ಸಜೀಪಪಡು ಗ್ರಾಮ ಪಂಚಾಯತ್‌ ಕಟ್ಟಡ ಕಾಮಗಾರಿ ಅಂತಿಮ ಹಂತದಲ್ಲಿ


Team Udayavani, Mar 4, 2021, 4:10 AM IST

ಸಜೀಪಪಡು ಗ್ರಾಮ ಪಂಚಾಯತ್‌ ಕಟ್ಟಡ ಕಾಮಗಾರಿ ಅಂತಿಮ ಹಂತದಲ್ಲಿ

ಬಂಟ್ವಾಳ: ಕಳೆದ ಅವಧಿಯಲ್ಲೇ ಪೂರ್ಣಗೊಂಡು ಉದ್ಘಾಟನೆಗೊಳ್ಳಬೇಕಿದ್ದ 2015ರಲ್ಲಿ ಅಸ್ತಿತ್ವಕ್ಕೆ ಬಂದ ಸಜೀಪಪಡು ಗ್ರಾಮ ಪಂಚಾಯತ್‌ನ ನೂತನ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇನ್ನೂ 10-15 ದಿನಗಳ ಕಾಮಗಾರಿ ನಡೆದು ಮುಂದಿನ ತಿಂಗಳು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.

ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾ ಯತ್‌ಗಳನ್ನು ಪುನರ್‌ ವಿಂಗಡಿಸಲು ಮಾಜಿ ಶಾಸಕ ಎಸ್‌.ಜಿ.ನಂಜಯ್ಯನಮಠ ನೇತೃತ್ವದ ವರದಿಯ ಆಧಾರದಲ್ಲಿ 2015ರಲ್ಲಿ ಸರಕಾರವು ರಾಜ್ಯದಲ್ಲಿ 439 ಗ್ರಾ.ಪಂ.ಗಳನ್ನು ರಚಿಸಲಾಗಿತ್ತು.

ಅದರಂತೆ ಬಂಟ್ವಾಳ ತಾಲೂಕಿನಲ್ಲಿ 12 ಗ್ರಾ.ಪಂ.ಗಳು ಅಸ್ತಿತ್ವಕ್ಕೆ ಬಂದಿದ್ದವು. ಅವುಗಳಲ್ಲಿ ಇರ್ವತ್ತೂರು, ಕಳ್ಳಿಗೆ, ಅಮ್ಮುಂಜೆ, ಅರಳ, ಬೋಳಂತೂರು, ಸಾಲೆತ್ತೂರು, ಬರಿಮಾರು, ಮಣಿ ನಾಲ್ಕೂರು, ಮಾಣಿಲ, ಪೆರಾಜೆ, ನೆಟ್ಲಮುಟ್ನೂರು ಗ್ರಾ.ಪಂ.ಗಳ ಕಟ್ಟಡ ಉದ್ಘಾಟನೆಗೊಂಡಿತ್ತು.

ಜೂನ್‌ನಲ್ಲಿ ಮೇಲ್ಛಾವಣಿ ಪೂರ್ಣ
ಹಲವು ಕಾರಣಗಳಿಂದ ಸಜೀಪಪಡು ಗ್ರಾ.ಪಂ. ಕಟ್ಟಡದ ಕಾಮಗಾರಿಯ ಪ್ರಾರಂ ಭವೇ ವಿಳಂಬವಾಗಿತ್ತು. ಕಳೆದ ವರ್ಷ ಜೂನ್‌ನಲ್ಲಿ ಕಟ್ಟಡದ ಮೇಲ್ಛಾವಣಿಯ ಕಾಮಗಾರಿ ಪೂರ್ಣಗೊಂಡು, ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗಿತ್ತು. ಆದರೆ ಕಾಮಗಾರಿ ಮಾತ್ರ ಬಹಳಷ್ಟು ತಿಂಗಳು ವಿಳಂಬವಾಗಿದೆ.

ಪ್ರತಿ ಗ್ರಾ.ಪಂ.ಗಳ ಆಡಳಿತ ಮಂಡಳಿಗಳು ತಮ್ಮದೇ ಅವಧಿಯಲ್ಲಿ ಹೊಸ ಕಟ್ಟಡ ಉದ್ಘಾಟನೆಗೊಳ್ಳಬೇಕು ಎಂಬ ಯೋಜನೆ ಹಾಕಿದ್ದರೆ, ಸಜೀಪಪಡು ಗ್ರಾ.ಪಂ.ನ ಹಿಂದಿನ ಆಡಳಿತ ಮಂಡಳಿಗೆ ಅದು ಸಾಧ್ಯವಾಗಿರಲಿಲ್ಲ. ಹಲವು ಕಾರಣಗಳಿಂದ ಗೊಂದಲ ಉಂಟಾಗಿ ವಿಳಂಬವಾಗಿತ್ತು. ಜತೆಗೆ ಕಟ್ಟಡದ ಲಿಕೇಜ್‌ ಸಮಸ್ಯೆಯೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿತ್ತು. ಇದೀಗ ಹೊಸ ಆಡಳಿತ ಮಂಡಳಿಗೆ ಪ್ರಾರಂಭದಲ್ಲೇ ಹೊಸ ಕಟ್ಟಡ ಉದ್ಘಾಟನೆಯ ಅವಕಾಶ ದೊರಕಿದೆ.

ಹೊಸದಾಗಿ ಅಸ್ತಿತ್ವಕ್ಕೆ ಬಂದ ಗ್ರಾ.ಪಂ.ಗಳಿಗೆ ಸರಕಾರವು ತಲಾ 20 ಲಕ್ಷ ರೂ.ಅನುದಾನ ನೀಡಿತ್ತು. ಜತೆಗೆ ನರೇಗಾ, 14ನೇ ಹಣಕಾಸು ಯೋಜನೆ ಸೇರಿ ಒಟ್ಟು ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಿತ್ತು. ಕೆಲವೊಂದು ಗ್ರಾ.ಪಂ.ಗಳು ಸರಕಾರದ ಅನುದಾನದಿಂದಲೇ ಕಟ್ಟಡ ಪೂರ್ಣಗೊಳಿಸಿದ್ದವು.

10-15 ದಿನಗಳ ಕಾಮಗಾರಿ
ಹೊಸ ಕಟ್ಟಡದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಫ್ಲೋರಿಂಗ್‌ನ ಟೈಲ್ಸ್‌ ಕೂಡ ಅಳವಡಿಸಲಾಗಿದೆ. ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಇನ್ನು ಸುಮಾರು 10-15 ದಿನಗಳ ಕಾಮಗಾರಿ ಬಾಕಿ ಇದ್ದು, ಉಳಿದಂತೆ ಎಲ್ಲ ಕಾಮಗಾರಿಗಳು ಪೂರ್ಣಗೊಂಡಿವೆ.
-ತಾರಾನಾಥ ಸಾಲ್ಯಾನ್‌ ಪಿ., ಎಇಇ, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ, ಬಂಟ್ವಾಳ

ಸಭೆಯಲ್ಲಿ ನಿರ್ಧಾರ
ನೂತನ ಕಟ್ಟಡದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿ ನಡೆಯುತ್ತಿದೆ. ಉದ್ಘಾಟನೆಗೆ ಸಂಬಂಧಿಸಿದಂತೆ ಮುಂದಿನ ಸಾಮಾನ್ಯ ಸಭೆಯಲ್ಲಿ ದಿನಾಂಕ ನಿರ್ಧರಿಸಬೇಕಿದೆ ಎಂದು ಅಭಿವೃದ್ಧಿ ಅಧಿಕಾರಿ ಶ್ವೇತಾ ಕೆ.ವಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.