ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?
Team Udayavani, Oct 21, 2021, 11:18 AM IST
ಮುಂಬಯಿ: ಡ್ರಗ್ಸ್ ಸೇವನೆ ಹಿನ್ನೆಲೆಯಲ್ಲಿ ಆರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್
ಖಾನ್ನನ್ನು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಗುರುವಾರ ಭೇಟಿಯಾಗಿ ಮಾತುಕತೆ ನೆಡೆಸಿದ್ದಾರೆ.
ಜಾಮೀನು ನೀಡಲು ಮುಂಬಯಿಯ ವಿಶೇಷ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ಆರ್ಯನ್ ಪರ
ವಕೀಲರು ಬಾಂಬೆ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಬಾಂಬೆ ಹೈಕೋರ್ಟ್ ಅಕ್ಟೋಬರ್ 26 ರಂದು ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ನಿರ್ಧರಿಸಿದ್ದರಿಂದ ಆರ್ಯನ್ ಕನಿಷ್ಠ 5 ದಿನಗಳ ಕಾಲ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲೇ ಇರಬೇಕಾಗಿದೆ.
ಆರ್ಯನ್ ಬಂಧನದ ಬಳಿಕ ಇದೆ ಮೊದಲ ಬಾರಿ ಶಾರುಖ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಪುತ್ರನ ಭೇಟಿಗಾಗಿ ಜೈಲಿಗೆ ಆಗಮಿಸಿದ್ದಾರೆ.
“ಆರ್ಯನ್ ಡ್ರಗ್ಸ್ ಸಂಬಂಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎನ್ನಲು ಅವರ ವಾಟ್ಸ್ಆ್ಯಪ್ ಚಾಟ್ನಲ್ಲಿ ಸಾಕ್ಷಿಗಳಿವೆ. ಹಾಗಾಗಿ ಅವರನ್ನು ಬಿಡುಗಡೆಗೊಳಿಸಲು ಸಾಧ್ಯವಿಲ್ಲ.ಬಿಡುಗಡೆ ಮಾಡಿದ ಮೇಲೆ ಅವರು ಇದೇ ಕೃತ್ಯವನ್ನು ಮುಂದುವರಿಸುವುದಿಲ್ಲ ಎನ್ನುವುದಕ್ಕೂ ಆಧಾರವಿಲ್ಲ’ ಎಂದು ನ್ಯಾಯಾಲಯ ಹೇಳಿತ್ತು.
“ಆರ್ಯನ್ ದೊಡ್ಡ ಜಾಲದ ಭಾಗವಾಗಿದ್ದಾರೆ. ಅವರ ವಾಟ್ಸ್ ಆ್ಯಪ್ ಚಾಟಿಂಗ್ನಲ್ಲಿ ಸಾಬೀತಾಗಿದೆ. ಹಿಂದೆಯೂ ಅದನ್ನೇ ಮಾಡಿರುವುದಕ್ಕೆ ಸಾಕ್ಷ್ಯಗಳಿವೆ. ಅವರು ಡ್ರಗ್ ಸಾಗಣೆದಾರರೊಂದಿಗೆ ಸಂಬಂಧ ಹೊಂದಿರುವುದು ಖಚಿತವಾಗಿದೆ’ ಎಂದು ನ್ಯಾಯಾಧೀಶರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ