ಕಮಲ ಭದ್ರಕೋಟೆ ಶಿವಮೊಗ್ಗ ನಗರದಲ್ಲಿ ಶಾಂತಿ ಮಂತ್ರ


Team Udayavani, May 3, 2023, 8:07 AM IST

bjp cong election fight

ಶಿವಮೊಗ್ಗ: ಬಿಜೆಪಿ ಭದ್ರಕೋಟೆ ಎನಿಸಿರುವ ಶಿವಮೊಗ್ಗ ನಗರದಲ್ಲಿ ಈ ಬಾರಿ ಶಾಂತಿಮಂತ್ರದ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ನೆಮ್ಮದಿಯುತ ಶಿವಮೊಗ್ಗ ಭರವಸೆ ಮೂಲಕ ಮತಯಾಚನೆ ಮಾಡಲಾಗುತ್ತಿದೆ. ಬಿಜೆಪಿ ಎಂದಿನಂತೆ ಹಿಂದುತ್ವದ ವಿಚಾರಗಳನ್ನೇ ಪ್ರಚಾರ ಮಾಡುತ್ತಿದೆ. ಶಾಸಕ ಕೆ.ಎಸ್‌.ಈಶ್ವರಪ್ಪ ರಾಜಕೀಯ ನಿರ್ಗಮನದ ಮೂಲಕ ಕ್ಷೇತ್ರದಲ್ಲಿ ಹೊಸ ರಾಜಕಾರಣ ಆರಂಭವಾಗಿದೆ. ಈ ಬಾರಿ ಮಾಜಿ ಸಚಿವ ಈಶ್ವರಪ್ಪ ಬದಲಿಗೆ, ಸಾಮಾನ್ಯ ಕಾರ್ಯಕರ್ತ, ಪ್ರಖರ ಹಿಂದೂ ಹೋರಾಟಗಾರ ಎಸ್‌.ಎನ್‌. ಚನ್ನಬಸಪ್ಪಗೆ ಬಿಜೆಪಿ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ ಮಾಜಿ ಶಾಸಕ ಎಚ್‌.ಎಂ. ಚಂದ್ರಶೇಖರಪ್ಪ ಪುತ್ರ, ಪಾಲಿಕೆ ಸದಸ್ಯ ಎಚ್‌.ಸಿ. ಯೋಗೇಶ್‌ಗೆ ಟಿಕೆಟ್‌ ನೀಡಿದೆ.

ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಇಲ್ಲದೆ ಒದ್ದಾಡುತ್ತಿದ್ದ ಜೆಡಿಎಸ್‌ಗೆ ಆಯನೂರು ಮಂಜುನಾಥ್‌ ಸೇರುವ ಮೂಲಕ ತ್ರಿಕೋನ ಸ್ಪರ್ಧೆ ಹುಟ್ಟು ಹಾಕಿದ್ದಾರೆ. ಅವರ ಶಾಂತಿಯುತ “ಶಿವಮೊಗ್ಗ” ಫ್ಲೆಕ್ಸ್‌, ಪೋಸ್ಟರ್‌ಗಳು ಕ್ಷೇತ್ರದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿವೆ.

ನನಗೆ ಸಿಗದಿದ್ದರೆ ಮಗನಿಗಾದರೂ ಟಿಕೆಟ್‌ ಕೊಡಿ ಎಂದು ಕೇಳಿದ್ದ ಕೆ.ಎಸ್‌.ಈಶ್ವರಪ್ಪ ಈಗ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ. ವೈಯಕ್ತಿಕವಾಗಿ ಹೆಚ್ಚು ಮತಗಳನ್ನು ಹೊಂದಿರುವ ಈಶ್ವರಪ್ಪ ಅವರು ಗೆಲುವಿಗೆ ಹೇಗೆ ಸಹಕಾರಿಯಾಗುತ್ತಾರೆ ಕಾದು ನೋಡಬೇಕಿದೆ. 11 ಮಂದಿಯಲ್ಲಿ ಯಾರಿಗೆ ಟಿಕೆಟ್‌ ಕೊಟ್ಟರೂ ಕೆಲಸ ಮಾಡುತ್ತೇವೆ ಎನ್ನುತ್ತಿದ್ದ ಕಾಂಗ್ರೆಸ್‌ನಲ್ಲಿ ಅಸಮಾಧಾನ ಕಾಡುತ್ತಿದೆ. ಮಾಜಿ ಶಾಸಕರ ಆದಿಯಾಗಿ ಹಲವು ಪ್ರಮುಖ ಮುಖಂಡರು ಜೆಡಿಎಸ್‌ ಸೇರಿದ್ದಾರೆ. ಕ್ಷೇತ್ರದಲ್ಲಿ ಲೆಕ್ಕಕ್ಕೆ ಇಲ್ಲದ ಜೆಡಿಎಸ್‌ ಈಗ ಪ್ರಬಲ ಪ್ರತಿಸ್ಪ ರ್ಧಿಯಾಗಿ ಹೊರಹೊಮ್ಮಿದೆ. ಆಯನೂರು ಮಂಜುನಾಥ್‌ ಹಲವು ತಿಂಗಳುಗಳ ಹಿಂದೆಯೇ ಸ್ಪರ್ಧೆ ತೀರ್ಮಾನ ಮಾಡಿದ್ದರು ಎಂಬುದು ಈಗ ಬಹಿರಂಗಗೊಳ್ಳುತ್ತಿದೆ.
ಬಿಜೆಪಿ ಅಭ್ಯರ್ಥಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮೋದಿ, ಅಮಿತ್‌ ಶಾ ರ್ಯಾಲಿ ವರದಾನವಾಗಬಹುದು.

ಪಾಲಿಕೆ ಸದಸ್ಯರಾಗಿ ಚನ್ನಬಸಪ್ಪ ಮೇಲಿರುವ ಆರೋಪಗಳು, ಹಿಂದುತ್ವ ವಿಚಾರದಲ್ಲಿ ನೀಡಿರುವ ಹೇಳಿಕೆಗಳು ಮುಳುವಾಗಬಹುದು. ಕಾಂಗ್ರೆಸ್‌ ಅಭ್ಯರ್ಥಿಗೆ ಸಾಂಪ್ರದಾಯಿಕ ಮತಗಳು ವರದಾನವಾಗ ಬಹುದು. ಪಕ್ಷದೊಳಗಿನ ಬಂಡಾಯ ಅವರಿಗೆ ಹಿನ್ನಡೆ ತರಬಹುದು. ಜೆಡಿಎಸ್‌ ಅಭ್ಯರ್ಥಿಗೆ 30 ವರ್ಷದ ಅನುಭವ, ಕಾರ್ಮಿಕ ವರ್ಗ, ಕಾಂಗ್ರೆಸ್‌ನಿಂದ ಬಂದಿರುವ ಮುಖಂಡರ ಪ್ರಚಾರ ಲಾಭ ತರಬಹುದು. ಕ್ಷೇತ್ರದಲ್ಲಿ ಮುಸ್ಲಿಮರೇ ಬಹುಸಂಖ್ಯಾಕರು. ಬಿಜೆಪಿ ಮೊದಲಿನಿಂದಲೂ ಹಿಂದೂ, ಮುಸ್ಲಿಂ ಮತ ಧ್ರುವೀಕರಣದಲ್ಲಿ ಯಶಸ್ಸು ಕಂಡು ಅನಾಯಾಸವಾಗಿ ಗೆದ್ದಿದೆ. ಹಿಂದೂ-ಮುಸ್ಲಿಂ ರಾಜಕಾರಣದ ಹೊರತಾಗಿಯೂ ಇಲ್ಲಿ ಮತ ಹಾಕಿದ ಉದಾಹರಣೆಗಳಿವೆ.

~ ಶರತ್‌ ಭದ್ರಾವತಿ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.