Udayavani, Mar 26, 2021, 11:50 PM IST
ಚೆನ್ನೈ: ತಮಿಳುನಾಡಿನಲ್ಲಿ ದೇಗುಲ ಆಡಳಿತ ನಿರ್ವಹಣೆ ಅಧಿಕಾರವನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ, ಭಕ್ತರಿಗೆ ಹಸ್ತಾಂತರಿಸಬೇಕು ಎಂದು ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗೀ ವಾಸುದೇವ್ ಒತ್ತಾಯಿಸಿದ್ದಾರೆ.
ಈ ಕುರಿತು 100 ಟ್ವೀಟ್ಗಳ ಅಭಿಯಾನ ನಡೆಸಿರುವ ಅವರು, ತಮಿಳುನಾಡು ಸಿಎಂ ಎಡಪ್ಪಾಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಎಂ.ಕೆ. ಸ್ಟಾಲಿನ್, ಸೂಪರ್ಸ್ಟಾರ್ ರಜನೀಕಾಂತ್ ಅವರಿಗೆ ಟ್ವೀಟ್ಗಳನ್ನು ಟ್ಯಾಗ್ ಮಾಡಿದ್ದಾರೆ.
ಟ್ವೀಟ್ ಗಳಲ್ಲಿ ಏನಿದೆ?: ಮುಖ್ಯವಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಕೋರ್ಟ್ನಲ್ಲಿ ಈ ಹಿಂದೆ ಸಲ್ಲಿಸಿದ್ದ ಅಂಕಿ-ಅಂಶಗಳನ್ನು ಸದ್ಗುರು ಮುಂದಿಟ್ಟಿದ್ದಾರೆ. “ತಮಿಳುನಾಡಿನಲ್ಲಿ 11,999 ದೇಗುಲಗಳು ನಿತ್ಯ ಒಂದೂ ಪೂಜೆ ಇಲ್ಲದೆ ಅಳಿವಿನಂಚಿನಲ್ಲಿವೆ. 34 ಸಾವಿರ ದೇಗುಲಗಳು ವಾರ್ಷಿಕವಾಗಿ 10 ಸಾವಿರ ರೂ. ಆದಾಯವನ್ನೂ ಹೊಂದಿಲ್ಲ. 37 ಸಾವಿರ ದೇಗುಲಗಳಲ್ಲಿ ಪೂಜೆ, ನಿರ್ವಹಣೆ, ಭದ್ರತೆಗಾಗಿ ಒಬ್ಬ ವ್ಯಕ್ತಿಯನ್ನು ನೇಮಿಸಿಕೊಂಡಿವೆ’ ಎಂದು ತಮಿಳಿನಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ :ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್ನ ಐತಿಹಾಸಿಕ ದುರಭ್ಯಾಸ : HDK
“ಸರ್ಕಾರದ ನಿಯಂತ್ರಣದಲ್ಲಿರುವ ಬಹುತೇಕ ದೇಗುಲಗಳು ಸೂಕ್ತ ನಿರ್ವಹಣೆ ಇಲ್ಲದೆ ದುಃಸ್ಥಿತಿ ತಲುಪಿವೆ. ದೇಗುಲಗಳು ತಮಿಳು ಸಂಸ್ಕೃತಿಯ ಮೂಲ ಸೆಲೆಗಳು. ತಮ್ಮ ಬದುಕಿಗಿಂತ ದೇಗುಲಕ್ಕೆ ಮಹತ್ವ ಕೊಡುವ ಭಕ್ತರಿಗೆ ದೇಗುಲ ನಿರ್ವಹಣೆಯನ್ನು ಸರ್ಕಾರ ಹಸ್ತಾಂತರಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ