ಗೋವಾ ಇಫಿ ಸಿನಿಮೋತ್ಸವದಲ್ಲಿ ಕನ್ನಡದ “ಡೊಳ್ಳು ಚಿತ್ರ”;ನಗರೀಕರಣ ಇಡೀ ಜಗತ್ತಿನ ಸಮಸ್ಯೆ

ಬದುಕಿನ ನಿರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ವಲಸೆ ನಿರಂತರವಾಗಿ ನಡೆಯುತ್ತಿದೆ.

Team Udayavani, Nov 24, 2021, 9:50 AM IST

ಗೋವಾ ಇಫಿ ಸಿನಿಮೋತ್ಸವದಲ್ಲಿ ಕನ್ನಡದ “ಡೊಳ್ಳು ಚಿತ್ರ”;ನಗರೀಕರಣ ಇಡೀ ಜಗತ್ತಿನ ಸಮಸ್ಯೆ

ಪಣಜಿ:ನಗರೀಕರಣ ನಮ್ಮನ್ನು ನಮ್ಮ ಬೇರುಗಳಿಂದ ಬೇರ್ಪಡಿಸುತ್ತಿದೆ ಎನ್ನುತ್ತಾರೆ ಸಾಗರ್ ಪುರಾಣಿಕ್ ಬದುಕಿನ ಜೀವನಮಟ್ಟ ಸುಧಾರಣೆಯ ಶೋಧನೆಯಲ್ಲಿ ನಮ್ಮ ಪ್ರದಾಯಗಳನ್ನು,ಬೇರುಗಳನ್ನು ಮರೆಯುತ್ತಿದ್ದೇವೆ ಎಂಬುದು ಚಲನಚಿತ್ರ ನಿರ್ದೇಶಕ ಸಾಗರ್ ಪುರಾಣಿಕ್ ಅಭಿಪ್ರಾಯ.

ಅವರ ನಿರ್ದೇಶನದ ‘ಡೊಳ್ಳು’ ಚಲನಚಿತ್ರ ಭಾರತೀಯ ಅಂತಾರಾಷ್ಟ್ರೀಯ ಸಿನಿಮೋತ್ಸವ (ಇಫಿ) ದಲ್ಲಿಚೊಚ್ಚಲ ನಿರ್ದೇಶನದ ವಿಭಾಗದಲ್ಲಿ ಪ್ರಶಸ್ತಿಗಾಗಿ ಸ್ಪರ್ಧಿಸುತ್ತಿದೆ. ಇದರೊಂದಿಗೆ ಈ ವರ್ಷ ಭಾರತೀಯ ಪನೋರಮಾ ವಿಭಾಗದಲ್ಲಿ ಆಯ್ಕೆಗೊಂಡ ನಾಲ್ಕು ಕನ್ನಡ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ.

ಮಾಧ್ಯಮಗೋಷ್ಠಿಯಲ್ಲಿ ತಮ್ಮ ಚಿತ್ರದ ಕುರಿತು ವಿವರಿಸಿದ ಸಾಗರ್, ‘ನನ್ನ ಚಿತ್ರದ ಮೂಲಕ ನಗರಗಳ ಅಭಿವೃದ್ಧಿ, ನಗರೀಕರಣ ಹೇಗೆ ನಮ್ಮ ಜಾನಪದ ಕಲೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಹೇಳಲು ಪ್ರಯತ್ನಿಸಿದ್ದೇನೆ. ನಗರೀಕರಣ ಇಡೀ ಜಗತ್ತಿನ ಸಮಸ್ಯೆ. ಅದು ಕರ್ನಾಟಕವನ್ನೂ ಬಿಟ್ಟಿಲ್ಲ. ಅತ್ಯುತ್ತಮ ಬದುಕಿನ ನಿರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ವಲಸೆ ನಿರಂತರವಾಗಿ ನಡೆಯುತ್ತಿದೆ. ಇದು ಕೆಟ್ಟದು ಎಂದು ಹೇಳಲಾರೆ. ಸಂದರ್ಭದ ಅನಿವಾರ್ಯತೆ ಇರಬಹುದು. ಆದರೆ ಈ ಪ್ರಕ್ರಿಯೆಯಲ್ಲಿ ನಾವು ನಮ್ಮ ಬೇರುಗಳನ್ನು ಮರೆಯಬಾರದು ಎಂಬುದಷ್ಟೇ ನನ್ನ ಆಗ್ರಹ’ಎಂದರು ಸಾಗರ್.

‘ನನ್ನ ದೃಷ್ಟಿಯಲ್ಲಿ ಒಂದು ಕಲೆ ನೋಡ ನೋಡುತ್ತಿದ್ದಂತೆ ನಾಶವಾಗದು. ಯಾಕೆಂದರೆ, ಸಾವಿರಾರು ಮಂದಿ ಅದನ್ನು ಉಳಿಸುವತ್ತ, ಸಂರಕ್ಷಿಸುವತ್ತ, ಬೆಳೆಸುವತ್ತ ಪ್ರಯತ್ನಿಸುತ್ತಿರುತ್ತಾರೆ. ಯುವಜನರು ಹೆಚ್ಚು ಅದರೊಳಗೆ ತೊಡಗಿಸಿಕೊಳ್ಳದ ಕಾರಣ ಜನಪ್ರಿಯತೆ ಕೊಂಚ ಕಡಿಮೆಯಾಗಬಹುದಷ್ಟೇ’ ಎಂಬುದು ಅವರ ಅಭಿಪ್ರಾಯ.

ನನ್ನ ಈ ಸಿನಿಮಾದೊಂದಿಗೆ ಹೇಳಲು ಇಚ್ಛಿಸಿರುವ ಮತ್ತೊಂದು ಸಂಗತಿಯೆಂದರೆ, ‘ಕಲೆ ಎಂಬುದಕ್ಕೆ ಯಾವುದೇ ನಿಯಮಗಳಿಲ್ಲ. ಅದನ್ನು ಸಮಾಜವೂ ನಿರ್ದೇಶಿಸಲಾರದು’ ಎಂಬುದನ್ನು ಎಂದು ತಿಳಿಸಿದ ಸಾಗರ್, ಈ ಸಿನಿಮಾದಲ್ಲಿ ನಾನು ಪ್ರಯೋಗಶೀಲತೆಗೆ ಪ್ರಯತ್ನಿಸಿಲ್ಲ. ಹಳೆಯ ನಿರೂಪಣಾ ಕ್ರಮವನ್ನೇ ಬಳಸಿ ಸಾವಯವ ರೀತಿಯಲ್ಲಿ ಹೇಳಲು ಪ್ರಯತ್ನಿಸಿದ್ದೇನೆ. ತಾಂತ್ರಿಕವಾಗಿ ಕೆಲವೊಂದು ಸವಾಲುಗಳಿತ್ತು ಎಂದು ತಮ್ಮ ಸಿನಿಮಾ ರೂಪಿಸಿದ ಬಗೆಯ ಕುರಿತು ವಿವರಿಸಿದರು.

ನನ್ನ ಸಿನಿಮಾ ಸಾಗುವುದು ಕಥಾನಾಯಕನ ದೃಷ್ಟಿಕೋನದಿಂದಲೇ. ಪ್ರಮುಖ ಸವಾಲು ಎನಿಸಿದ್ದು ಕಥೆಯ ನಿರೂಪಣೆಯಲ್ಲಿ. ನಾವು ವೃತ್ತಿಪರ ಡೊಳ್ಳು ಕುಣಿತದ ಕಲಾವಿದರಿಗೆ ನಟನೆಯನ್ನು ಹೇಳಿಕೊಡಬೇಕಿತ್ತು. ಹಾಗೆಯೇ ವೃತ್ತಿಪರ ಕಲಾವಿದರಿಗೆ ಡೊಳ್ಳಿನ ಕುಣಿತದ ಹೆಜ್ಜೆಯನ್ನು ಅಭ್ಯಾಸ ಮಾಡಿಸಬೇಕಿತ್ತು ಎಂದು ಹೇಳಿದರು ಸಾಗರ್.

ಈ ಚಿತ್ರವನ್ನು ಕನ್ನಡ ಚಿತ್ರ ನಿರ್ದೇಶಕ ಪವನ್ ಒಡೆಯರ್ ಮತ್ತು ಅಪೇಕ್ಷಾ ನಿರ್ಮಿಸಿದ್ದಾರೆ. ಡೊಳ್ಳು ಸಿನಿಮಾ ಜಾನಪದ ಕಲೆಯ ಉಳಿವಿನ ಅಗತ್ಯ ಮತ್ತು ನಗರೀಕರಣದ ಪರಿಣಾಮವನ್ನು ಕುರಿತು ಹೇಳುವ ಚಲನಚಿತ್ರ. ಕಥಾನಾಯಕ ತನ್ನ ಗೆಳೆಯರೊಂದಿಗೆ ಹಳ್ಳಿಯಲ್ಲಿ ಒಂದು ಡೊಳ್ಳು ಕುಣಿತದ ತಂಡವನ್ನು ಕಟ್ಟಿರುತ್ತಾನೆ. ಊರಿನ ದೇವರ ಜಾತ್ರೆಗೆ ಡೊಳ್ಳು ಕುಣಿತ ನಡೆಯಬೇಕಾದದ್ದು ಸಂಪ್ರದಾಯ. ಈ ಮಧ್ಯೆ ತಂಡದ ಒಬ್ಬ ಸದಸ್ಯ ನಗರವೊಂದರಲ್ಲಿ ಕೆಲಸವಾಗಿ, ಮದುವೆ ನಿಗದಿಯಾಗಿರುತ್ತದೆ.

ಆದರೆ ಉದ್ಯೋಗ ರದ್ದಾದಾಗ ಮದುವೆಯೂ ರದ್ದಾಗುತ್ತದೆ. ಈ ಹಿನ್ನೆಲೆಯಲ್ಲಿ ಅವನು ಹತಾಶಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಇದರ ಜತೆಯಲ್ಲೇ ಡೊಳ್ಳು ಕುಣಿತದಿಂದ ಹೊಟ್ಟೆ ಹೊರೆಯದು ಎಂದೆನಿಸಿ ಉಳಿದ ಸದಸ್ಯರೆಲ್ಲರೂ ನಗರದತ್ತ ಮುಖ ಮಾಡುತ್ತಾರೆ. ಊರ ಜಾತ್ರೆಗೆ ಕಥಾ ನಾಯಕ ಅವರೆಲ್ಲರನ್ನೂ ಕರೆತರುವ, ಡೊಳ್ಳು ಕುಣಿತದ ಸಂಪ್ರದಾಯ ಮುಂದುವರಿಸುವ ಪ್ರಯತ್ನ ವಿಫಲವಾಗುತ್ತದೆ. ಆಗ ಊರಿನ ಸದಸ್ಯರು ಜತೆಗೂಡಿ ಸಂಪ್ರದಾಯ ಮುಂದುವರಿಸುತ್ತಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.