ವಾರದೊಳಗೆ ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ; ಸಂಧಾನ ಸಭೆ ಯಶಸ್ವಿ
108 ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಎಂದಿನಂತೆ ಕೆಲಸಕ್ಕೆ ಹಾಜರಾಗಲು ನಿರ್ಧಾರ
Team Udayavani, Oct 7, 2022, 9:45 PM IST
ಬೆಂಗಳೂರು: ಆರೋಗ್ಯ ಇಲಾಖೆ ಆಯುಕ್ತರು 108 ಆ್ಯಂಬುಲೆನ್ಸ್ ಸಿಬ್ಬಂದಿ ಹಾಗೂ ಜಿವಿಕೆ ನಡುವೆ ಶುಕ್ರವಾರ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ವಾರದೊಳಗೆ ವೇತನ ಕೊಡಿಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಭರವಸೆ ಕೊಟ್ಟ ಬೆನ್ನಲ್ಲೇ ಕೆಲಸಕ್ಕೆ ಹಾಜರಾಗಲು ಆ್ಯಂಬುಲೆನ್ಸ್ನ ಆರೋಗ್ಯ ಸಿಬ್ಬಂದಿ ಮುಂದಾಗಿದ್ದಾರೆ.
ಆ್ಯಂಬುಲೆನ್ಸ್ ಸಿಬ್ಬಂದಿಗೆ 2 ತಿಂಗಳಿನಿಂದ ವೇತನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ 108 ಆ್ಯಂಬುಲೆನ್ಸ್ ನೌಕರರ ಸಂಘದ ಮುಖಂಡರು ಹಾಗೂ ಜಿವಿಕೆ ಸಂಸ್ಥೆಯ ಕೆಲ ಅಧಿಕಾರಿಗಳು ಪಾಲ್ಗೊಂಡಿದ್ದರು. ಸರ್ಕಾರದಿಂದ ಬಿಡುಗಡೆ ಮಾಡಲಾದ ಹಣವನ್ನು ಆ್ಯಂಬುಲೆನ್ಸ್ ನಿರ್ವಹಣೆಯಂತಹ ಕೆಲಸಕ್ಕೆ ಬಳಸಲಾಗಿದೆ. ಈ ಪೈಕಿ ಉಳಿಕೆಯಾದ 4 ಕೋಟಿ ರೂ. ಡಿಸೆಲ್ಗೆ ಬೇಕಾಗುತ್ತದೆ. ಸಿಬ್ಬಂದಿ ವೇತನಕ್ಕೆ ಇನ್ನೂ 12 ರಿಂದ 16 ಕೋಟಿ ರೂ. ಬೇಕಾಗುತ್ತದೆ ಎಂದು ಜಿವಿಕೆ ಸಂಸ್ಥೆಯ ಸಿಬ್ಬಂದಿ ವಿವರಿಸಿದರು.
ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ವಾರದೊಳಗೆ ವೇತನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಸಮಸ್ಯೆ ಪರಿಹರಿಸುವ ಆಶ್ವಾಸನೆ: ಸದ್ಯ ಕೆಲಸ ನಿರ್ವಹಿಸುತ್ತಿರುವ 35 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕದಿರುವುದೂ ಸೇರಿ ಕೆಲ ಸಮಸ್ಯೆಗಳನ್ನು ಆಯುಕ್ತರಿಗೆ ಮನವರಿಕೆ ಮಾಡಿದ್ದೇವೆ. ನಮ್ಮ ಎಲ್ಲ ಸಮಸ್ಯೆ ಬಗೆಹರಿಸುವುದಾಗಿ ಆಯುಕ್ತರು ಆಶ್ವಾಸನೆ ಕೊಟ್ಟಿದ್ದಾರೆ ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ “ಉದಯವಾಣಿ’ಗೆ ತಿಳಿಸಿದ್ದಾರೆ.
ಏನಿದು ಪ್ರಕರಣ ?
ಜಿವಿಕೆ ಕಂಪನಿಯಡಿ ಕೆಲಸ ಮಾಡುವ 108 ಆ್ಯಂಬುಲೆನ್ಸ್ ಸಿಬ್ಬಂದಿಗೆ 2 ತಿಂಗಳಿಂದ ಸಂಬಳ ಆಗಿಲ್ಲ. ಇದರಿಂದ ಆಕ್ರೋಶಗೊಂಡು ಸಮಸ್ಯೆ ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು. ಇಲ್ಲದಿದ್ದರೆ ಸಾಮೂಹಿಕವಾಗಿ ಎಲ್ಲ ಸಿಬ್ಬಂದಿ ರಜೆ ಹಾಕಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ಕೊಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ