ಶಂಭೂರು: ಕೂಲಿ ಕಾರ್ಮಿಕ ಆತ್ಮಹತ್ಯೆ
ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲಾಗಿಲ್ಲವೆಂದು ಮನನೊಂದು ತಂದೆ ಆತ್ಮಹತ್ಯೆ
Team Udayavani, May 20, 2023, 5:10 AM IST
ಬಂಟ್ವಾಳ: ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ನೊಂದುಕೊಳ್ಳುತ್ತಿದ್ದ ಶಂಭೂರು ಗ್ರಾಮದ ಮಜಿಬೈಲು ನಿವಾಸಿ ಕೂಲಿ ಕಾರ್ಮಿಕನೋರ್ವ ಮನೆಯ ಪಕ್ಕದ ಗುಡ್ಡದಲ್ಲಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡ ಘಟನೆ ಮೇ 18ರಂದು ಬೆಳಕಿಗೆ ಬಂದಿದೆ.
ಮಜಿಬೈಲು ನಿವಾಸಿ ಕೃಷ್ಣಪ್ಪ ಮೂಲ್ಯ (52) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ಯೋಗಿನಿ ಅವರು ತನ್ನ ತಾಯಿ ಮನೆ ಬೇಂಕ್ಯದಲ್ಲಿ ವಾಸವಾಗಿದ್ದು, ಅವರ 2ನೇ ಪುತ್ರಿಗೆ ಅನಾರೋಗ್ಯವಿದ್ದು, ಚಿಕಿತ್ಸೆಗೆ ಹಣವಿಲ್ಲ ಎಂದು ಬೇಸರಿಸಿಕೊಳ್ಳುತ್ತಿದ್ದರು. ಸುರತ್ಕಲ್ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಅವರು ಮೇ 16ರಂದು ಪತ್ನಿಯ ತಾಯಿ ಮನೆಗೆ ತೆರಳಿ ಮರುದಿನ ಸುರತ್ಕಲ್ಗೆ ಹೋಗುವುದಾಗಿ ತೆರಳಿದ್ದರು.
ಆದರೆ ಅವರು ನೇರವಾಗಿ ಶಂಭೂರಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ