ಟಿ.20 ವಿಶ್ವಕಪ್: ಅಕ್ಷರ್ ಪಟೇಲ್ ಜಾಗಕ್ಕೆ ಶಾರ್ದೂಲ್ ಠಾಕೂರ್
Team Udayavani, Oct 13, 2021, 7:01 PM IST
ಹೊಸದಿಲ್ಲಿ : ಟ್ವೆಂಟಿ ವಿಶ್ವಕಪ್ ಪಂದ್ಯಾವಳಿಗಾಗಿ ಭಾರತ ತಂಡದಲ್ಲಿ ಬಿಸಿಸಿಐ ಬದಲಾವಣೆಯೊಂದನ್ನು ಮಾಡಿದ್ದು ತಂಡದ ೧೫ ಆಟಗಾರ ಪಟ್ಟಿಯಲ್ಲಿ ಶಾರ್ದೂಲ್ ಠಾಕೂರ್ ಅವರಿಗೆ ಸ್ಥಾನ ನೀಡಲಾಗಿದ್ದು, ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಸೇರಿಸಲಾಗಿದೆ.
ಬುಧವಾರ ನಡೆದ ಹಿರಿಯ ಆಯ್ಕೆ ಸಮಿತಿಯ ಸದಸ್ಯರ ಸಭೆಯ ಬಳಿಕ ಈ ಬದಲಾವಣೆ ಮಾಡಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಾರ್ದೂಲ್ ಪ್ರಸಕ್ತ ಐಪಿಎಲ್ ನಲ್ಲಿ ಚೆನ್ನೈ ಪರ ಆಡುತ್ತಿದ್ದು 18 ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದರು.
ಟ್ವೆಂಟಿ ವಿಶ್ವಕಪ್ ಪಂದ್ಯಾವಳಿ ಯುಎಇ ಮತ್ತು ಓಮನ್ ನಲ್ಲಿ ಅಕ್ಟೋಬರ್ 17 ರಿಂದ ಆರಂಭವಾಗಲಿದೆ. ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಅಕ್ಟೋಬರ್ 24ರಂದು ಮೊದಲ ಪಂದ್ಯದಲ್ಲೇ ಬದ್ಧ ಎದುರಾಳಿ ಪಾಕಿಸ್ಥಾನವನ್ನು ಎದುರಿಸಲಿದೆ.
ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ. ಎಲ್. ರಾಹುಲ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.