ಅನ್ನಭಾಗ್ಯಕ್ಕೆ ಸರ್ವರ್‌ ಸಂಕಟ :ಗ್ರಾಮೀಣ ಭಾಗದಲ್ಲಿ ಸಮಸ್ಯೆ , ಪಡಿತರ ವಿತರಣೆಗೆ ತೊಡಕು


Team Udayavani, Dec 25, 2020, 6:20 AM IST

ಅನ್ನಭಾಗ್ಯಕ್ಕೆ ಸರ್ವರ್‌ ಸಂಕಟ :ಗ್ರಾಮೀಣ ಭಾಗದಲ್ಲಿ ಸಮಸ್ಯೆ , ಪಡಿತರ ವಿತರಣೆಗೆ ತೊಡಕು

ಕಾರ್ಕಳ: ಪಡಿತರ ವಿತರಣೆ ಸಮಸ್ಯೆಗಳಿಗೆ ಕೊನೆಯೇ ಇಲ್ಲ ಎನ್ನು ವಂತಾಗಿದೆ. ಈಗ ಪಡಿತರ ವಿತರಣೆಗೆ ಸರ್ವರ್‌ ಸಮಸ್ಯೆ ಅಡ್ಡಿಯಾಗುತ್ತಿದ್ದು, ಗ್ರಾಮೀಣ ಭಾಗದ ಜನ ನಿತ್ಯದ ಕೆಲಸ ಕಾರ್ಯ ಬಿಟ್ಟು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪಡಿತರ ವಿತರಣೆಯ ಬಯೋಮೆಟ್ರಿಕ್‌ ವಿಧಾನದಲ್ಲಿ ಪದೇ ಪದೆ ಕಂಡುಬರುತ್ತಿರುವ ತಾಂತ್ರಿಕ ಸಮಸ್ಯೆ ಇಂದಿಗೂ ಮುಂದುವರಿದಿದೆ. ಗ್ರಾಮೀಣ ಭಾಗಗಳಲ್ಲಿಯೇ ಈ ಸಮಸ್ಯೆ ಹೆಚ್ಚು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವೆಬ್‌ಸೈಟ್‌ನ ತಾಂತ್ರಿಕ ದೋಷದಿಂದ ಸದಾ ಕಾಲ ಸರ್ವರ್‌ ಬಿಝಿ ಬರುತ್ತಿದೆ. ನ್ಯಾಯಬೆಲೆ ಅಂಗಡಿಯವರು ಪಡಿತರ ಚೀಟಿದಾರರಿಗೆ ತಾಂತ್ರಿಕ ಕಾರಣ ಹೇಳಿ ಸುಸ್ತಾಗಿದ್ದಾರೆ. ದಾಸ್ತಾನಿದ್ದರೂ ಸಕಾಲದಲ್ಲಿ ವಿತರಣೆಗೆ ಕಷ್ಟವಾಗುತ್ತಿದೆ. ಸಾಲಿನಲ್ಲಿ ಕಾದು ನಿಂತರೂ ನ್ಯಾಯಬೆಲೆ ಅಂಗಡಿಯವರು ಬೆರಳಚ್ಚು ಪಡೆದುಕೊಳ್ಳುತ್ತಿಲ್ಲ, ಸಬೂಬು ಹೇಳುತ್ತಾರೆ, ಪಡಿತರ ಸಿಗುವಾಗ ತೀರಾ ವಿಳಂಬವಾಗುತ್ತಿದೆ ಎಂಬುದು ಗ್ರಾಹಕರ ಅಳಲು.

ಬಯೋಮೆಟ್ರಿಕ್‌ ವಿಧಾನದ ಬದಲು ಮೊಬೈಲ್‌ ಒಟಿಪಿ ಕೊಟ್ಟು ಪಡಿತರ ನೀಡುವ ಮಾರ್ಗ ಅನುಸರಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ನಮಗೆ ತೊಂದರೆಯಾಗದಂತೆ ವಿತರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ನಾಗರಿಕರು. ಈಗಿನ ಬಯೋಮೆಟ್ರಿಕ್‌ ವಿಧಾನ ತ್ರಾಸದಾಯಕವಾಗಿದೆ. ಕೆಲವು ಹಿರಿಯರ ಬೆರಳಚ್ಚು ಸ್ವಿಕಾರವಾಗುತ್ತಿಲ್ಲ. ಪಕ್ಕದ ಕೇರಳದಲ್ಲಿ ಒಟಿಪಿ ಮೂಲಕ ಪಡಿತರ ವಿತರಣೆಯಾಗುತ್ತಿದ್ದು, ಇಲ್ಲೂ ಅದೇ ವಿಧಾನ ಅನುಸರಿಸಬೇಕು ಎನ್ನುವ ಒತ್ತಾಯವಿದೆ.

ಬಯೋಮೆಟ್ರಿಕ್‌ ಹೊರತಾದ ಆಯ್ಕೆಗಳು ಮೂರ್‍ನಾಲ್ಕು ಇದ್ದರೂ ಅನುಸರಿಸದಿರುವುದರ ಹಿಂದೆ ಅಧಿಕಾರಿಗಳ ನಿರ್ಲಕ್ಷ ಇದೆ ಎನ್ನುತ್ತಾರೆ ನ್ಯಾಯಬೆಲೆ ಅಂಗಡಿಯವರೊಬ್ಬರು.

ಸಮಸ್ಯೆನಿವಾರಣೆಯಾಗಿಲ್ಲ
ದಕ್ಷಿಣ ಕನ್ನಡದಲ್ಲಿ ಸಮಸ್ಯೆ ಅಷ್ಟೇನೂ ಇಲ್ಲ ಎಂದು ಜಿಲ್ಲೆಯ ಆಹಾರ ಇಲಾಖೆ ಅಧಿಕಾರಿ ರಮ್ಯಾ ತಿಳಿಸಿದ್ದಾರೆ. ಆದರೆ ನ್ಯಾಯಬೆಲೆ ಅಂಗಡಿಯವರು ಮತ್ತು ಪಡಿತರ ಚೀಟಿದಾರರ ಪ್ರಕಾರ ಸಮಸ್ಯೆ ಇದೆ; ಸರ್ವರ್‌ ಆಗಾಗ ಕೈಕೊಡುತ್ತಿದೆ.

ಸರ್ವರ್‌ ಸಮಸ್ಯೆ ಬಗ್ಗೆ ಇನ್ನಿತರ ಜಿಲ್ಲೆಗ ಳಿಂದಲೂ ಮಾಹಿತಿ ಲಭ್ಯವಾಗಿದೆ. ಆಯಾ ತಿಂಗಳ ಪಡಿತರ ಹಂಚಿಕೆಯನ್ನು ತಿಂಗಳ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕಿರುವುದರಿಂದ ಸಮಸ್ಯೆ ಹೆಚ್ಚು ಇರುವ ಜಿಲ್ಲೆಗಳಲ್ಲಿ ಮ್ಯಾನುವಲ್‌ ಆಗಿ ವಿತರಿಸಿ ವಿವರಗ ಳನ್ನು ದತ್ತಾಂಶದಲ್ಲಿ ಅಪ್‌ಲೋಡ್‌ ಮಾಡುವಂತೆ ಜಿಲ್ಲೆಗಳ ಜಂಟಿ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.
-ಡಾ| ಶಮ್ಲಾ ಇಕ್ಬಾಲ್‌, ಆಯುಕ್ತರು, ಆಹಾರ ಇಲಾಖೆ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.