ಸಿಎಂ ರೇಸ್ನಲ್ಲಿ ಸಿದ್ದು- ಡಿಕೆಶಿ ಅಷ್ಟೇ ಅಲ್ಲ ಬಹಳ ಜನ ಇದ್ದಾರೆ: ಸತೀಶ್ ಜಾರಕಿಹೊಳಿ
Team Udayavani, Jan 7, 2021, 6:03 PM IST
ಬಾಗಲಕೋಟೆ : ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು.
ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ ನಮಗೆ ಗೊತ್ತಿಲ್ಲ. ಅದು ನಮ್ಮ ಪಕ್ಷಕ್ಕೆ ಸಂಬಂಧಿಸಿದ ವಿಚಾರವಲ್ಲ. ಯಾರೇ ಸಿಎಂ ಇದ್ದರೂ ನಮ್ಮ ಸಂಘಟನೆ-ಹೋರಾಟ ಮುಂದುವರೆಯುತ್ತದೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲು ಸಂಘಟನೆ ನಡೆಯುತ್ತದೆ ಎಂದರು.
ಕಾಂಗ್ರೇಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದ ರೇಸ್ ನಲ್ಲಿದ್ದಾರೆ ನಿಜ. ಅವರ ಹಿಂದೆ ಇನ್ನೂ ಬಹಳಷ್ಟು ಜನ ಕ್ಯೂನಲ್ಲಿದ್ದಾರೆ. ಅವರು ಆದ ಮೇಲೆ ನಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇವೆ ಎಂದು ತಿಳಿಸಿದರು.
ರಾಜಕೀಯ ಗಿಮಿಕ್ ಬೇಡ
ಎಸ್.ಟಿ ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ನ್ಯಾಯಬದ್ಧವಾಗಿ ಸಿಗಬೇಕು. ಇದು ನಮ್ಮ ಹಕ್ಕು. ಈ ವಿಷಯದಲ್ಲಿ ರಾಜಕೀಯ ಗಿಮಕ್ ನಡೆಯಬಾರದು. ಮೀಸಲಾತಿ ಹೆಚ್ಚಳವಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ರಾಜಿನಾಮೆಯಿಂದ ಯಾವ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ.
-ಸತೀಶ ಜಾರಕಿಹೋಳಿ, ಕಾರ್ಯಾಧ್ಯಕ್ಷ, ಕೆಪಿಸಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್