ಯೋಗಿಯದ್ದು ರಕ್ತ ಹೀರುವ ರಾಕ್ಷಸ ಸರ್ಕಾರ:ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ದೇಶದ್ರೋಹ ಕೇಸ್
ಸಮಾಜದಲ್ಲಿ ಅಶಾಂತಿ ತಲೆದೋರಬಹುದು ಎಂದು ಸಕ್ಸೇನಾ ದೂರಿನಲ್ಲಿ ಹೇಳಿದ್ದರು.
Team Udayavani, Sep 6, 2021, 1:17 PM IST
ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಉತ್ತರಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ (ಸೆಪ್ಟೆಂಬರ್ 06) ತಿಳಿಸಿದ್ದಾರೆ.
ಇದನ್ನೂ ಓದಿ:ಅನಂತನಾಗ್ ಬರ್ತ್ಡೇಗೆ ‘ವಿಜಯಾನಂದ’ ಲುಕ್ ಹೊರಕ್ಕೆ
ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ಬಿಜೆಪಿ ಮುಖಂಡ ಆಕಾಶ್ ಕುಮಾರ್ ಸಕ್ಸೇನಾ ರಾಮ್ ಪುರ್ ಜಿಲ್ಲೆಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.
ಸಕ್ಸೇನಾ ನೀಡಿದ ದೂರಿನ ಪ್ರಕಾರ, ಖುರೇಷಿ ಅವರು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಜಂ ಪತ್ನಿ ತಾಜೀನ್ ಪಾತ್ಮಾ ಅವರ ಬಳಿ ಮಾತುಕತೆ ನಡೆಸಿದ್ದರು.
ಮಾತುಕತೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಖುರೇಷಿ, ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲ ಯೋಗಿ ಆದಿತ್ಯನಾಥ್ ಸರ್ಕಾರ ರಾಕ್ಷಸ ಸರ್ಕಾರ, ಇದೊಂದು ಜನರ ರಕ್ತರ ಹೀರುವ ಸರ್ಕಾರವಾಗಿದೆ ಎಂದು ಹೋಲಿಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿರುವುದಾಗಿ ತಿಳಿಸಿದ್ದಾರೆ.
ಮಾಜಿ ರಾಜ್ಯಪಾಲರು ನೀಡಿರುವ ಹೇಳಿಕೆಯಿಂದ ಎರಡು ಕೋಮಿನ ನಡುವೆ ಉದ್ವಿಗ್ನತೆ ಹುಟ್ಟುಹಾಕಲು ಕಾರಣವಾಗುವ ಮೂಲಕ ಸಮಾಜದಲ್ಲಿ ಅಶಾಂತಿ ತಲೆದೋರಬಹುದು ಎಂದು ಸಕ್ಸೇನಾ ದೂರಿನಲ್ಲಿ ಹೇಳಿದ್ದರು.
ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ರಾಜ್ಯಪಾಲ ಖುರೇಷಿ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ದೇಶದ್ರೋಹ ಸೇರಿದಂತೆ ಹಲವಾರು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖುರೇಷಿ (81ವರ್ಷ) ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದು, 2014ರಿಂದ 2015ರವರೆಗೆ ಮಿಜೋರಾಂ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಉತ್ತರಪ್ರದೇಶದಲ್ಲಿಯೂ ಕೆಲ ಕಾಲ ರಾಜ್ಯಪಾಲರಾಗಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ