ಗಾಂಜಾ ಮಾರಾಟ : ಮೂವರು ಪೊಲೀಸ್ ವಶ
Team Udayavani, Mar 30, 2023, 5:37 AM IST
ಮಡಿಕೇರಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (27)ಅನಾರ್ ಹುಸೈನ್ (37) ಜಹೀರ್ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 2.150ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷರಾದ ಸುಂದರ್ ರಾಜ್ ನಿರ್ದೇಶನದಂತೆ ಡಿವೈಎಸ್ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್,ಹರಿ ಪ್ರಸನ್ನ, ಮಧುಸೂದನ್,ಎಚ್. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್, ಚಾಲಕ ಆರೀಫ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ