ಠಾಣೆ ಮುಂದೆ ಸತ್ಯಪಾಲ್ ಮಲಿಕ್ ಧರಣಿ
Team Udayavani, Apr 23, 2023, 7:30 AM IST
ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯ ಪೊಲೀಸ್ ಠಾಣೆ ಎದುರು ಶನಿವಾರ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹಾಗೂ ಅವರ ಬೆಂಬಲಿಗರು ಧರಣಿ ನಡೆಸಿದ್ದಾರೆ. ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದಲ್ಲದೇ, ಠಾಣೆ ಎದುರೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ, ಇದು ನಾಟಕೀಯ ಎಂದು ಕೆಲವರು ಟೀಕಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಮಲಿಕ್ಗೆ ಸಮನ್ಸ್ ನೀಡಿದ್ದ ಮರುದಿನವೇ ಈ ಘಟನೆ ವರದಿಯಾಗಿದೆ.
ದೆಹಲಿಯ ಆರ್ಕೆ ಪುರಂ ಪಾರ್ಕ್ನಲ್ಲಿ ಮಲಿಕ್ ಸಭೆಯೊಂದನ್ನು ಆಯೋಜಿಸಿದ್ದರು. ಅದಕ್ಕೆ ಹರ್ಯಾಣದಿಂದ ಹಲವು ರೈತ ಮುಖಂಡರು ಆಗಮಿಸಿದ್ದರು. ಪಾರ್ಕ್ನಲ್ಲಿ ರೈತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ, ಸಭೆ ಆಯೋಜನೆಗೂ ಮುನ್ನ ಪೊಲೀಸರಿಂದ ಅನುಮತಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪ್ರಶ್ನಿಸಲಾಯಿತು. ಆದರೆ ಮಲಿಕ್ ತಮ್ಮ ಬೆಂಬಲಿಗರ ಜತೆಗೆ ಠಾಣೆಗೆ ಆಗಮಿಸಿ ವಾಗ್ವಾದ ನಡೆಸಿದರು. ಘಟನೆಗೆ ಪ್ರತಿಕ್ರಿಯಿಸಿದ ಪೊಲೀಸರು ತಾವು ಅವರನ್ನು ಬಂಧಿಸಿಲ್ಲ, ಅವರೇ ಸ್ವಯಿಚ್ಛೆಯಿಂದ ಠಾಣೆಗೆ ಬಂದಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ