ಮಂಗಳವಾರ ಹಾಲು-ತುಪ್ಪ ಕಾರ್ಯ : ಕಂಠೀರವ ಸ್ಟುಡಿಯೋ ಸುತ್ತ ಸೆಕ್ಷನ್ 144
Team Udayavani, Oct 31, 2021, 9:09 AM IST
ಬೆಂಗಳೂರು : ಶುಕ್ರವಾರ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಮಂಗಳವಾರ (ನವೆಂಬರ್ 2) ರಂದು ಹಾಲು-ತುಪ್ಪ ಕಾರ್ಯ ನಡೆಯಲಿದೆ.
ಸಂಪ್ರದಾಯದಂತೆ 5 ನೇ ದಿನ ಹಾಲು-ತುಪ್ಪಶಾಸ್ತ್ರ ನಡೆಯಲಿದೆ. ಅಂತ್ಯ ಸಂಸ್ಕಾರ ನಡೆದ ದಿನವಾದ ಇಂದು, ಭಾನುವಾರ ಸಮಾಧಿಗೆ ಪೂಜೆ ಮಾತ್ರ ನಡೆಯಲಿದೆ ಎಂದು ಸಹೋದರ ರಾಘವೇಂದ್ರ ರಾಜ್ ಕುಮಾರ್ ತಿಳಿಸಿದ್ದಾರೆ.
ಕಂಠೀರವ ಸ್ಟುಡಿಯೋ ಸುತ್ತ ಸೆಕ್ಷನ್ 144
ಪುನೀತ್ ಅವನ್ನು ಮಣ್ಣು ಮಾಡಲಾಗಿರುವ ಕಂಠೀರವ ಸ್ಟುಡಿಯೋ ಸುತ್ತ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಅಭಿಮಾನಿಗಳಿಗೆ ಸ್ಟುಡಿಯೋ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಬೆಂಗಳೂರು ಜಿಲ್ಲಾಧಿಕಾರಿ ಮಜುನಾಥ್ ಅವರು ತಿಳಿಸಿದ್ದಾರೆ.
ಸಾವಿರಾರು ಅಭಿಮಾನಿಗಳು ಈಗಲೂ ಕಂಠೀರವ ಸ್ಟುಡಿಯೋದತ್ತ ಆಗಮಿಸುತ್ತಲೇ ಇದ್ದು, ಅಭಿಮಾನಿಗಳನ್ನು ನಿಯಂತ್ರಿಸುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ.
ಕುಟುಂಬಸ್ಥರಿಂದ ಹಾಲು-ತುಪ್ಪ ಕಾರ್ಯ ನಡೆದ ಬಳಿಕ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶವಿದೆ ಎಂದು ರಾಘವೇಂದ್ರ ರಾಜ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!