ಭೂ ಹಗರಣ: ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ, ಮಧ್ಯರಾತ್ರಿ ರಾವತ್ ಬಂಧನ
ಮುಂಬೈನ ಜೆಜೆ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗಿತ್ತು.
Team Udayavani, Aug 1, 2022, 1:38 PM IST
ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ, ಪಕ್ಷದ ವಕ್ತಾರ ಸಂಜಯ್ ರಾವತ್ ಅವರನ್ನು ಮಧ್ಯರಾತ್ರಿ ಬಂಧಿಸಲಾಗಿದ್ದು, ಇದನ್ನು ವಿರೋಧಿಸಿ ಶಿವಸೇನಾ ಕಾರ್ಯಕರ್ತರು ಸೋಮವಾರ ಮುಂಬಯಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಅಗಲಿದ ಚೇತನ : ಟಿ. ಮೋಹನದಾಸ್ ಪೈ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರ ಸಂತಾಪ
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು, ಶಿವಸೇನಾ ಸಂಸದ ರಾವತ್ ಅವರನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಲೋಕಸಭಾ ಕಲಾಪದಲ್ಲಿ ಕೋಲಾಹಲವೆಬ್ಬಿಸಿರುವ ಘಟನೆ ನಡೆದಿದೆ.
ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಪಿಎಂಎಲ್ ಎ ಕೋರ್ಟ್ ಗೆ ಹಾಜರುಪಡಿಸುವ ಮುನ್ನ ಮುಂಬೈನ ಜೆಜೆ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗಿತ್ತು.
ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಹಾಗೂ ಆಸ್ಪತ್ರೆ ಸುತ್ತಮುತ್ತ 200ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ತನಿಖೆಗೆ ಹಾಜರಾಗಬೇಕೆಂದು ಜಾರಿ ನಿರ್ದೇಶನಾಲಯ ಎರಡು ಬಾರಿ ರಾವತ್ ಗೆ ಸಮನ್ಸ್ ನೀಡಿತ್ತು, ಆದರೆ ಗೈರುಹಾಜರಾಗಿದ್ದರು. ಭಾನುವಾರ ರಾತ್ರಿ ಇ.ಡಿ ಅಧಿಕಾರಿಗಳು ರಾವತ್ ನಿವಾಸದ ಮೇಲೆ ದಾಳಿ ನಡೆಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ