ಕಚ್ಚಾ ತೈಲ: ಭಾರತಕ್ಕೆ 500 ಕೋಟಿ ಡಾಲರ್‌ ಉಳಿತಾಯ

ರಷ್ಯಾದಿಂದ ಕಚ್ಚಾ ತೈಲ ಖರೀದಿಸಿ, ಸಂಸ್ಕರಿಸಿ ಐರೋಪ್ಯ ರಾಷ್ಟ್ರಗಳಿಗೆ ಮಾರಾಟ

Team Udayavani, May 22, 2023, 7:31 AM IST

CRUDE OIL

ಉಕ್ರೇನ್‌ ವಿರುದ್ಧದ ಯುದ್ಧದ ಕಾರಣದಿಂದಾಗಿ ರಷ್ಯಾ ಕಚ್ಚಾ ತೈಲ ರಫ್ತಿನ ಮೇಲೆ ಐರೋಪ್ಯ ಒಕ್ಕೂಟ(ಇಯು) ನಿರ್ಬಂಧ ವಿಧಿಸಿದೆ. ಇದರಿಂದ ಭಾರತಕ್ಕೆ ಲಾಭವೇ ಆಗಿದೆ. ವರದಿಗಳ ಪ್ರಕಾರ, ರಷ್ಯಾದಿಂದ ಕಚ್ಚಾ ತೈಲ ಆಮದಿನಿಂದ ಕಳೆದ ವರ್ಷ ಭಾರತವು ಬರೋಬ್ಬರಿ 500 ಕೋಟಿ ಡಾಲರ್‌ಗಳನ್ನು ಉಳಿತಾಯ ಮಾಡಿದೆ.

ಹೆಚ್ಚಾಗಿದೆ ಆಮದು ಪ್ರಮಾಣ
ಕಳೆದ ವರ್ಷ ರಷ್ಯಾ ಮೇಲೆ ನಿರ್ಬಂಧ ನಂತರ ಆ ದೇಶದಿಂದ ಕಚ್ಚಾ ತೈಲ ಆಮದನ್ನು ಭಾರತ ತೀವ್ರವಾಗಿ ಹೆಚ್ಚಿಸಿದೆ. ಈ ಮೊದಲಿಗಿಂತ 10 ಪಟ್ಟು ಅಧಿಕ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಭಾರತ ರಷ್ಯಾದಿಂದ ಆಮದು ಮಾಡಿಕೊಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಭಾರತ ಕಚ್ಚಾ ತೈಲ ಖರೀದಿಸಿ, ಅದನ್ನು ಸಂಸ್ಕರಿಸಿ, ನಂತರ ಹೆಚ್ಚಿನ ಲಾಭಕ್ಕೆ ಅದನ್ನು ಐರೋಪ್ಯ ರಾಷ್ಟ್ರಗಳಿಗೆ ಭಾರತ ಮಾರಾಟ ಮಾಡುತ್ತಿದೆ. ಅಲ್ಲದೇ ರಷ್ಯಾದಿಂದ ಕಚ್ಚಾ ತೈಲ ಆಮದು ಮತ್ತು ಐರೋಪ್ಯ ರಾಷ್ಟ್ರಗಳಿಗೆ ಸಂಸ್ಕರಿದ ತೈಲ ಮಾರಾಟದಲ್ಲಿ ತೀವ್ರವಾಗಿ ಏರಿಕೆಯಾಗಿದೆ.

ರಷ್ಯಾ ಮೇಲೆ ನಿರ್ಬಂಧ:
2022ರ ಫೆಬ್ರವರಿಯಲ್ಲಿ ಉಕ್ರೇನ್‌ ವಿರುದ್ಧ ರಷ್ಯಾ ಯುದ್ಧ ಆರಂಭಿಸಿತು. ಇದನ್ನು ವಿರೋಧಿಸಿ ಐರೋಪ್ಯ ಒಕ್ಕೂಟದ ರಾಷ್ಟ್ರಗಳು ಮತ್ತು ಆಸ್ಟ್ರೇಲಿಯಾ ಸೇರಿ ಒಟ್ಟು ಏಳು ರಾಷ್ಟ್ರಗಳು ರಷ್ಯಾ ಕಚ್ಚಾ ತೈಲದ ಮೇಲೆ ನಿರ್ಬಂಧ ವಿಧಿಸಿತು. ಪ್ರತಿ ಬ್ಯಾರೆಲ್‌ ಕಚ್ಚಾ ತೈಲಕ್ಕೆ 60 ಡಾಲರ್‌ ಬೆಲೆಯನ್ನು ನಿಗದಿಪಡಿಸಿದವು. ಅಲ್ಲದೇ ಇದು ಪ್ರತಿ ಬ್ಯಾರೆಲ್‌ಗೆ 60 ಡಾಲರ್‌ಗಿಂತ ಹೆಚ್ಚಿನ ಮೊತ್ತಕ್ಕೆ ರಷ್ಯಾ ವಹಿವಾಟು ನಡೆಸಿದರೆ, ಪಾಶ್ಚಿಮಾತ್ಯ ಸಾಗಣೆದಾರರು ಮತ್ತು ವಿಮಾದಾರರು ರಷ್ಯಾದ ತೈಲ ವ್ಯಾಪರದಲ್ಲಿ ತೊಡಗಿಸಿಕೊಳ್ಳುವುದನ್ನು ನಿಷೇಧಿಸುತ್ತದೆ. ಅಲ್ಲದೇ ರಷ್ಯಾದ ಕಚ್ಚಾ ತೈಲದ ಮೇಲೆ ಪಶ್ಚಿಮ ರಾಷ್ಟ್ರಗಳ ಅವಲಂಬನೆಯನ್ನು ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿತ್ತು.

ಖರೀದಿಗೆ ಮುಂದಾದ ಭಾರತ, ಚೀನಾ:
ನಿರ್ಬಂಧವನ್ನು ಮೀರಿ ರಷ್ಯಾದಿಂದ ಕಚ್ಚಾ ತೈಲ ಖರೀದಿಗೆ ಭಾರತ ಮತ್ತು ಚೀನಾ ಮುಂದಾದವು. ಈ ಹಿನ್ನೆಲೆಯಲ್ಲಿ ತೈಲ ಮಾರಾಟಕ್ಕೆ ರಷ್ಯಾಗೆ ಭಾರತ ಮತ್ತು ಚೀನಾ ಪ್ರಮುಖ ದೊಡ್ಡ ದೇಶಗಳಾದವು. ಇದೇ ವೇಳೆ ತೈಲ ಸಂಸ್ಕಾರಣಾ ಕಂಪನಿಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಯನ್ನು ಸುಧಾರಿಸಲು ಕಡಿಮೆ ಮೊತ್ತಕ್ಕೆ ಭಾರತದ ರಿಫೈನರಿಗಳಿಗೆ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ರಷ್ಯಾ ಮಾರಾಟ ಮಾಡಿತು. ವರದಿಯ ಪ್ರಕಾರ, 15 ಡಾಲರ್‌ನಿಂದ 20 ಡಾಲರ್‌ ಬೆಲೆ ಭಾರತಕ್ಕೆ ರಷ್ಯಾ ಕಚ್ಚಾ ತೈಲ ಮಾರಾಟ ಮಾಡಿದೆ.

ಆಮದು ಶೇ.20ಕ್ಕೆ ಏರಿಕೆ:
2021ರವರೆಗೆ ಒಟ್ಟಾರೆ ಭಾರತದ ಕಚ್ಚಾ ತೈಲ ಆಮದಿನಲ್ಲಿ ರಷ್ಯಾದ ಪ್ರಮಾಣ ಶೇ.2ರಷ್ಟು ಇತ್ತು. ಪ್ರಸ್ತುತ ಇದು ಶೇ.20ಕ್ಕೆ ಏರಿಕೆಯಾಗಿದೆ. ಕಚ್ಚಾ ತೈಲ ಆಮದಿನಲ್ಲಿ ಟಾಪ್‌ ಐದು ರಾಷ್ಟ್ರಗಳಲ್ಲಿ ಒಂದಾಗಿರುವ ಭಾರತಕ್ಕೆ, ಇದರಿಂದ ದೊಡ್ಡ ಪ್ರಮಾಣದ ಉಳಿತಾಯವಾಗಿದೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.