Rajasthan; ಮಾಜಿ ಕೈ ಶಾಸಕರು, ಐಪಿಎಸ್ ಅಧಿಕಾರಿಗಳು ಸೇರಿ ಹಲವರು ಬಿಜೆಪಿಗೆ
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ನಂಬಿಕೆ ಹೆಚ್ಚಾಗಿದೆ: ಸಿಪಿ ಜೋಶಿ
Team Udayavani, Oct 28, 2023, 4:06 PM IST
ಜೈಪುರ : ವಿಧಾನಸಭಾ ಚುನಾವಣೆ ವೇಳೆ ಪಕ್ಷಾಂತರ ಪರ್ವ ತೀವ್ರವಾಗಿದ್ದು, ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರು ಸೇರಿ ಪ್ರಮುಖ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಾಜಿ ಶಾಸಕರಾದ ಚಂದ್ರಶೇಖರ್ ವೈದ್, ನಂದಲಾಲ್ ಪೂನಿಯಾ, ಜೈಪುರ ಮಾಜಿ ಮೇಯರ್ ಜ್ಯೋತಿ ಖಂಡೇಲ್ವಾಲ್ ಸೇರಿದಂತೆ ಹಲವು ನಾಯಕರು ಶನಿವಾರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿಗೆ ಸೇರ್ಪಡೆಗೊಂಡ ಇತರ ನಾಯಕರಲ್ಲಿ ಮಾಂಡವಾದಿಂದ ಸ್ವತಂತ್ರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಹರಿ ಸಿಂಗ್ ಚರಣ್, ಕಾಂಗ್ರೆಸ್ ನಾಯಕ ಸನ್ವರ್ಮಲ್ ಮೆಹಾರಿಯಾ ಮತ್ತು ಮಾಜಿ ಐಪಿಎಸ್ ಅಧಿಕಾರಿಗಳಾದ ಕೇಸರ್ ಸಿಂಗ್ ಶೇಖಾವತ್ ಮತ್ತು ಭೀಮ್ ಸಿಂಗ್ ಸೇರಿದ್ದಾರೆ.
ಜೈಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಸಿಪಿ ಜೋಶಿ ”ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ನಂಬಿಕೆ ಹೆಚ್ಚಾಗಿದೆ. ಇಂದು ಜನರು ಮೋದಿಯವರ ಭರವಸೆಯ ಮೇಲೆ ನಂಬಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ನೀಡಿದ ಭರವಸೆಗಳನ್ನು ಜನರು ನಂಬುವುದನ್ನು ನಿಲ್ಲಿಸಿದ್ದಾರೆ. ಸಂಪೂರ್ಣ ಕೃಷಿ ಸಾಲ ಮನ್ನಾ, ನಿರುದ್ಯೋಗ ಭತ್ಯೆ, ಮಹಿಳಾ ಭದ್ರತೆ, ಅಭಿವೃದ್ಧಿ ಮತ್ತು ಹಣದುಬ್ಬರವನ್ನು ನಿಯಂತ್ರಿಸುವುದು ಸೇರಿದಂತೆ ಖಾತರಿಗಳು ಏನಾಯಿತು ಎಂಬುದನ್ನು ಅವರು ನೋಡಿದ್ದಾರೆ” ಎಂದರು.
ಇಡಿ ಅಧಿಕಾರಿಗಳ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿಕೆಯನ್ನು ಖಂಡಿಸಿದ ಜೋಶಿ,ಇಂತಹ ಅವಹೇಳನಕಾರಿ ಪದಗಳನ್ನು ಬಳಸುವುದು ಖಂಡನೀಯ ಎಂದು ಹೇಳಿದರು. “ನಾಯಿಗಳಿಗಿಂತಲೂ ಹೆಚ್ಚು ಇಡಿ ದೇಶದಲ್ಲಿ ಓಡಾಡುತ್ತಿದೆ ಎಂದು ಮುಖ್ಯಮಂತ್ರಿ (ಭೂಪೇಶ್ ಬಘೇಲ್) ಹೇಳಬೇಕಿತ್ತು ಎಂದಿದ್ದಾರೆ. ಇದಕ್ಕಿಂತ ದೊಡ್ಡ ದೌರ್ಭಾಗ್ಯ ಇನ್ನೇನಿದೆ?” ಎಂದು ಕಿಡಿ ಕಾರಿದರು.
ಬಿಜೆಪಿ ರಾಜಸ್ಥಾನ ಚುನಾವಣ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ ”ಗೆಹ್ಲೋಟ್ ಸರ್ಕಾರದ ಕೌಂಟ್ಡೌನ್ ಪ್ರಾರಂಭವಾಗಿದೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಅಂತರದಿಂದ ಗೆಲ್ಲುವುದು ಸ್ಪಷ್ಟವಾಗಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್