ಕೇಂದ್ರದ ಲಸಿಕಾ ಉತ್ಸವಕ್ಕೆ ಹಿನ್ನಡೆ! ಗೊಂದಲ ಸೃಷ್ಟಿಸುವ ಆರೋಗ್ಯ ಇಲಾಖೆಯ ಎರಡು ವರದಿಗಳು


Team Udayavani, Apr 16, 2021, 6:40 AM IST

ಕೇಂದ್ರದ ಲಸಿಕಾ ಉತ್ಸವಕ್ಕೆ ಹಿನ್ನಡೆ! ಗೊಂದಲ ಸೃಷ್ಟಿಸುವ ಆರೋಗ್ಯ ಇಲಾಖೆಯ ಎರಡು ವರದಿಗಳು

ಎಪ್ರಿಲ್‌ 11ರಿಂದ 14ರ ವರೆಗೆ ದೇಶಾದ್ಯಂತ ಕೊರೊನಾ ಲಸಿಕಾ ಉತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಆದರೆ ಈ ಅವಧಿಯಲ್ಲಿ ವ್ಯಾಕ್ಸಿನೇಶನ್‌ ಹೆಚ್ಚಾಗುವ ಬದಲು ಶೇ. 12ರಷ್ಟು ಕಡಿಮೆಯಾಗಿದೆ. ಆದರೆ ಈ ಮಧ್ಯೆ 1.28 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರಕಾರ ಹೇಳಿಕೊಂಡಿದೆ.

ಎಷ್ಟಾಯಿತು?
ಲಸಿಕಾ ಉತ್ಸವದ ಸಮಯದಲ್ಲಿ ದೇಶಾದ್ಯಂತ 99.64 ಲಕ್ಷ ಡೋಸ್‌ ಲಸಿಕೆಗಳನ್ನು ನೀಡಲಾಗಿದೆ. ಅಂದರೆ ಎಪ್ರಿಲ್‌ 11ರಿಂದ 14ರ ವರೆಗೆ. ಈ ಮೊದಲು ಎ. 7ರಿಂದ 10ರ ವರೆಗೆ 1.13 ಕೋಟಿ, ಎ. 3ರಿಂದ 6ರ ನಡುವೆ 1.10 ಕೋಟಿ ಮತ್ತು ಮಾ. 30ರಿಂದ  ಎ. 2ರ ವರೆಗೆ 99.99 ಲಕ್ಷ ಲಸಿಕೆಗಳನ್ನು ನೀಡಲಾಗಿತ್ತು. ಲಸಿಕೆ ಉತ್ಸವದಲ್ಲಿ ವ್ಯಾಕ್ಸಿನೇಶನ್‌ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಸಾಧ್ಯವಾದಷ್ಟು ಹೆಚ್ಚಿನ ಜನರಿಗೆ ಲಸಿಕೆಯನ್ನು ನೀಡುವ ಉದ್ದೇಶದೊಂದಿಗೆ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ವಿಪರ್ಯಾಸ ಎಂದರೆ ಲಸಿಕಾ ಉತ್ಸವದ ಪ್ರತೀ ದಿನ ಸಂಜೆ ಬಿಡುಗಡೆ ಮಾಡುವ ದತ್ತಾಂಶಗಳಿಗೆ ಹಾಗೂ ಅಭಿಯಾನದ ಕೊನೆಯಲ್ಲಿ ಬಿಡುಗಡೆ ಮಾಡಿದ ದತ್ತಾಂಶಗಳಿಗೆ ತಾಳೆಯಾಗುತ್ತಿಲ್ಲ. ಈ ಕುರಿತಂತೆ ಎರಡು ವಾದಗಳು ಎದ್ದಿವೆ.

ವರದಿ 1 :
ಎಪ್ರಿಲ್‌ 15ರಂದು ಬಿಡುಗಡೆ ಮಾಡಲಾದ ವರದಿಯಂತೆ, 1.28 ಕೋಟಿ ಲಸಿಕೆ ಹಾಕಲಾಯಿತು. ಅಭಿಯಾನದ ಮೊದಲ ದಿನ 29.33 ಲಕ್ಷ ಲಸಿಕೆ, ಎರಡನೇ ದಿನ 40.04 ಲಕ್ಷ, ಮೂರನೇ ದಿನ 26.46 ಲಕ್ಷ ಮತ್ತು ನಾಲ್ಕನೇ ದಿನ 33.13 ಲಕ್ಷ ಲಸಿಕೆ ನೀಡಲಾಗಿದೆ.

ವರದಿ 2 :
ಈ ಅಂಕಿ ಅಂಶಗಳು ಪ್ರತೀ ದಿನ ಸಂಜೆ ಹೊರಡಿಸುವ ಬುಲೆಟಿನ್‌ ಆಗಿದೆ. ಇದರಲ್ಲಿ ಆರೋಗ್ಯ ಸಚಿವಾಲಯವು ದೈನಂದಿನ ವ್ಯಾಕ್ಸಿನೇಶನ್‌ಗಳ ಡೇಟಾವನ್ನು ಬಿಡುಗಡೆ ಮಾಡುತ್ತದೆ. ಅದರಂತೆ ಈ 4 ದಿನಗಳಲ್ಲಿ 12 ಮಿಲಿಯನ್‌ ಲಸಿಕೆ ಪ್ರಮಾಣವನ್ನು ಅನ್ವಯಿಸಲಾಗಿದೆ. ಎಪ್ರಿಲ್‌ 11ರ ಬುಲೆಟಿನ್‌ನಲ್ಲಿ, ಉತ್ಸವದ ಮೊದಲ ದಿನದಂದು 27 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ ಎಂದು ವರದಿಯಾಗಿದೆ. ಎರಡನೇ ದಿನ 37 ಲಕ್ಷ, ಮೂರನೇ ದಿನ 25 ಲಕ್ಷ ಮತ್ತು ನಾಲ್ಕನೇ ದಿನ 31.39 ಲಕ್ಷ ಡೋಸ್‌ ನೀಡಲಾಗಿತ್ತು.

ಲಸಿಕೆಯ ಕೊರತೆ ಜಗಳ
ಇತ್ತೀಚಿನ ದಿನಗಳಲ್ಲಿ ಲಸಿಕೆ ನೀಡುವಿಕೆ ಪ್ರಮಾಣ ಕಡಿಮೆಯಾಗಿರುವುದರ ಕುರಿತು ತಜ್ಞರು ಮತ್ತು ರಾಜ್ಯಗಳು ಅಪಸ್ವರ ಎತ್ತಿವೆ. ಲಸಿಕೆ ಕೊರತೆಯ ಕಾರಣದಿಂದಾಗಿ ಲಸಿಕೆ ನೀಡುವಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಕೆಲವೊಂದು ರಾಜ್ಯ ಸರಕಾರಗಳು ಪ್ರತಿಪಾದಿಸಿದರೆ ದೇಶದಲ್ಲಿ ಲಸಿಕೆಗಳ ಕೊರತೆಯಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಹೇಳಿದ್ದಾರೆ. ಲಸಿಕೆ ಪೂರೈಕೆಯ ಕೊರತೆ ಇದೆ ಎಂದು ಮಹಾರಾಷ್ಟ್ರ, ಛತ್ತೀಸ್‌ಗಢ, ಆಂಧ್ರಪ್ರದೇಶ, ಪಂಜಾಬ್‌, ತೆಲಂಗಾಣ, ರಾಜಸ್ಥಾನ ಮತ್ತು ಒಡಿಶಾ ರಾಜ್ಯಗಳು ದೂರಿವೆ.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.