ಸಪ್ತಪದಿ ಸಾಮೂಹಿಕ ವಿವಾಹ ಮತ್ತೆ ಮುಂದಕ್ಕೆ ?
Team Udayavani, Jul 6, 2020, 9:17 PM IST
ಸಾಂದರ್ಭಿಕ ಚಿತ್ರ..
ಬೆಂಗಳೂರು : ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದು ಮಾಡಿಲ್ಲ. ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಈ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಈ ವಾರದೊಳಗೆ ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸೂಚನೆಯನ್ನು ಪಾಲನೆ ಮಾಡಬೇಕಾಗುತ್ತದೆ. ಹೀಗಾಗಿ ಮುಖ್ಯಮಂತ್ರಿಗಳ ಚರ್ಚೆ ನಡೆಸಿದ ನಂತರವೇ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.
ಸಾಮೂಹಿಕ ಕಾರ್ಯಕ್ರಮ ನಡೆಸುವುದಕ್ಕೆ ಆರೋಗ್ಯ ಇಲಾಖೆ ಒಪ್ಪಿಗೆ ಸೂಚಿಸುವುದು ಕಷ್ಟಸಾಧ್ಯ. ಹೀಗಾಗಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಜುಲೈನಲ್ಲೂ ನಡೆಯುವುದು ಅನುಮಾನವಾಗಿದೆ. ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಾದ್ಯಂತ ಅರ್ಜಿ ಆಹ್ವಾನಿಸಲಾಗಿತ್ತು. ಎ ದರ್ಜೆಯ 100 ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲು ಬಗ್ಗೆ ಇಲಾಖೆ ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿತ್ತು. ಲಾಕ್ಡೌನ್ನಿಂದಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಈಗ ಹೊಸ ದಿನಾಂಕ ನಿಗದಿ ಮಾಡುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್