ಕರಾವಳಿ ಪ್ರದೇಶಕ್ಕೆ ಶೀಘ್ರ ಪ್ರತ್ಯೇಕ ಮರಳು ನೀತಿ : ಮುರುಗೇಶ್ ನಿರಾಣಿ
Team Udayavani, Jan 29, 2021, 7:00 PM IST
ವಿಧಾನಸಭೆ:ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ಮರಳು ನೀತಿ ಶೀಘ್ರದಲ್ಲೇ ರೂಪಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದ್ದಾರೆ.
ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಯು.ಟಿ.ಖಾದರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ಮರಳು ನೀತಿ ರೂಪಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಹಿಂದಿನ ಸಚಿವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆಗೂ ಸೂಚಿಸಲಾಗಿದೆ ಎಂದ ಹೇಳಿದರು.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಅನ್ವಯವಾಗುವಂತೆ ಮರಳು ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಜಡ್ ವ್ಯಾಪ್ತಿಯಲ್ಲಿನ ನದಿ ಪಾತ್ರಗಳಲ್ಲಿ 2020-21 ನೇ ಸಾಲಿನಲ್ಲಿ 13 ಮರಳು ದಿಬ್ಬಗಳಲ್ಲಿ ಮರಳು ತೆರವುಗೊಳಿಸಲು ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದಿಂದ ಅನುಮತಿ ನೀಡಲಾಗಿದೆ. 104 ಸಾಂಪ್ರದಾಯಿಕ ಮರಳು ತೆಗೆಯುವ ವ್ಯಕ್ತಿಗಳಿಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಪರವಾನಗಿ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಜುಲೈ 16ರಂದು ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ ಕೆ.ಜಿ.ಎಫ್ -2
ಸಚಿವನಾಗಿ ನಾನು ಜಿಲ್ಲೆಗಳಿಗೆ ಭೇಟಿ ಕೊಟ್ಟಾಗಲೂ ಮರಳಿನ ಅಲಭ್ಯತೆಯಿಂದ ಕಾಮಗಾರಿ ಸ್ಥಗಿತಗೊಂಡಿರುವ ಸಮಸ್ಯೆ ಕೇಳಿ ಬಂದಿದೆ. ಇನ್ಮುಂದೆ ರಾಜ್ಯದ ಯಾವುದೇ ಭಾಗದಲ್ಲೂ ಇಂತಹ ಸಮಸ್ಯೆ ಉಂಟಾಗದಂತೆ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಗುಣಮಟ್ಟದ ಮರಳು ಕಡಿಮೆ ದರದಲ್ಲಿ ಪೂರೈಕೆ ಮಾಡುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಯು.ಟಿ.ಖಾದರ್, ರಾಜ್ಯದ ಬೇರೆಲ್ಲಾ ಪ್ರದೇಶದ ಸಮಸ್ಯೆ ಒಂದೆಡೆಯಾದರೆ ಕರಾವಳಿ ಭಾಗದ ಸಮಸ್ಯೆ ಬೇರೆಯದೇ ಇದೆ. ಅಲ್ಲಿ ಕೇವಲ 6 ತಿಂಗಳು ಮಾತ್ರ ಮರಳು ತೆಗೆಯಲು ಸಾಧ್ಯ. ಮಳೆಗಾಲದಲ್ಲಿ ತೆಗೆಯಲು ಸಾಧ್ಯವಿಲ್ಲ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.
ಬಿಜೆಪಿಯ ರಘುಪತಿ ಭಟ್ ಮಾತನಾಡಿ, ಸಾಂಪ್ರದಾಯಿಕವಾಗಿ ಮುಳುಗಿ ಮರಳು ತೆಗೆಯಲು ಅನುಮತಿ ಬೇಕಾಗಿದೆ. ವಿ.ಎಸ್.ಆಚಾರ್ಯ ಅವರ ಕಾಲದಿಂದಲೂ ಈ ಬೇಡಿಕೆ ಇದ್ದರೂ ಕಾಂಗ್ರೆಸ್ ಸರ್ಕಾರವೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಬಿಜೆಪಿಯ ಕುಮಾರ್ ಬಂಗಾರಪ್ಪ, ಹಿಂದಿನ ಸಚಿವರು ಒಂದು ಹಂತಕ್ಕೆ ತಂದಿಟ್ಟಿದ್ದು ಮತ್ತೆ ಹಿಂದೆ ಹೋಗುವುದು ಬೇಡ. ಈಗಿನ ಸಚಿವರು ಮುಂದೆ ಆಗಬೇಕಾದ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ