ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಜೈಲು ಶಿಕ್ಷೆ
Team Udayavani, Mar 25, 2022, 3:01 PM IST
ಚಿಕ್ಕಬಳ್ಳಾಪುರ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ದೃಶ್ಯ ಮೊಬೈಲ್ನಲ್ಲಿ ಸೆರೆಹಿಡಿದು ವಿಕೃತಿ ಮೆರೆದ ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ಇಬ್ಬರು ಅಪರಾಧಿಗಳಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಿದ್ದಾರೆ.
ಗೌರಿಬಿದನೂರು ತಾಲೂಕಿನ ಹೊಸೂರು ಹೋಬಳಿಯ ಗೆದರೆ ಗ್ರಾಮದ ಅಶೋಕ (23), ಲೋಕೇಶ್ (23) ಶಿಕ್ಷೆಗೆ ಒಳಗಾದವರು. ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳು ಸಾದ ಶಿಕ್ಷೆ ವಿಧಿಸಿ ನ್ಯಾ.ಬಿ.ಸಿ.ಭಾನುಮತಿ ತೀರ್ಪು ನೀಡಿದ್ದಾರೆ. ಅದೇ ರೀತಿ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಇಬ್ಬರಿಗೂ ತಲಾ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ಆರೋಪಿತರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ತುಂಬಲು ತಪ್ಪಿದಲ್ಲಿ 3 ತಿಂಗಳ ಕಾಲ ಸಾದ ಶಿಕ್ಷೆ ವಿಧಿಸಲಾಗಿದೆ.
ಆರೋಪಿ ಅಶೋಕ್ 2021ರ ಏ.15 ರಂದು ಬೆಳಗ್ಗೆ 11 ಗಂಟೆಯಲ್ಲಿ ಗೆದರೆ ಗ್ರಾಮದ ಬಾಲಕನೊಬ್ಬನಿಗೆ 50 ರೂ. ಕೊಟ್ಟು ಅಂಗಡಿಯಲ್ಲಿ ಸಿಗರೆಟ್ ತೆಗೆದುಕೊಂಡು ಬಾ ಎಂದು ಕಳುಹಿಸಿ ತನ್ನ ಸ್ನೇಹಿತ ಲೋಕೇಶ್ ಜೊತೆ ಆತನ ಮನೆಗೆ ತೆರಳಿದ್ದ. ಈ ವೇಳೆ ಸಿಗರೇಟ್ ತೆಗೆದುಕೊಂಡು ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದರು. ಇದನ್ನು ವಿರೋಧಿಸಿದ ಬಾಲಕನ ತಲೆ ಕೂದಲು ಹಿಡಿದುಕೊಂಡು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದರು. ಆ ದೃಶ್ಯಗಳನ್ನು ತಮ್ಮ ಮೊಬೈಲ್ ಮೂಲಕ ಚಿತ್ರೀಕರಿಸಿದ್ದರು.
ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಕ್ಷಕ ವೃತ್ತ ನಿರೀಕ್ಷಕ ಶಶಿಧರ್ ಕೋರ್ಟ್ಗೆ ಆರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ವಿಶೇಷ ಅಭಿಯೋಜಕ ಆರ್.ರವಿಚಂದ್ರ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್