ಕೋವಿಡ್ ಎರಡನೇ ಅಲೆ ಎಫೆಕ್ಟ್: 2 ತಿಂಗಳಲ್ಲಿ ಭಾರತದಲ್ಲಿ 22.7 ಲಕ್ಷ ಮಂದಿ ನಿರುದ್ಯೋಗಿಗಳು
Team Udayavani, Jun 2, 2021, 3:20 PM IST
ನವದೆಹಲಿ: ಕೋವಿಡ್ 19 ಸೋಂಕಿನ ಮೊದಲ ಅಲೆಯಲ್ಲಿ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದರು. ಇದೀಗ ಕೋವಿಡ್ 19 ಎರಡನೇ ಅಲೆಗೆ ಭಾರತದಲ್ಲಿ ಕೇವಲ ಎರಡು ತಿಂಗಳಲ್ಲಿ 22.7 ಲಕ್ಷ ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ಭಾರತೀಯ ಆರ್ಥಿಕ ಮೇಲ್ವಿಚಾರಣೆ ಮುಖ್ಯಸ್ಥ ಮಹೇಶ್ ವ್ಯಾಸ್ ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಮಹಿಳೆಗೆ ಕೊಲೆ ಬೆದರಿಕೆ : 7 ಜನ ಆರೋಪಿಗಳ ಬಂಧನ
ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಲ್ಲಿ 22.7 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದಲ್ಲಿನ ಒಟ್ಟು ಉದ್ಯೋಗಗಳ ಸಂಖ್ಯೆ 400 ಮಿಲಿಯನ್. ಉದ್ಯೋಗದಲ್ಲಿದ್ದ ಈ 400 ಮಿಲಿಯನ್ ಜನರಲ್ಲಿ 22.7 ಮಿಲಿಯನ್ ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ವ್ಯಾಸ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಎಎನ್ ಐ ವರದಿ ಮಾಡಿದೆ.
ಕಳೆದ ವರ್ಷ ಕೋವಿಡ್ 19 ಸೋಂಕು ಹರಡಲು ಆರಂಭವಾದ ಬಳಿಕ ಅಂದಾಜು ಶೇ.97ರಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ವ್ಯಾಸ್ ಅವರು ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಚಿಂತಕರ ಚಾವಡಿಯ ನಿರುದ್ಯೋಗ ಪ್ರಮಾಣದ ಅಂದಾಜಿನ ಪ್ರಕಾರ ಮೇ ಅಂತ್ಯದ ವೇಳೆಗೆ ಶೇ.12ಕ್ಕೆ ಏರಿಯಾಗುವ ನಿರೀಕ್ಷೆ ಇದೆ ಎಂದು ವ್ಯಾಸ್ ವಿವರಿಸಿದ್ದು, ಇದರಿಂದ ಸುಮಾರು 10 ಮಿಲಿಯನ್ ಅಥವಾ ಒಂದು ಕೋಟಿ ಭಾರತೀಯರು ಉದ್ಯೋಗ ಕಳೆದುಕೊಂಡಿದೆ ಎಂದು ಸೂಚಿಸುತ್ತದೆ.
ರಾಷ್ಟ್ರೀಯ ಲಾಕ್ ಡೌನ್ ನಿಂದ 2020ರ ಮೇ ನಂತರ ದೇಶದಲ್ಲಿ ನಿರುದ್ಯೋಗದ ಪ್ರಮಾಣ ದಾಖಲೆಯ ಶೇ.23.5ಕ್ಕೆ ಏರಿಕೆಯಾಗಿತ್ತು. ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿತ್ತು ಎಂದು ಕೆಲವು ತಜ್ಞರು ಅಭಿಪ್ರಾಯ ಪಟ್ಟಿದ್ದು, ನಿರ್ಬಂಧಗಳಿಂದ ಸಂಭವಿಸಿದ ನಷ್ಟವನ್ನು ತುಂಬಿಸಿಕೊಳ್ಳಲು ರಾಜ್ಯ ಸರ್ಕಾರಗಳು ಹಂತ, ಹಂತವಾಗಿ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲು ರಾಜ್ಯ ಸರ್ಕಾರಗಳು ಮುಂದಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ