ಹೊಳೆ ದಾಟಿದ ಮೇಲೆ ಅಂಬಿಗ ಏನೋ ಆದ: ಅನ್ಸಾರಿ ವಿರುದ್ಧ ಶರವಣ ಆಕ್ರೋಶ
Team Udayavani, Oct 17, 2021, 2:25 PM IST
ಬೆಂಗಳೂರು: ‘ಇಕ್ಬಾಲ್ ಅನ್ಸಾರಿ ಅವರೇ ನೀವು ಇಷ್ಟು ಬೇಗ ಹಳೆಯದನ್ನೆಲ್ಲ ಮರೆತರೆ ಹೇಗೆ? ನಿಮ್ಮ ಹುಳುಕು ಮುಚ್ಚಿಕೊಳ್ಳಲು ಹೆಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಬೇಡ’ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ ಭಾನುವಾರ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
‘ಕೊಪ್ಪಳದಲ್ಲಿ ನೀವು ಎಷ್ಟು ಕೊನೆಯಲ್ಲಿದ್ದಿರಿ? ಕಾಂಗ್ರೆಸ್’ನಲ್ಲಿ ನಿಮ್ಮ ಸ್ಥಾನ ಎಷ್ಟು ಕೊನೆಯಲ್ಲಿತ್ತು ಎನ್ನುವುದು ಎನ್ನುವುದು ನಿಮಗಿಂತ ಕೊಪ್ಪಳದ ಜನತೆಗೆ ಚೆನ್ನಾಗಿ ಗೊತ್ತಿದೆ. ಜೆಡಿಎಸ್ ಅಭ್ಯರ್ಥಿ ಆಗಿದ್ದಾಗ ಎರಡು ಸಲ ಗೆದ್ದಿರಿ. ಅದೇ ಕಾಂಗ್ರೆಸ್ ಪಕ್ಷದಲ್ಲಿ ಎರಡು ಸಲ ಅಭ್ಯರ್ಥಿ ಆದಾಗ ಮಕಾಡೆ ಮಲಗಿದ್ದು ಯಾಕೆ?’ ಎಂದು ಪ್ರಶ್ನಿಸಿದ್ದಾರೆ.
‘ಧರ್ಮಸಿಂಗ್ ಸಂಪುಟದಲ್ಲಿ ಪ್ರಮಾಣ ಸ್ವೀಕರಿಸುವಾಗ ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪ್ರಮಾಣ ತೆಗೆದುಕೊಳ್ಳುವಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿ ಹೋಗಿತ್ತು ಅನ್ಸಾರಿ ಅವರೇ? ಅವತ್ತು ಡಿಸಿಎಂ ಆಗಿ ಪ್ರಮಾಣ ಸ್ವೀಕಾರ ಮಾಡಿದಾಗ ಸಿದ್ದರಾಮಯ್ಯ ಹೆಸರಿನಲ್ಲೇ ನೀವು ಪ್ರಮಾಣ ಯಾಕೆ ಸ್ವೀ ಕರಿಸಲಿಲ್ಲ?’
‘ಗಂಗಾವತಿಯಲ್ಲಿ ಚುನಾವಣೆಯಲ್ಲಿ ಗೆಲ್ಲಲು ಏದುಸಿರು ಬಿಡುತ್ತಿದ್ದ ನೀವು ದಡ ಸೇರಲು ಇದೇ ಕುಮಾರಸ್ವಾಮಿ ಅವರ ನೆರವು ಬೇಕಾಯಿತು. ಹೊಳೆ ದಾಟಿದ ಮೇಲೆ ಅಂಬಿಗ ಏನೋ ಆದ ಎಂಬ ಗಾದೆ ಮಾತಿನಂತೆ ಇದೆ ನಿಮ್ಮ ವರಸೆ’ ಎಂದು ಟ್ವೀಟ್ ಗಳಲ್ಲಿ ಕುಟುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ