ಏಕೈಕ ಮಹಿಳಾ ಸಚಿವೆಯಾಗಿರುವ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ: ಸಚಿವೆ ಶಶಿಕಲಾ ಜೊಲ್ಲೆ
Team Udayavani, Nov 18, 2020, 7:25 PM IST
ಹುಬ್ಬಳ್ಳಿ: ‘ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನ್ನ ಹೆಸರು ಕೈಬಿಡಲಾಗುತ್ತದೆ ಎಂಬ ಮಾತುಗಳು ಹರಿದಾಡುತ್ತಿವೆ. ಇದು ಮಾಧ್ಯಮ ಸೃಷ್ಟಿ. ಆದರೂ, ಪಕ್ಷದ ನಿರ್ಧಾರಕ್ಕೆ ನಾನು ಸದಾ ಬದ್ಧವಾಗಿರುತ್ತೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಹುಬ್ಬಳ್ಳಿಯ ಉಣಕಲ್ಲದಲ್ಲಿರುವ ಮನೋವಿಕಲ ಬಾಲಕಿಯರ ಸರಕಾರಿ ಬಾಲ ಮಂದಿರಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರು ನೀಡಿದ್ದ ಜವಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಇಲಾಖೆಯಲ್ಲಿ ಹಲವು ಬದಲಾವಣೆಗೆ ಶ್ರಮಿಸಿದ್ದೇನೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೈ ಬಿಡುತ್ತಾರೆ ಎನ್ನುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದೆ. ಏಕೈಕ ಮಹಿಳಾ ಸಚಿವೆಯಾಗಿರುವ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದರು.
ಇದನ್ನೂ ಓದಿ: ಕೋಮು ಸಾಮರಸ್ಯ ಕದಡುತ್ತಿರುವ ಆರೋಪ: ಕಂಗನಾ, ರಂಗೋಲಿಗೆ ಮುಂಬೈ ಪೊಲೀಸರಿಂದ ಮೂರನೇ ಸಮನ್ಸ್
ಮರಾಠ ಅಭಿವೃದ್ಧಿ ಪ್ರಾಧಿಕಾರ ಭಾಷೆಗೆ ಸೀಮಿತಗೊಳಿಸಬಾರದು. ಇದು ಮರಾಠ ಸಮಾಜ ಅಭಿವೃದ್ಧಿಗಾಗಿ. ಸದುದ್ದೇಶದಿಂದ ಈ ಪ್ರಾಧಿಕಾರ ಆರಂಭಿಸಲಾಗಿದೆ. ಇದರಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಕೂಡ ಒಂದಾಗಿದೆ. ಹೆಸರಿನ ಕುರಿತು ಒಂದಿಷ್ಟು ಚರ್ಚೆಗಳು ನಡೆಯುತ್ತಿವೆ ಹೊರತು ನಿಗಮ ಸ್ಥಾಪನೆಗೆ ವಿರೋಧ ವ್ಯಕ್ತವಾಗಿಲ್ಲ. ವೀರಶೈವ ಲಿಂಗಾಯತರಲ್ಲ ಎಲ್ಲಾ ಉಪ ಜಾತಿಗಳನ್ನು ಕಾಣುತ್ತೇವೆ. ಹಿಂದಿನ ಎಲ್ಲಾ ನಿಗಮಗಳು ಇರುವಂತೆ ಈ ನಿಗಮಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ