ಶಿಡ್ಲಘಟ್ಟ : ಬ್ಯಾಂಕ್ ಕಳ್ಳತನಕ್ಕೆ ಬಂದು ಸಿಸಿ ಕ್ಯಾಮೆರಾದ DVR ಹೊತ್ತೊಯ್ದ ಕಳ್ಳರು
Team Udayavani, May 15, 2021, 7:06 PM IST
ಶಿಡ್ಲಘಟ್ಟ : ಬ್ಯಾಂಕಿನ ವ್ಯವಸ್ಥಾಪಕರ ಕೊಠಡಿಯ ಗೋಡೆಯಲ್ಲಿ ರಂದ್ರ ಕೊರೆದು ಬ್ಯಾಂಕ್ ದರೋಡೆ ಮಾಡಲು ವಿಫಲ ಯತ್ನ ನಡೆಸಿರುವ ಘಟನೆ ನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.
ನಗರದ ಹೃದಯ ಭಾಗವಾದ ರೇಷ್ಮೆ ಗೂಡುಮಾರುಕಟ್ಟೆ ಮುಂಬಾಗದಲ್ಲಿ ಇರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ದರೋಡೆಕೋರರು ಬ್ಯಾಂಕ್ ಲೂಟಿ ಮಾಡಲು ಪ್ರಯತ್ನ ನಡೆಸಿದ್ದು ಅದರಲ್ಲಿ ವಿಫಲರಾಗಿದ್ದಾರೆ ಆದರೇ ಬ್ಯಾಂಕಿನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳಲ್ಲಿ ಭಾವಚಿತ್ರಗಳು ಸೆರೆಹಿಡಿದಿರುತ್ತದೆಯೆಂಬ ಭೀತಿಯಿಂದ ಡಿವಿಆರ್ ಎತ್ತಿಕೊಂಡು ಪರಾರಿಯಾಗಿದ್ದಾರೆ.
ಶುಕ್ರವಾರ ರಾತ್ರಿ ವೇಳೆಯಲ್ಲಿ ಯಾರು ಓಡಾಡದ ಸಂದರ್ಭವನ್ನು ನೋಡಿಕೊಂಡು ದರೋಡೆಕೋರರು ಬ್ಯಾಂಕಿನ ವ್ಯವಸ್ಥಾಪಕರ ಕೊಠಡಿಯಲ್ಲಿ ರಂದ್ರ ಕೊರೆದು ಒಳನುಗ್ಗಿರುವ ದರೋಡೆಕೋರರು ಬ್ಯಾಂಕಿನ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಬ್ಯಾಂಕಿನ ಸೈರನ್ ಸಹ ನಿಷ್ಕ್ರೀಯಗೊಳಿಸಿ ಬ್ಯಾಂಕಿನ ಲಾಕರ್ ಮತ್ತು ಸ್ಟ್ರಾಂಗ್ ರೂಂ ಮೀಟಲು ಯತ್ನಿಸಿ ತೆರಳಿದ್ದಾರೆ.
ಇದನ್ನೂ ಓದಿ :ಕೋವಿಡ್ ಸಮರದ ಸೇನಾನಿಗಳು ರಾಜ್ಯದ ಅಮೂಲ್ಯ ಆಸ್ತಿ : ಮುಖ್ಯಮಂತ್ರಿ ಬಿಎಸ್ ವೈ
ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳೆಚ್ಚು ತಜ್ಞರು ಪರಿಶೀಲಿಸಿದ್ದಾರೆ ಸಿಪಿಐ ಸುರೇಶ್ ಹಾಗೂ ಪಿಎಸ್ಐ ಸತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ ಬ್ಯಾಂಕಿನ ವ್ಯವಸ್ಥಾಪಕ ಸತೀಶ್ ನೀಡಿದ ದೂರನ್ನು ದಾಖಲಿಸಿಕೊಂಡು ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ