ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20 ಟೂರ್ನಿ : ಸತತ ಎರಡನೇ ಫೈನಲ್‌ಗೆ ತಮಿಳುನಾಡು ಲಗ್ಗೆ


Team Udayavani, Jan 30, 2021, 1:30 AM IST

ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20 ಟೂರ್ನಿ : ಸತತ ಎರಡನೇ ಫೈನಲ್‌ಗೆ ತಮಿಳುನಾಡು ಲಗ್ಗೆ

ಅಹ್ಮದಾಬಾದ್: ದಿನೇಶ್‌ ಕಾರ್ತಿಕ್‌ ನಾಯಕತ್ವದ ತಮಿಳುನಾಡು ಸತತ ಎರಡನೇ ಬಾರಿಗೆ “ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20′ ಪಂದ್ಯಾವಳಿಯ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿದೆ. ಶುಕ್ರವಾರ ನಡೆದ ಮೊದಲ ಸೆಮಿಯಲ್ಲಿ ಅದು ರಾಜಸ್ಥಾನವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ರಾಜಸ್ಥಾನ 9 ವಿಕೆಟಿಗೆ 154 ರನ್‌ ಗಳಿಸಿದರೆ, ತಮಿಳುನಾಡು 18.4 ಓವರ್‌ಗಳಲ್ಲಿ ಮೂರೇ ವಿಕೆಟಿಗೆ 158 ರನ್‌ ಬಾರಿಸಿ ಮೆರೆಯಿತು. ಮಧ್ಯಮ ವೇಗಿ ಎಂ. ಮೊಹಮ್ಮದ್‌ (24ಕ್ಕೆ 4 ವಿಕೆಟ್‌) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಅರುಣ್‌ ಕಾರ್ತಿಕ್‌ (ಅಜೇಯ 89) ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ತಮಿಳುನಾಡು 17 ರನ್‌ ಆಗುವಷ್ಟರಲ್ಲಿ ಹರಿ ನಿಶಾಂತ್‌ (4) ಮತ್ತು ಬಾಬಾ ಅಪರಾಜಿತ್‌ (2) ಅವರ ವಿಕೆಟ್‌ ಕಳೆದುಕೊಂಡು ತೀವ್ರ ಸಂಕಟಕ್ಕೆ ಸಿಲುಕಿತ್ತು. ಆದರೆ ಓಪನರ್‌ ಎನ್‌. ಜಗದೀಶನ್‌ (28) ಮತ್ತು ಅರುಣ್‌ ಕಾರ್ತಿಕ್‌ ಸೇರಿಕೊಂಡು ತಂಡವನ್ನು ಆಧರಿಸುವ ಕೆಲಸಕ್ಕೆ ಮುಂದಾದರು. 3ನೇ ವಿಕೆಟಿಗೆ 52 ರನ್‌ ಒಟ್ಟುಗೂಡಿತು.

ಕಾರ್ತಿಕ್‌ದ್ವಯರ ಅಜೇಯ ಆಟ
ನಾಯಕ ದಿನೇಶ್‌ ಕಾರ್ತಿಕ್‌ (ಔಟಾ ಗದೆ 26) ಅವರನ್ನು ಕೂಡಿಕೊಂಡ ಅರುಣ್‌ ಕಾರ್ತಿಕ್‌ ರಾಜಸ್ಥಾನ ಬೌಲರ್‌ಗಳ ಮೇಲೆರಗಿ ಹೋದರು. ತಂಡಕ್ಕೆ ಬೇರೆ ಯಾವುದೇ ಹಾನಿಯಾಗದಂತೆ ನೋಡಿಕೊಂಡರು. ಕಾರ್ತಿಕ್‌ದ್ವಯರು 4ನೇ ವಿಕೆಟಿಗೆ 89 ರನ್‌ ಪೇರಿಸಿ ತಂಡದ ಗೆಲುವನ್ನು ಸಾರಿದರು. ಅರುಣ್‌ ಕಾರ್ತಿಕ್‌ ಅವರ 89 ರನ್‌ 54 ಎಸೆತಗಳಿಂದ ಬಂತು. ಸಿಡಿಸಿದ್ದು 9 ಫೋರ್‌ ಹಾಗೂ 3 ಸಿಕ್ಸರ್‌.

ರಾಜಸ್ಥಾನ್‌ ಸರದಿಯಲ್ಲಿ ನಾಯಕ ಅಶೋಕ್‌ ಮೆನಾರಿಯಾ (51) ಅರ್ಧ ಶತಕ ಬಾರಿಸಿದರೆ, ಅರ್ಜಿತ್‌ ಗುಪ್ತಾ 45 ರನ್‌ ಮಾಡಿದರು.

ಬರೋಡ-ಪಂಜಾಬ್‌ ನಡುವಿನ ದ್ವಿತೀಯ ಸೆಮಿಫೈನಲ್‌ನಲ್ಲಿ ಗೆದ್ದ ತಂಡ ವನ್ನು ತಮಿಳುನಾಡು ರವಿವಾರದ ಫೈನಲ್‌ನಲ್ಲಿ ಎದುರಿಸಲಿದೆ. ಕಳೆದ ವರ್ಷದ ಪ್ರಶಸ್ತಿ ಸಮರದಲ್ಲಿ ತಮಿಳು ನಾಡು ಕರ್ನಾಟಕಕ್ಕೆ ಶರಣಾಗಿತ್ತು.

ಸಂಕ್ಷಿಪ್ತ ಸ್ಕೋರ್‌:
ರಾಜಸ್ಥಾನ-9 ವಿಕೆಟಿಗೆ 154 (ಮೆನಾರಿಯಾ 51, ಗುಪ್ತ 45, ಆದಿತ್ಯ ಗರ್ವಾಲ್‌ 29, ಎಂ. ಮೊಹಮ್ಮದ್‌ 24ಕ್ಕೆ 4, ಸಾಯಿ ಕಿಶೋರ್‌ 16ಕ್ಕೆ 2). ತಮಿಳುನಾಡು-18.4 ಓವರ್‌ಗಳಲ್ಲಿ 3 ವಿಕೆಟಿಗೆ 158 (ಅರುಣ್‌ ಕಾರ್ತಿಕ್‌ ಔಟಾಗದೆ 89, ಜಗದೀಶನ್‌ 28, ದಿನೇಶ್‌ ಕಾರ್ತಿಕ್‌ ಔಟಾಗದೆ 26).

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.