ಶಿವಸೇನಾ ಚಿನ್ಹೆಗಾಗಿ 2,000 ಕೋಟಿಗೂ ಅಧಿಕ ಮೊತ್ತದ ಡೀಲ್: ಸಂಜಯ್ ರಾವತ್ ಗಂಭೀರ ಆರೋಪ
Team Udayavani, Feb 19, 2023, 1:36 PM IST
ಮುಂಬೈ :ಶಿವಸೇನೆಯ ಮೂಲ ಹೆಸರು ಮತ್ತು ಪಕ್ಷದ ಚಿನ್ಹೆಯಾದ ಬಿಲ್ಲು ಮತ್ತು ಬಾಣ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಪಾಲಾದ ಬಳಿಕ ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು ಏಕನಾಥ್ ಶಿಂಧೆ ಮೇಲೆ ಉದ್ಧವ್ ಠಾಕ್ರೆ ಬಣ ಟೀಕಾಪ್ರಹಾರ ನಡೆಸುತ್ತಿದೆ.
ನಿನ್ನೆಯಷ್ಟೇ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಚುನಾವಣಾ ಆಯೋಗ ಮೋದಿಯ ಗುಲಾಮ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಇಂದು ಉದ್ಧವ್ ಬಣದ ಇನ್ನೊಬ್ಬ ನಾಯಕ, ಸಂಸದ ಸಂಜಯ್ ರಾವತ್ ಪಕ್ಷದ ಮೂಲ ಹೆಸರು ಮತ್ತು ಚಿನ್ಹೆಗಾಗಿ ಭಾರೀ ಮೊತ್ತದ ಡೀಲ್ ನಡೆದಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ʻಮೂಲ ಶಿವಸೇನಾ ಹೆಸರು ಮತ್ತು ಪಕ್ಷದ ಬಿಲ್ಲು ಮತ್ತು ಬಾಣದ ಚಿನ್ಹೆಗಾಗಿ 2,000 ಕೋಟಿಗೂ ಅಧಿಕ ಮೊತ್ತದ ಡೀಲ್ ಕುದುರಿದೆʼ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಮುಂಬೈನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ʻನನಗೆ ಖಚಿತ ಮಾಹಿತಿ ಸಿಕ್ಕಿದೆ, ನನಗೆ ವಿಶ್ವಾಸವೂ ಇದೆ. ಇದು ಕೇವಲ ಪ್ರಾಥಮಿಕ ಅಂಕಿ ಅಂಶ ಮಾತ್ರ. ಆದರೆ ಈ ಮಾಹಿತಿ ಶೇ.100 ರಷ್ಟು ನಿಜʼ ಎಂದು ರಾವತ್ ಟ್ವೀಟ್ ಮಾಡಿದ್ಧಾರೆ.
ʻಇದು ದೇಶದ ಇತಿಹಾಸದಲ್ಲೇ ಹಿಂದೆಂದೂ ಕಂಡು ಕೇಳರಿಯದ ಸಂಗತಿ. ಇನ್ನು ಕೆಲವು ಮಾಹಿತಿಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಿದ್ದೇವೆʼ ಎಂದಿದ್ದಾರೆ.
ಇದನ್ನೂ ಓದಿ: ಚುನಾವಣಾ ಆಯೋಗ ಮೋದಿಯ ಗುಲಾಮ: ಉದ್ಧವ್ ಠಾಕ್ರೆ
माझी खात्रीची माहिती आहे….
चिन्ह आणि नाव मिळवण्यासाठी आता पर्यंत 2000 कोटींचा सौदा आणि व्यवहार झाले आहेत…
हा प्राथमिक आकडा आहे आणि 100 टक्के सत्य आहे..
बऱ्याच गोष्टी लवकरच उघड होतील..
देशाच्या इतिहासात असे कधीच घडले नव्हते.. pic.twitter.com/3Siiro6O9b— Sanjay Raut (@rautsanjay61) February 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!