ಶಿಡ್ಲಘಟ್ಟದ ವಾಸವಿ ರಸ್ತೆಯ ದಾಸ್ತಾನು ಮಳಿಗೆಯಲ್ಲಿ ಅಗ್ನಿ ಅವಘಡ : ವಸ್ತುಗಳು ಬೆಂಕಿಗಾಹುತಿ
Team Udayavani, May 17, 2021, 4:15 AM IST
ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ವಾಸವಿ ರಸ್ತೆಯಲ್ಲಿರುವ ಒಂದು ದಾಸ್ತಾನು ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಬಹು ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ನಗರದ ವಾಸವಿ ರಸ್ತೆಯಲ್ಲಿ ವಿಜಯಪ್ರಕಾಶ್ ಎಂಬವರಿಗೆ ಸೇರಿದರೆನ್ನಲಾದ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 2.30 ರಲ್ಲಿ ಜನನಿಬಿಡ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದರಿಂದ ಎಚ್ಚೆತ್ತುಕೊಂಡ ನಾಗರಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರ ಮಾಹಿತಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕೆಲಸವನ್ನು ಮಾಡಿ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ ಅಗ್ನಿ ಅವಘಡ ಹೇಗೆ ಸಂಭವಿಸಿತು ಎಂಬುದು ತಿಳಿದುಬಂದಿಲ್ಲ.