ಯಶಸ್ವಿ ಅನುಷ್ಠಾನವಾಗಲಿ ಗುಜರಿ ನೀತಿ


Team Udayavani, Feb 3, 2021, 7:20 AM IST

ಯಶಸ್ವಿ ಅನುಷ್ಠಾನವಾಗಲಿ ಗುಜರಿ ನೀತಿ

ಸೋಮವಾರ ಮಂಡನೆಯಾದ ಕೇಂದ್ರ ಬಜೆಟ್‌ ಮೂಲಸೌಕರ್ಯಾ ಅಭಿವೃದ್ಧಿಗೆ ಹಾಗೂ ಸ್ವಾಸ್ಥ್ಯವಲಯಕ್ಕೆ ಕೊಟ್ಟಿರುವ ಆದ್ಯತೆ ಗಮನಾರ್ಹ. ಅದರ ಜತೆಗೆ ಪರಿಸರ ರಕ್ಷಣೆಯ ನಿಟ್ಟಿನಲ್ಲೂ ಅದು ಮಹತ್ವ ಪೂರ್ಣ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿರುವುದೂ ಶ್ಲಾಘನೀಯ. ಈ ಬಜೆಟ್‌ನಲ್ಲಿ ಕೇಂದ್ರ ಸರಕಾರ “ವಾಹನ ಗುಜರಿ’ ನೀತಿಯನ್ನು ಘೋಷಣೆ ಮಾಡಿದೆ.

ಇದರನ್ವಯ 20 ವರ್ಷ ದಾಟಿದ ಖಾಸಗಿ ವಾಹನಗಳು ಹಾಗೂ 15 ವರ್ಷ ತುಂಬಿದ ವಾಣಿಜ್ಯ ವಾಹನ ಗಳು ಕಡ್ಡಾಯ ಫಿಟೆ°ಸ್‌ ಪರೀಕ್ಷೆಗೆ ಒಳಪಡಬೇಕು. ಆಗ ಅವು ರಸ್ತೆಯಲ್ಲಿ ಓಡಾಡಲು ಅರ್ಹವಾಗಿವೆಯೋ ಅಥವಾ ಗುಜರಿ ಸೇರ ಬೇಕೋ ಎಂದು ನಿರ್ಧರಿಸಲಾಗುತ್ತದೆ. ಜತೆಗೆ 15 ದಿನಗಳಲ್ಲೇ ಹೊಸ ನೀತಿಯ ಅನುಷ್ಠಾನವನ್ನೂ ಮಾಡಲಿರುವುದಾಗಿ ಕೇಂದ್ರ ಹೇಳಿದೆ.

ನಿಸ್ಸಂಶಯವಾಗಿಯೂ ಪರಿಸರದ ದೃಷ್ಟಿಯಿಂದ ಹಾಗೂ ವ್ಯಾವ ಹಾರಿಕ ದೃಷ್ಟಿಯಿಂದ ಇದೊಂದು ಗಮನಾರ್ಹ ನಡೆ. ಇಂದು ದೇಶದ ಮಾಲಿನ್ಯ ಕಾರಕಗಳಲ್ಲಿ ಹಳೆಯ ವಾಹನಗಳ ಪಾತ್ರ ಪ್ರಮುಖವಾಗಿದೆ. ಅಲ್ಲದೇ ಇವುಗಳಿಂದ ಇಂಧನ ಬಳಕೆಯಲ್ಲಿ ಅನಗತ್ಯ ಹೆಚ್ಚಳವೂ ಆಗುತ್ತಿದೆ. ಹೀಗಾಗಿ ಅನಗತ್ಯ ಹಾಗೂ ಹಾನಿಕಾರಕ ವಾಹನಗಳನ್ನು ಗುಜರಿಗೆ ಕಳುಹಿಸುವ ಈ ನೀತಿ ಹಲವು ರೀತಿಗಳಿಂದ ಪರಿಣಾಮಕಾರಿ ಯಾಗುವ ನಿರೀಕ್ಷೆಯಿದೆ. ಈ ವಾಹನ ಗುಜರಿ ನೀತಿಯಿಂದ ಪರಿಸರ ರಕ್ಷಣೆಯಷ್ಟೇ ಅಲ್ಲದೇ, 10 ಸಾವಿರ ಕೋಟಿ ರೂಪಾಯಿಗಳಷ್ಟು ಹೊಸ ಹೂಡಿಕೆ ಹರಿದುಬರುವ ಹಾಗೂ 50 ಸಾವಿರದಷ್ಟೂ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಕೆಲವೇ ದಿನಗಳ ಹಿಂದಷ್ಟೇ ಕೇಂದ್ರ ಸರಕಾರ ಪರಿಸರಕ್ಕೆ ಮಾರಕವಾದ ಹಳೆಯ ಖಾಸಗಿ ವಾಹನಗಳ ವಿರುದ್ಧ ಹಸಿರು ತೆರಿಗೆ ಪರಿಕಲ್ಪನೆಯ ಮೂಲಕ ಸಮರ ಘೋಷಿಸಿತ್ತು. 8 ವರ್ಷಗಳಿಗಿಂತ ಹಳೆಯದಾಗಿರುವ ವಾಹನಗಳಿಗೆ ಶೀಘ್ರದಲ್ಲಿಯೇ ಹಸರು ತೆರಿಗೆ ಹೇರುವ ಪ್ರಸ್ತಾವಕ್ಕೆ ಕೇಂದ್ರೀಯ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ ಒಪ್ಪಿಗೆ ನೀಡಿದೆ. ಈ ಕುರಿತು ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದೂ ಅದು ಹೇಳಿದೆ. ಈ ಎಲ್ಲ ಸಂಗತಿಗಳು ಹಳೆಯ ವಾಹನಗಳ ವಿಚಾರದಲ್ಲಿ ಕೇಂದ್ರ ಸರಿಯಾದ ಹೆಜ್ಜೆಯಿಡುತ್ತಿದೆ ಎನ್ನುವುದನ್ನು ಸೂಚಿಸುತ್ತದೆ. ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್‌ವೈರ್ನಮೆಂಟ್‌(ಸಿಎಸ್‌ಇ) ಪ್ರಕಾರ 2025ರ ವೇಳೆಗೆ ಭಾರತದಲ್ಲಿ 2 ಕೋಟಿಗೂ ಹೆಚ್ಚು ಹಳೆಯ ವಾಹನಗಳ ಬೃಹತ್‌ ಭಾರ ಸೃಷ್ಟಿಯಾಗಲಿದೆ. ಈ ವಾಹನಗಳು ವಾತಾವರಣಕ್ಕೆ ಭಾರೀ ಹಾನಿ ಮಾಡುವ ಸಾಧ್ಯತೆ ಇಲ್ಲದಿಲ್ಲ. 2014ರಲ್ಲಿ ಐಐಟಿ ಬಾಂಬೆ ದೇಶಾದ್ಯಂತ ನಡೆಸಿದ ಅಧ್ಯಯನದ ಪ್ರಕಾರ 2005ಕ್ಕೂ ಪೂರ್ವದ ವಾಹನಗಳೇ ಇಂದು ದೇಶದಲ್ಲಿ ವಾಹನಗಳಿಂದ ಉಂಟಾಗುತ್ತಿರುವ ವಾಯುಮಾಲಿನ್ಯದಲ್ಲಿ 70 ಪ್ರತಿಶತ ಕಾರಣೀಕರ್ತವಾಗಿವೆ. ಹೀಗಾಗಿ ಗುಜರಿ ನೀತಿ ಹಾಗೂ ಸಂಭಾವ್ಯ ಹಸರು ತೆರಿಗೆ ಪದ್ಧತಿ ಈ ಸಮಸ್ಯೆಗೆ ಯಾವ ಪ್ರಮಾಣದಲ್ಲಿ ಪರಿಹಾರ ಒದಗಿಸಲಿವೆಯೋ ಎಂಬ ನಿರೀಕ್ಷೆಯಂತೂ ಹುಟ್ಟಿಕೊಂಡಿದೆ.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.