ಕಣ-ಚಿತ್ರಣ: ಚಿಕ್ಕಮಗಳೂರು ರಣಾಂಗಣದಲ್ಲಿ ಮಾಜಿ ದೋಸ್ತಿಗಳ ಕಾದಾಟ

ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿದ ಎಚ್‌.ಡಿ.ತಮ್ಮಯ್ಯ- ಬಿಜೆಪಿ ಟಿಕೆಟ್‌ ಸಿಗದ್ದಕ್ಕೆ ಕಾಂಗ್ರೆಸ್‌ ಪಾಳೆಯ ಸೇರ್ಪಡೆ

Team Udayavani, May 1, 2023, 8:42 AM IST

bjp cong

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಕ್ಷೇತ್ರ ಈ ಬಾರಿ ಮಾಜಿ ಗೆಳೆಯ’ರ ಕದನದಿಂದ ಹೈವೋಲ್ಟೆಜ್‌ ಕ್ಷೇತ್ರಗಳಲ್ಲಿ ಒಂದಾಗಿದೆ.
ಸತತ ನಾಲ್ಕು ಬಾರಿ ಗೆಲುವು ಸಾಧಿ ಸಿ ವಿವಿಧ ಇಲಾಖೆ ಮಂತ್ರಿಯಾಗಿ ಸದ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ. ರವಿ ವಿರುದ್ಧ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಚ್‌.ಡಿ. ತಮ್ಮಯ್ಯ ಈ ಬಾರಿ ಸೆಡ್ಡು ಹೊಡೆದಿದ್ದು ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿ ಪ್ರತಿಸ್ಪರ್ಧಿಯಾಗಿದ್ದಾರೆ. ಈ ಮಾಜಿ ದೋಸ್ತಿಗಳ ಕದನದಿಂದ ಚಿಕ್ಕಮಗಳೂರು ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ.

ಕಾಂಗ್ರೆಸ್‌ನ ಸಗೀರ್‌ ಅಹಮದ್‌ ವಿರುದ್ಧ ಒಮ್ಮೆ ಸೋತಿರುವ ಸಿ.ಟಿ. ರವಿ ಬಳಿ ಮತ್ತೆಂದೂ ಸೋಲು ಸುಳಿದಿಲ್ಲ. ಈ ಬಾರಿ ಐದನೇ ಗೆಲುವಿನ ನಿರೀಕ್ಷೆಯಲ್ಲಿದ್ದು ಮಾಜಿ ಆಪ್ತನ ವಿರುದ್ಧ ಸೆಣಸಬೇಕಾಗಿದೆ. ಎಚ್‌.ಡಿ. ತಮ್ಮಯ್ಯ ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಆದರೆ, ಟಿಕೆಟ್‌ ಸಿಗುವ ಯಾವ ಲಕ್ಷಣವೂ ಕಾಣದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕದ ತಟ್ಟಿ ಕೊನೆಗೆ ಎಲ್ಲ ಆಕಾಂಕ್ಷಿಗಳನ್ನೂ ಹಿಂದಿಕ್ಕಿ ಟಿಕೆಟ್‌ ಗಿಟ್ಟಿಸುವಲ್ಲಿಯೂ ಯಶಸ್ವಿಯಾಗಿದ್ದು, ಆಪ್ತನ ವಿರುದ್ಧವೇ ತೊಡೆ ತಟ್ಟಿದ್ದಾರೆ.

ಮತ್ತೂಮ್ಮೆ ಗೆಲುವಿಗೆ ಪಣ:
ಸಿ.ಟಿ.ರವಿ ಗರಡಿಯಲ್ಲೇ ಪಳಗಿರುವ ಎಚ್‌.ಡಿ. ತಮ್ಮಯ್ಯ, ಸಿ.ಟಿ. ರವಿಯವರ ಚುನಾವಣಾ ಅಸ್ತ್ರಗಳನ್ನು ಕರಗತ ಮಾಡಿಕೊಂಡಿದ್ದು ಅವರ ವಿರುದ್ಧ ಪ್ರಯೋಗಕ್ಕೂ ಮುಂದಾಗಿದ್ದಾರೆ. ಸಿ.ಟಿ. ರವಿ ಒಕ್ಕಲಿಗ ಸಮುದಾಯವನ್ನು ಪ್ರತಿನಿಧಿ ಸುತ್ತಿದ್ದು, ಕ್ಷೇತ್ರದಲ್ಲಿ ಸಮುದಾಯದ ಪ್ರಾಬಲ್ಯ ಇಲ್ಲದಿದ್ದರೂ ತಮ್ಮ ಮಾತಿನ ಶೈಲಿಯಿಂದ ಎಲ್ಲರನ್ನೂ ಸೆಳೆದುಕೊಳ್ಳುವ ಶಕ್ತಿ ಪ್ರತಿ ಚುನಾವಣೆಯಲ್ಲೂ ಅವರಿಗೆ ವರವಾಗಿದೆ. ಐದು ಚುನಾವಣೆ ಎದುರಿಸಿರುವ ಅನುಭವ, ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸ, ಹಿಂದುತ್ವದ ಅಜೆಂಡಾ, ಪಕ್ಷ ಸಂಘಟನಾ ಶಕ್ತಿ ಈ ಚುನಾವಣೆಯಲ್ಲಿ ಕೈ ಹಿಡಿಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಎರಡು ದಶಕಗಳಿಂದ ಶಾಸಕರಾಗಿರುವ ಸಿ.ಟಿ. ರವಿ, ಕ್ಷೇತ್ರದ ಅಭಿವೃದ್ಧಿಯಲ್ಲಿ ಸ್ವಲ್ಪ ಹಿನ್ನಡೆ ಸಾ ಧಿಸಿದ್ದು, ಅಲ್ಲದೇ ಸಮುದಾಯದ ಬಲ ಅಷ್ಟಾಗ ಇಲ್ಲದಿರುವುದು, ಕೆಲವೊಮ್ಮೆ ರಾಜ್ಯದ ಪ್ರಮುಖ ನಾಯಕರ ಬಗ್ಗೆ ಮಾತನಾಡಿದ್ದು, ಲಿಂಗಾಯತ ಶಾಸಕ ಕೂಗು ಕ್ಷೇತ್ರದಲ್ಲಿ ಎದ್ದಿರುವುದು ಸಿ.ಟಿ. ರವಿಗೆ ಹಿನ್ನಡೆಯಾಗಬಲ್ಲವು ಎನ್ನಲಾಗುತ್ತಿದೆ.

ಚೊಚ್ಚಲ ಕದನ:
ಸಿ.ಟಿ. ರವಿ ಪ್ರತಿಸ್ಪರ್ಧಿಯಾಗಿರುವ ಎಚ್‌.ಡಿ. ತಮ್ಮಯ್ಯ ಪ್ರಬಲ ಲಿಂಗಾಯತ ಸಮುದಾಯ ಪ್ರತಿನಿಧಿ ಸುತ್ತಿದ್ದು, ಕಳೆದ ಮೂರು ದಶಕಗಳಿಂದ ಕ್ಷೇತ್ರದಲ್ಲಿ ಸಮುದಾಯದ ಶಾಸಕರು ಇಲ್ಲದಿರುವುದು, ಬಿಜೆಪಿಯಲ್ಲಿ ಟಿಕೆಟ್‌ ದಕ್ಕದಿರುವ ಅನುಕಂಪ, ಬದಲಾವಣೆ ಕೂಗು ಇವರಿಗೆ ಪ್ಲಸ್‌ ಆಗಲಿದೆ ಎಂಬ ಮಾತುಗಳು ಹರಿದಾಡುತ್ತಿವೆ.
ಎಚ್‌.ಡಿ. ತಮ್ಮಯ್ಯ ಬಿಜೆಪಿಯಲ್ಲಿ ಪಳಗಿದ್ದು, ಟಿಕೆಟ್‌ಗಾಗಿಯೇ ಕಾಂಗ್ರೆಸ್‌ಗೆ ವಲಸೆ ಬಂದವರು ಎಂಬ ಹಣೆಪಟ್ಟಿ ಇದೆ. ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದು, ಅನುಭವದ ಕೊರತೆ ಮತ್ತು ಸಿ.ಟಿ. ರವಿ ಚುನಾವಣೆ ತಂತ್ರಗಾರಿಕೆ ತಡೆದುಕೊಳ್ಳುವ ಶಕ್ತಿ. ಕಾಂಗ್ರೆಸ್‌ ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯುವ ದೊಡ್ಡ ಸವಾಲು ಇವರ ಮುಂದಿದೆ.

ಜೆಡಿಎಸ್‌ನಿಂದ ಬಿ.ಎಂ. ತಿಮ್ಮಶೆಟ್ಟಿ ಕಣದಲ್ಲಿದ್ದರೂ ಇಬ್ಬರಿಗೂ ಭಾರೀ ಸ್ಪರ್ಧೆಯೊಡ್ಡುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಜೆಡಿಎಸ್‌ ಮುಖಂಡ ಎಸ್‌.ಎಲ್‌. ಭೋಜೇಗೌಡ ಕಾಂಗ್ರೆಸ್‌ಗೆ ಮತ ನೀಡುವಂತೆ ಮನವಿ ಮಾಡಿದ್ದು, ಜೆಡಿಎಸ್‌ಗೆ ದೊಡ್ಡ ಆಘಾತ ನೀಡಿರುವುದಲ್ಲದೆ, ಕಾಂಗ್ರೆಸ್‌ಗೆ ಪ್ಲಸ್‌ ಆಗಲಿದೆ. ಜೆಡಿಎಸ್‌ ಕಣದಲ್ಲಿದ್ದರೂ ಲೆಕ್ಕಕಿಲ್ಲದಂತಾಗಿದೆ. ಹೀಗಾಗಿ ಒಂದು ಕಾಲದ ಆಪ್ತರಿಬ್ಬರ ಹೋರಾಟಕ್ಕೆ ಅಖಾಡಾ ಸಿದ್ಧವಾಗಿದೆ.

ಜಾತಿ ಲೆಕ್ಕಾಚಾರ
ಲಿಂಗಾಯತರು-35,000
ಕುರುಬ-27,000
ಒಕ್ಕಲಿಗ-15,000
ಮುಸ್ಲಿಂ-20,000
ಬ್ರಾಹ್ಮಣ-5,000
ಎಸ್‌ಸಿ, ಎಸ್‌ಟಿ-50,000
ಇತರೆ-40,000

2018ರ ಫಲಿತಾಂಶ
ಸಿ.ಟಿ.ರವಿ (ಬಿಜೆಪಿ)-70,863
ಬಿ.ಎಲ್‌. ಶಂಕರ್‌ (ಕಾಂಗ್ರೆಸ್‌)-44549
ಬಿ.ಎಚ್‌. ಹರೀಶ್‌ (ಜೆಡಿಎಸ್‌)-38,317

~ ಸಂದೀಪ ಜಿ.ಎನ್‌. ಶೇಡ್ಗಾರ್‌

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.