
ಇಂದಿನಿಂದ ಶಾಲೆಗಳು ಓಪನ್-2023-24 ಶೈಕ್ಷಣಿಕ ವರ್ಷ ಆರಂಭ, ಮೇ 31 ರಿಂದ ತರಗತಿ ಪ್ರಾರಂಭ
Team Udayavani, May 29, 2023, 7:15 AM IST

ಬೆಂಗಳೂರು: ಸರ್ಕಾರದ 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ (ಮೇ 29 ಸೋಮವಾರ) ಶಾಲೆಗಳು ತೆರೆಯಲಿವೆ. 31ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿವೆ.
ಮೇ 29 ಮತ್ತು 30ರಂದು ಶಾಲೆಗಳನ್ನು ಸಂಪೂರ್ಣ ಸ್ವತ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚಿಸಲಾಗಿದೆ.
ಬೇಸಿಗೆ ರಜೆ ಮುಕ್ತಾಯಗೊಂಡಿದ್ದು ಮಂಗಳವಾರ ಮತ್ತು ಬುಧವಾರ ಪ್ರತಿ ತರಗತಿ ಕೊಠಡಿ, ಆವರಣ, ಆಟದ ಮೈದಾನ, ಲೈಬ್ರರಿ ಸೇರಿ ಇಡೀ ಶಾಲೆಯನ್ನು ಸ್ವತ್ಛಗೊಳಿಸಬೇಕು. ಮಕ್ಕಳು ತರಗತಿಯಲ್ಲಿ ಕೂತು ಪಾಠ ಕೇಳಲು ಆರೋಗ್ಯಕರ ರೀತಿಯಲ್ಲಿ ಶಾಲೆಯನ್ನು ಸಜ್ಜುಗೊಳಿಸಬೇಕು. ಶಾಲಾ ಕೊಠಡಿ, ಶೌಚಾಲಯ, ಕಾಂಪೌಂಡ್ ಸೇರಿ ಶಾಲೆಯ ಯಾವುದೇ ಭಾಗ ಮಳೆ ಮತ್ತಿತರ ಕಾರಣದಿಂದ ಹಾನಿಯಾಗಿದ್ದರೆ ಅವುಗಳ ದುರಸ್ತಿಗೆ ಕ್ರಮ ವಹಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಇಲಾಖೆ ಎಲ್ಲ ಮುಖ್ಯೋಪಾಧ್ಯಾಯರಿಗೆ ಸೂಚಿಸಿದೆ.
ಎಸ್ಡಿಎಂಸಿ ಸಭೆ: ಪ್ರತಿ ಶಾಲೆಯಲ್ಲೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ನಡೆಸಿ ಪ್ರಾರಂಭೋತ್ಸವ ಹೇಗೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಬೇಕು. ಶಾಲಾ ವೇಳಾಪಟ್ಟಿ, ವಿಷಯವಾರು ಕ್ರಿಯಾ ಯೋಜನೆ, ಶಿಕ್ಷಕರ ವೇಳಾಪಟ್ಟಿ, ಶಾಲಾಭಿವೃದ್ಧಿ ಯೋಜನೆ, ಶಾಲಾ ವಾರ್ಷಿಕ ಕ್ಯಾಲೆಂಡರ್ ಸಿದ್ಧಪಡಿಸಿಕೊಳ್ಳಬೇಕು. ಮುಖ್ಯ ಶಿಕ್ಷಕರು ಶಿಕ್ಷಕರೊಂದಿಗೆ ಸಭೆ ನಡೆಸಿ ವಿವಿಧ ಕಾರ್ಯಭಾರಗಳ ಹಂಚಿಕೆ ಮಾಡಬೇಕು.
ವಿದ್ಯಾರ್ಥಿಗಳಿಗೆ ಸ್ವಾಗತ: ಮೇ 31ರ ಶಾಲೆ ಆರಂಭದ ದಿನ ತಳಿರು ತೋರಣಗಳಿಂದ ಶಾಲೆಯನ್ನು ಸಿಂಗರಿಸಿ ಮಕ್ಕಳಿಗೆ ಗುಲಾಬಿ ಹೂ, ಚಾಕಲೇಟ್ ಅಥವಾ ಇನ್ಯಾವುದೇ ಸಿಹಿ ನೀಡಿ ಬರಮಾಡಿಕೊಳ್ಳಬೇಕು. ಅಂದು ಬಿಸಿಯೂಟದಲ್ಲಿ ಒಂದು ಸಿಹಿ ತಿನಿಸು ತಯಾರಿಸಿ ಮಕ್ಕಳಿಗೆ ಬಡಿಸಬೇಕೆಂದು ಸೂಚಿಸಲಾಗಿದೆ.
ಕಳೆದ ಸಾಲಿನಲ್ಲಿ ಅರ್ಧಕ್ಕೆ ಶಿಕ್ಷಣ ಮೊಟಕುಗೊಳಿಸಿರುವ, ಶಾಲೆಗೆ ಬಾರದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಶಾಲೆಯ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಸೂಚಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery Issue; ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕಪಟ ನಾಟಕ ಸಾಕು..: ನಿಖಿಲ್ ಗುಡುಗು

Manipal Hospital: ಎಎಂಆರ್ಐ ಹಾಸ್ಪಿಟಲ್ಸ್ನಲ್ಲಿ ಮಣಿಪಾಲ ಹಾಸ್ಪಿಟಲ್ ಶೇ.84 ಪಾಲುದಾರಿಕೆ

Politics: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

Ration: ಕಾಳಸಂತೆ ಪಡಿತರ ಅಕ್ಕಿ ಮಾರಾಟಕ್ಕೆ ಬಿತ್ತು ಬ್ರೇಕ್!

Karnataka: ಸರಕಾರಿ ಕಾರ್ಯಕ್ರಮ; ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ
MUST WATCH
ಹೊಸ ಸೇರ್ಪಡೆ

Goa Karnataka Border: ಅಕ್ರಮ ಮದ್ಯ ಸಾಗಣೆ… ಗೋವಾ ಕರ್ನಾಟಕ ಗಡಿಯಲ್ಲಿ ಬಿಗಿ ತಪಾಸಣೆ

South Africa Squad; ಗಾಯಗೊಂಡ ಇಬ್ಬರು ವೇಗಿಗಳು; ವಿಶ್ವಕಪ್ ತಂಡದಲ್ಲಿ ಮಹತ್ವದ ಬದಲಾವಣೆ

Actor Akhil Mishra: ಅಡುಗೆ ಮನೆಯಲ್ಲಿ ಜಾರಿಬಿದ್ದು ಖ್ಯಾತ ಬಾಲಿವುಡ್ ನಟ ನಿಧನ

Tragedy: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ

Cauvery Issue; ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕಪಟ ನಾಟಕ ಸಾಕು..: ನಿಖಿಲ್ ಗುಡುಗು