ಹಸುಗಳನ್ನೇ ಮಾರಾಟ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದರು!


Team Udayavani, Feb 26, 2021, 7:10 AM IST

ಹಸುಗಳನ್ನೇ ಮಾರಾಟ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದರು!

ಕಾರ್ಕಳ: ಇಲ್ಲಿನ ನೀರೆ ಬೈಲೂರಿನ ವೃದ್ಧೆ ಸುಜಾತಾ ಪ್ರಭು ಅವರು ಹೈನುಗಾರಿಕೆಯನ್ನೇ ಮಾಡಿ ಮಕ್ಕಳನ್ನು ಎಂಜಿನಿಯರಿಂಗ್‌ ಓದಿಸಿದ ಸಾಧನೆ ಮಾಡಿದ್ದಾರೆ.

ಬೈಲೂರಿನ ಸುಬ್ರಾಯ ಪ್ರಭು- ಸುಜಾತಾ ದಂಪತಿಗೆ ನಾಲ್ಕು ಮಂದಿ ಹೆಣ್ಣು ಮಕ್ಕಳು. ಅತ್ಯಲ್ಪ ಕೃಷಿ ಭೂಮಿಯಿದೆ. ಮಲ್ಲಿಗೆ ಕೃಷಿ ಮಾಡಿ ಜೀವನ ಸಾಗಿಸುತ್ತಿದ್ದರು. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ದಂಪತಿ ನೋಡಿಕೊಂಡಿದ್ದರು. ಹಿರಿಯ ಇಬ್ಬರು ಪುತ್ರಿಯರಲ್ಲಿ ಒಬ್ಬಳು ಶಿಕ್ಷಕಿ ಯಾದರೆ, ಇನ್ನೊಬ್ಬಳಿಗೆ ನರ್ಸಿಂಗ್‌ ಶಿಕ್ಷಣ ಕೊಡಿಸಿದ್ದರು.

2014ರಲ್ಲಿ ಸುಬ್ರಾಯ ಪ್ರಭುಗಳು ಅನಾರೋಗ್ಯದಿಂದ ನಿಧನ ಹೊಂದಿದರು. ನಿಧರಾಗುವ ಹೊತ್ತಿಗೆ ಕಿರಿಯರಿಬ್ಬರು ಪುತ್ರಿಯರಲ್ಲಿ ಒಬ್ಟಾಕೆ ಎಸೆಸೆಲ್ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆ ಬರೆಯುತ್ತಿದ್ದರು. ಪತಿಯ ನಿಧನದ ಬಳಿಕ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿತ್ತು. ಅವರ ಚಿಕಿತ್ಸೆಗೆ ವ್ಯಯಿಸಿದ್ದ 25 ಲಕ್ಷ ರೂ. ಸಾಲದ ಹೊರೆಯೊಂದಿಗೆ, ಮಕ್ಕಳ ಶಿಕ್ಷಣದ ಹೊರೆಯಿತ್ತು. ಆದರೆ ಅವರು ಕಂಗೆಡಲಿಲ್ಲ.

ಕಿರಿಯ ಮಕ್ಕಳು ಎಂಜಿನಿಯರಿಂಗ್‌ ಸೇರಿದಾಗ ಮಲ್ಲಿಗೆ ಹೂವು ಕಟ್ಟಲು ಜನರಿಲ್ಲದೆ, ಹೈನುಗಾರಿಕೆ ಅವಲಂಬಿಸಿದರು. ಅವರ ವಿದ್ಯಾಭ್ಯಾಸಕ್ಕೆ ಹಾಲು ಮಾರಾಟದಿಂದ ಬಂದ ಆದಾಯ ಅವಲಂಬಿಸಿದರು.

1.5 ಕಿ.ಮೀ. ನಿತ್ಯ ನಡಿಗೆ
ಅಶ್ವಿ‌ನಿ ಬೆಂಗಳೂರಿನ ಬಿಎಂಎಸ್‌ ಕಾಲೇಜಿನಲ್ಲಿ ಕೆಮಿಕಲ್‌ ಎಂಜಿನಿಯರಿಂಗ್‌ ಮಾಡಿದ್ದರೆ, ಕೃತಿಕಾ ಸುಳ್ಯದ ಕೆವಿಜಿ ಕಾಲೇಜಿನಲ್ಲಿ ಸಿವಿಲ್‌ ಎಂಜಿನಿಯರಿಂಗ್‌ ಪೂರೈಸಿದ್ದಾರೆ. ಸರಕಾರಿ ಸೀಟು ಲಭಿಸಿದರೂ ಹಾಸ್ಟೆಲ್‌ ಇತ್ಯಾದಿ ಶುಲ್ಕ ಸೇರಿ ತಲಾ 6 ಲಕ್ಷ ರೂ. ವೆಚ್ಚವಾಗಿದೆ. ನಾಲ್ಕೈದು ಹಸುಗಳಿದ್ದ ಇವರು ನಿತ್ಯ 1.5 ಕಿ.ಮೀ. ನಡೆದು ಬೈಲೂರು ಡೈರಿಗೆ ಹಾಲು ಹಾಕುತ್ತಿದ್ದರು.

ಶಿಕ್ಷಣಕ್ಕಾಗಿ ಹಸು ಮಾರಾಟ
ವೃದ್ಧೆ ಸುಜಾತಾ ಅವರಿಗೆ ಈಗ 62ರ ಇಳಿವಯಸ್ಸು, 90ರ ವಯಸ್ಸಿನ ಅಜ್ಜಿ ಕೂಡ ಇದ್ದಾರೆ. ಅವರು ಕೂಡ ಕೈಲಾದಷ್ಟು ನೆರವು ನೀಡುತ್ತ ಬಂದಿದ್ದಾರೆ. ಇದೀಗ ಸಹಜವಾಗಿ ಆರೋಗ್ಯ ಸಮಸ್ಯೆ ಎದುರಾಗಿದೆ. ಜಾನುವಾರು ಪೋಷಣೆ ಸಾಧ್ಯವಾಗದೆ 1 ವರ್ಷದ ಹಿಂದೆ 5 ಹಸುಗಳನ್ನೂ ಮಾರಿ, ಮಕ್ಕಳ ಅಂತಿಮ ವರ್ಷದ ಶುಲ್ಕ 2 ಲಕ್ಷ ರೂ. ಪಾವತಿಸಿ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಉದ್ಯೋಗದ ನಿರೀಕ್ಷೆಯಲ್ಲಿ ಮಕ್ಕಳು
ಎಂಜಿನಿಯರಿಂಗ್‌ ಪೂರೈಸಿದ ಮಕ್ಕಳಲ್ಲಿ ಒಬ್ಟಾಕೆ ಗುತ್ತಿಗೆ ನೆಲೆಯಲ್ಲಿ ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದರೆ, ಇನ್ನೊಬ್ಟಾಕೆ ಮನೆಯಲ್ಲಿದ್ದಾರೆ. ಇವರು ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಕಷ್ಟದ ಸಂದರ್ಭದಲ್ಲಿ ಕುಟುಂಬದಲ್ಲಿ ಹಲವು ಮಂದಿ ದಾನಿಗಳು ನೆರವು ನೀಡಿದ್ದಾರೆ.

ವಿಮಾನದಲ್ಲಿ ಕರೆದೊಯ್ಯುವಾಸೆ
ತಂದೆ ತಾಯಿ ನನಗಾಗಿ ತ್ಯಾಗ ಮಾಡಿದ್ದಾರೆ. ಅವರ ಋಣ ತೀರಿಸಬೇಕಿದೆ. ನಿರೀಕ್ಷಿತ ಉದ್ಯೋಗ ದೊರೆತಲ್ಲಿ ಅನಂತರ ಕಷ್ಟಪಟ್ಟು ಇಂಜಿನಿಯರಿಂಗ್‌ ಶಿಕ್ಷಣ ಕೊಡಿಸಿದ ತಾಯಿಯನ್ನು ಒಮ್ಮೆ ವಿಮಾನದಲ್ಲಿ ಕರೆದುಕೊಂಡು ಹೋಗುವ ಆಕಾಂಕ್ಷೆ ನನ್ನ ಕನಸಾಗಿದೆ.

-ಅಶ್ವಿ‌ನಿ

ಸಮಾಜಕ್ಕೆ ನೆರವಾಗುವ ಬಯಕೆ
ಉದ್ಯೋಗದ ಜತೆಗೆ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಕಾಂಕ್ಷೆ ಇದೆ. ಸಮಾಜದಲ್ಲಿರುವ ಬಡ ಕುಟುಂಬದ ಪ್ರತಿಭಾವಂತ ಹೆಣ್ಣುಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯಲು ಬಯಸಿದರೆ ಅವರಿಗೆ ಮಾರ್ಗದರ್ಶನ ನೀಡುವುದರ ಜತೆಗೆ ಶಿಕ್ಷಣದ ಖರ್ಚನ್ನೂ ಭರಿಸುವ ಚಿಂತನೆಯಿದೆ.

-ಕೃತಿಕಾ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.