ಶೆಟ್ಟರ್ ಪಕ್ಕಾ RSS, ಕಾಂಗ್ರೆಸ್ಗೆ ಬರಲ್ಲ…: ಎಸ್.ಎಸ್. ಮಲ್ಲಿಕಾರ್ಜುನ್
Team Udayavani, Apr 15, 2023, 6:10 AM IST
ದಾವಣಗೆರೆ: ಮಾಜಿ ಸಿಎಂ ಜಗದೀಶ ಶೆಟ್ಟರ್ ಪಕ್ಕಾ ಆರೆಸ್ಸೆಸ್. ಹಾಗಾಗಿ ಬಿಜೆಪಿಯಲ್ಲಿ ಟಿಕೆಟ್ ತಪ್ಪಿದ್ದರಿಂದ ಅವರು ಕಾಂಗ್ರೆಸ್ಗೆ ಬರುವ ಸಾಧ್ಯತೆ ಇಲ್ಲ ಎಂದು ಮಾಜಿ ಸಚಿವ, ದಾವಣಗೆರೆ ಉತ್ತರ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಜಗದೀಶ ಶೆಟ್ಟರ್ ನಮಗೆ ಸಂಬಂಧಿಕರಾಗಿರುವುದರಿಂದ ಅವರನ್ನು ಮನೆಗೆ ಕರೆಯಬಹುದೇ ವಿನಾ ಪಕ್ಷಕ್ಕಲ್ಲ. ಅವರಷ್ಟೇ ಅಲ್ಲ, ಬಸಣ್ಣ (ಸಿಎಂ ಬಸವರಾಜ ಬೊಮ್ಮಾಯಿ) ಅವರನ್ನೂ ಕರೆಯಬಹುದು. ಆದರೆ ಅದು ಮನೆಗೆ ಸೀಮಿತ, ರಾಜಕೀಯಕ್ಕಲ್ಲ. ಬಿಜೆಪಿಯಲ್ಲಿ ಟಿಕೆಟ್ ಕೊಡದೆ ಇರುವುದರಿಂದ ಬೇಸತ್ತು ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ. ಹಿಂದೆ ಕಾಂಗ್ರೆಸ್ನಲ್ಲಿದ್ದವರನ್ನೆಲ್ಲ ಬಿಜೆಪಿ “ಆಪರೇಷನ್ ಕಮಲ’ ಮಾಡಿ ಸೇರ್ಪಡೆ ಮಾಡಿಕೊಂಡಿತು. ಈಗ ಕಾಲ ಬದಲಾಗಿದೆ. ನಾವು ಕರೆಯದೆ ಇದ್ದರೂ ಬಿಜೆಪಿ ಹಾಗೂ ಇತರ ಪಕ್ಷಗಳಿಂದ ಮುಖಂಡರು ಕಾಂಗ್ರೆಸ್ಗೆ ಬರಲು ಸರದಿಯಲ್ಲಿ ನಿಂತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ