ಸಮಾಜವಾದದ ನೆಲದಲ್ಲಿ ಕೇಸರಿ ಬಲ: ಶಿವಮೊಗ್ಗ 7 ಕ್ಷೇತ್ರಗಳು


Team Udayavani, Jan 24, 2023, 6:25 AM IST

ಸಮಾಜವಾದದ ನೆಲದಲ್ಲಿ ಕೇಸರಿ ಬಲ: ಶಿವಮೊಗ್ಗ 7 ಕ್ಷೇತ್ರಗಳುಸಮಾಜವಾದದ ನೆಲದಲ್ಲಿ ಕೇಸರಿ ಬಲ: ಶಿವಮೊಗ್ಗ 7 ಕ್ಷೇತ್ರಗಳು

ಒಂದು ಕಾಲದಲ್ಲಿ ಸಮಾಜವಾದ ಸಿದ್ಧಾಂತದ ತೊಟ್ಟಿಲಾಗಿದ್ದ ಶಿವಮೊಗ್ಗ, ಈಗ ಕೇಸರಿ ಪಾಳಯದ ಗಟ್ಟಿ ನೆಲವಾಗಿದೆ. ನಾಲ್ಕು ಮಂದಿ ಸಿಎಂಗಳನ್ನು ಕೊಟ್ಟಿರುವ ಈ ಜಿಲ್ಲೆ ವೈವಿಧ್ಯಮಯ ರಾಜಕಾರಣಕ್ಕೆ ಹೆಸರುವಾಸಿ. ಶಾಂತವೇರಿ ಗೋಪಾಲಗೌಡರು, ಎಸ್‌.ಬಂಗಾರಪ್ಪ, ಯಡಿಯೂರಪ್ಪ ಇಲ್ಲಿನ ಪ್ರಮುಖರು…

ಕ್ಷೇತ್ರ ದರ್ಶನ
ಶಿವಮೊಗ್ಗ: ಈ ಜಿಲ್ಲೆ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ. ಈವರೆಗೆ ನಾಲ್ವರು ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆ. ಒಂದು ಕಾಲದಲ್ಲಿ ಸಮಾಜವಾದಿ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದ ಜಿಲ್ಲೆ ಈಗ ಬಿಜೆಪಿ ಭದ್ರಕೋಟೆ. ಕಾಂಗ್ರೆಸ್‌, ಬಿಜೆಪಿ ನಡುವೆ ನೇರಾನೇರ ಹಣಾಹಣಿ ಇದ್ದರೂ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್‌ ಪ್ರಾಬಲ್ಯ ಇದೆ. ಒಟ್ಟು ಏಳು ತಾಲೂಕುಗಳಿದ್ದು ಒಂದು ಮೀಸಲು ಕ್ಷೇತ್ರವಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ ಸಾಮಾನ್ಯ ಕ್ಷೇತ್ರಗಳಾಗಿದ್ದು, ಶಿವಮೊಗ್ಗ ಗ್ರಾಮಾಂತರ ಎಸ್‌ಸಿ ಮೀಸಲು ಕ್ಷೇತ್ರವಾಗಿದೆ.

ಮಲೆನಾಡು, ಅರೆ ಮಲೆನಾಡು ವಾತಾವರಣದ ಈ ಜಿಲ್ಲೆ ಅನೇಕ ಸಮಸ್ಯೆಗಳನ್ನು ಒಡಲಲ್ಲಿ ಇಟ್ಟುಕೊಂಡಿದೆ. ಇಲ್ಲಿಂದ ಆರಂಭವಾದ ಕಾಗೋಡು ಚಳವಳಿ ಭೂ ಸುಧಾರಣಾ ಕಾಯ್ದೆ ಜಾರಿಗೆ ಕಾರಣವಾಯಿತು. ರೈತರ ಹೋರಾಟ ಗುಂಡೂರಾವ್‌ ಸರಕಾರ ಪತನಕ್ಕೆ ಕಾರಣವಾಯಿತು. ದಲಿತ ಸಂಘರ್ಷ ಸಮಿತಿ ಹೋರಾಟ, ಬಗರ್‌ಹುಕುಂ ಹೋರಾಟಗಳು ರಾಜ್ಯ ರಾಜಕಾರಣದ ದಿಕ್ಕು ಬದಲಿಸಿವೆ.

ಕಡಿದಾಳು ಮಂಜಪ್ಪ, ಜೆ.ಎಚ್‌.ಪಟೇಲ್‌, ಬಂಗಾರಪ್ಪ, ಬಿ.ಎಸ್‌. ಯಡಿಯೂರಪ್ಪ ಸಿಎಂ ಗಾದಿಗೆ ಏರಿದ್ದು ಹೋರಾಟಗಳ ಮೂಲ ಕವೇ. ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆದರೂ ಪೂರ್ಣಾವಧಿ ಸಿಎಂ ಆಗಿ ಆಡಳಿತ ನಡೆಸಿಲ್ಲ ಎಂಬ ಕೊರಗು ಇದೆ. ಉಳಿದವರು ಕೂಡ ಪೂರ್ಣಾವಧಿ ಪೂರೈಸಿಲ್ಲ. ಹಾಲಿ ಶಿವಮೊಗ್ಗ ನಗರ ಶಾಸಕ ಕೆ.ಎಸ್‌. ಈಶ್ವರಪ್ಪ ಡಿಸಿಎಂ ಸ್ಥಾನ ಅಲಂಕರಿಸಿದ್ದರು.

ಈ ಹಿಂದೆ ಕಾಂಗ್ರೆಸ್‌ ಪ್ರಾಬಲ್ಯವಿದ್ದ ಜಿಲ್ಲೆಯಲ್ಲಿ ಅನಂತರ ಜನತಾ ಪಕ್ಷ, ಪ್ರಸ್ತುತ ಬಿಜೆಪಿ ಹಿಡಿತ ಸಾಧಿಸಿದೆ. ಈಗಿರುವ ಏಳು ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್‌ ಇದೆ. ಜಿಲ್ಲೆಯ ಭದ್ರಾವತಿ ಈವರೆಗೆ ಬಿಜೆಪಿಗೆ ಒಮ್ಮೆಯೂ ದಕ್ಕದ ಕ್ಷೇತ್ರ.

ಶಿವಮೊಗ್ಗ
ಶಿವಮೊಗ್ಗ ವಿಧಾನಸಭಾ ಕ್ಷೇತ್ರ ಈಚೆಗೆ ಕೋಮು ಸಂಘರ್ಷಗಳಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈವರೆಗೆ ನಡೆದಿರುವ 15 ಚುನಾವಣೆಯಲ್ಲಿ ಕಾಂಗ್ರೆಸ್‌ 9 ಬಾರಿ, ಬಿಜೆಪಿ 5 ಬಾರಿ ಅಧಿಕಾರ ಹಿಡಿದಿದೆ. 1978ರವರೆಗೂ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಈ ಕ್ಷೇತ್ರ ಅನಂತರ ಬಿಜೆಪಿಗೆ ಒಲಿಯಿತು. 1983ರಲ್ಲಿ ಆನಂದರಾವ್‌ ಬಿಜೆಪಿಯ ಗೆಲುವಿನ ಖಾತೆ ತೆರೆದರು. ಜೆಡಿಎಸ್‌ಗೆ ಈ ಕ್ಷೇತ್ರ ಒಮ್ಮೆಯೂ ಒಲಿದಿಲ್ಲ. 1989ರಿಂದ ಇಲ್ಲಿಯವರೆಗೆ ಕೆ.ಎಸ್‌.ಈಶ್ವರಪ್ಪ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಐದು ಬಾರಿ ಗೆಲುವು ಸಾಧಿಸಿರುವ ಅವರು ಎರಡು ಬಾರಿ ಮಾತ್ರ ಸೋತಿದ್ದಾರೆ. ಕೋಮು ಸಂಘರ್ಷಗಳ ಅನಂತರ ಬಿಜೆಪಿಗೆ ಇದು ಭದ್ರಕೋಟೆಯಾಗಿದೆ. ಹಿಂದುತ್ವದ ಮತಗಳ ಕ್ರೋಡೀಕರಣದಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಶಿವಮೊಗ್ಗ ಗ್ರಾಮಾಂತರ
ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರ ಹೊಳೆಹೊನ್ನೂರು. ಪ್ರಸ್ತುತ ಇದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವಾಗಿ ಮಾರ್ಪಟ್ಟಿದೆ. 1978ರಲ್ಲಿ ಅಸ್ತಿತ್ವಕ್ಕೆ ಬಂದ ಈ ಕ್ಷೇತ್ರವನ್ನು ಮಾಜಿ ಸಚಿವ ದಿ|ಜಿ.ಬಸವಣ್ಣೆಪ್ಪ 5 ಬಾರಿ ಆಳಿದ್ದರು. ಶಿಕಾರಿಪುರ ಮೀಸಲು ಕ್ಷೇತ್ರವಾಗಿದ್ದಾಗ ಅಲ್ಲಿಯೂ ವಿಜಯ ಪಾತಕೆ ಹಾರಿಸಿದ್ದರು. 1989, 1999ರಲ್ಲಿ ಕಾಂಗ್ರೆಸ್‌ನ ಕರಿಯಣ್ಣ ಜಯ ಸಾಧಿಸಿದ್ದರು. 2004ರಲ್ಲಿ ಬಸವಣ್ಣೆಪ್ಪ ಬಿಜೆಪಿಯಿಂದ ಗೆಲ್ಲುವ ಮೂಲಕ ಬಿಜೆಪಿಗೆ ಕ್ಷೇತ್ರದಲ್ಲಿ ಅಸ್ತಿತ್ವ ತಂದುಕೊಟ್ಟರು 2013 ಹೊರತುಪಡಿಸಿದರೆ ಬಿಜೆಪಿ ನಿರಂತರವಾಗಿ ಗೆಲುವು ಸಾಧಿಸುತ್ತಿದೆ. ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಿರುವ ಈ ಕ್ಷೇತ್ರವು ಮೂರು ಪಕ್ಷಗಳಿಗೂ ಪ್ರತಿಷ್ಠಿತ ಕ್ಷೇತ್ರ.

ಶಿಕಾರಿಪುರ
ನಾಲ್ಕು ಬಾರಿ ಸಿಎಂ ಆದ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿದ ಬಿ.ಎಸ್‌. ಯಡಿಯೂರಪ್ಪ ಇದೇ ಶಿಕಾರಿಪುರ ಕ್ಷೇತ್ರದಿಂದ 8 ಬಾರಿ ಗೆಲುವು ಸಾಧಿಸಿದ್ದಾರೆ. 1952ರಲ್ಲಿ ಸೊರಬ-ಶಿಕಾರಿಪುರ ಸೇರಿ ಒಂದು ವಿಧಾನಸಭಾ ಕ್ಷೇತ್ರ ಮಾಡಲಾಗಿತ್ತು. 1962, 1967, 1972ರಲ್ಲಿ ಇದು ಎಸ್‌ಸಿ ಮೀಸಲು ಕ್ಷೇತ್ರವಾಗಿತ್ತು. 1983ರಿಂದ ಇಲ್ಲಿ ಬಿಎಸ್‌ವೈ ಗೆಲುವು ಸಾಧಿಸಿದ್ದು, ಒಮ್ಮೆ ಮಾತ್ರ ಸೋತಿದ್ದರು. ಬಂಗಾರಪ್ಪನವರಿಗೂ ಸೋಲಿನ ರುಚಿ ತೋರಿಸಿದ ಕೀರ್ತಿ ಈ ಕ್ಷೇತ್ರಕ್ಕೆ ಇದೆ. 2014ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದರು. ಈವರೆಗೆ ಬಿಎಸ್‌ವೈ ಕುಟುಂಬವನ್ನು ಕ್ಷೇತ್ರದ ಜನ ಕೈಬಿಟ್ಟಿಲ್ಲ.

ಭದ್ರಾವತಿ
ಇಡೀ ಜಿಲ್ಲೆಯಲ್ಲಿ ವಿಶಿಷ್ಟ ರಾಜಕಾರಣ ಇರುವ ಕ್ಷೇತ್ರ ಭದ್ರಾವತಿ. ಇಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಒಮ್ಮೆಯೂ ಬಿಜೆಪಿಗೆ ಈ ಕ್ಷೇತ್ರ ಗೆಲ್ಲಲು ಸಾಧ್ಯವಾಗದಿರುವುದು ಈ ಕ್ಷೇತ್ರದ ವಿಶೇಷತೆ. ವಿಐಎಸ್‌ಎಲ್‌, ಎಂಪಿಎಂ ಕಾರ್ಖಾನೆ ಕೆಲಸಕ್ಕೆ ಬಂದ ಸಾವಿರಾರು ಕುಟುಂಬಗಳು ಇಲ್ಲಿಯೇ ನೆಲೆ ನಿಂತಿವೆ. ನಾಲ್ಕು ಬಾರಿ ಇಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿರುವುದು ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎಂದು ತೋರಿಸಿದೆ. 1994ರಿಂದ ಇಲ್ಲಿವರೆಗೆ ಮಾಜಿ ಶಾಸಕ ದಿ|ಎಂ.ಜೆ.ಅಪ್ಪಾಜಿ ಹಾಗೂ ಹಾಲಿ ಶಾಸಕ ಬಿ.ಕೆ.ಸಂಗಮೇಶ ವಿರುದ್ಧ ನೇರ ಹಣಾಹಣಿ ನಡೆಯುತ್ತಿದ್ದು ಬೇರೆ ಅಭ್ಯರ್ಥಿಗಳು ಕಡೆಗಣಿಸಲ್ಪಟ್ಟಿದ್ದರು. ಇಬ್ಬರೂ ತಲಾ ಮೂರು ಬಾರಿ ಜಯ ಸಾಧಿಸಿದ್ದಾರೆ. ಸದ್ಯ ಬಿ.ಕೆ. ಸಂಗಮೇಶ ಹಾಲಿ ಶಾಸಕರಾಗಿದ್ದಾರೆ.

ಸಾಗರ
ಪಕ್ಕಾ ಮಲೆನಾಡು ವಾತಾವರಣದ ಸಾಗರ ತಾಲೂಕು ಕಾಗೋಡು ಚಳವಳಿಯಿಂದ ದೇಶದಲ್ಲಿ ಹೆಸರು ಮಾಡಿತ್ತು. ಇದರ ಪರಿಣಾಮವಾಗಿ 1952ರಲ್ಲಿ ನಡೆದ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪಧಿìಸಿ ಶಾಂತವೇರಿ ಗೋಪಾಲಗೌಡರು ಇಲ್ಲಿ ಗೆಲುವು ಸಾಧಿಸಿದರು. ಗೇಣಿ ಹೋರಾಟದಲ್ಲಿ ಭಾಗವಹಿಸಿದ್ದ ಡಿ.ಮೂಕಪ್ಪನವರು 1957ರಲ್ಲಿ ಕಾಂಗ್ರೆಸ್‌ನಿಂದ ಜಯ ಗಳಿಸಿದರು. 1972 ರಲ್ಲಿ ಕಾಗೋಡು ತಿಮ್ಮಪ್ಪ ಸಂಯುಕ್ತ ಸಮಾಜವಾದಿ ಪಕ್ಷದಿಂದ ಗೆಲುವು ಸಾಧಿಸಿದರು.1989, 1994, 1999ರ ಮೂರು ಅವಧಿಗೆ ಕಾಗೋಡು ತಿಮ್ಮಪ್ಪ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದರು. 2004, 2008ರಲ್ಲಿ ಬೇಳೂರು ಗೋಪಾಲಕೃಷ್ಣ ಬಿಜೆಪಿಯಿಂದ ಗೆಲುವು ಸಾಧಿಸುವ ಮೂಲಕ ಹೊಸ ಶಕೆ ಆರಂಭಿಸಿದರು. 2013ರಲ್ಲಿ ಕಾಗೋಡು ತಿಮ್ಮಪ್ಪ ಗೆಲುವು ಸಾಧಿಸಿದ್ದರಲ್ಲದೇ, 2018ರಲ್ಲಿ ಸೊರಬ ಕ್ಷೇತ್ರದಿಂದ ಬಂದ ಹರತಾಳು ಹಾಲಪ್ಪ ಇಲ್ಲಿ ಗೆಲುವು ಸಾಧಿಸಿದ್ದು ವಿಶೇಷ.

ತೀರ್ಥಹಳ್ಳಿ
ಮಲೆನಾಡು ಸೀಮೆಯ ತೀರ್ಥಹಳ್ಳಿ ತಾಲೂಕು ಮೌಲ್ಯಯುತ ರಾಜಕಾರಣಕ್ಕೆ ಹೆಸರುವಾಸಿ. ಶಾಂತವೇರಿ ಗೋಪಾಲಗೌಡ, ಕಡಿದಾಳ್‌ ಮಂಜಪ್ಪನವರು ಇಲ್ಲಿಯವರೆ. ಗೇಣಿ ಹೋರಾಟದ ಮೂಲಕ ಇಲ್ಲಿನ ರಾಜಕೀಯ ಪ್ರಜ್ಞೆ ಜಾಗೃತವಾಯಿತು. ಸಂಯುಕ್ತ ಸಮಾಜವಾದಿ ಪಕ್ಷ, ಸಮಾಜವಾದಿ ಪಕ್ಷ, ಸಂಗತ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಇಲ್ಲಿ ಗೆದ್ದಿರುವುದು ವಿಶೇಷ. 1989ರವರೆಗೂ ಇಲ್ಲಿ ಸಮಾಜವಾದಿ ಹೋರಾಟದ ಪ್ರಭಾವ ಇತ್ತು. 1989ರಲ್ಲಿ ಡಿ.ಬಿ.ಚಂದ್ರೇಗೌಡರು ಜನತಾ ದಳದಿಂದ ಗೆದಿದ್ದು ಬಿಟ್ಟರೆ ಜೆಡಿಎಸ್‌ ಒಮ್ಮೆಯೂ ಗೆದ್ದಿಲ್ಲ. 1994, 1999, 2004ರಲ್ಲಿ ಬಿಜೆಪಿ ಮೂಲಕ ಆರಗ ಜ್ಞಾನೇಂದ್ರ ಗೆಲುವಿನ ಖಾತೆ ತೆರೆದರು. ಅನಂತರ ಕಿಮ್ಮನೆ ರತ್ನಾಕರ್‌ ಎರಡು ಬಾರಿ ಗೆಲುವು ಸಾಧಿಸಿದ್ದಾರೆ. ತೀರ್ಥಹಳ್ಳಿಯ ಹೋರಾಟದ ರಾಜಕಾರಣ ಯಾವಾಗಲೂ ಗಮನ ಸೆಳೆಯುತ್ತದೆ.

 ಸೊರಬ
ಸೊರಬ ಕ್ಷೇತ್ರದ ರಾಜಕಾರಣದಲ್ಲಿ 1967ರಿಂದ 2018ರವರೆಗೂ ಬಂಗಾರಪ್ಪನವರೇ ಆವರಿಸಿದ್ದಾರೆ. ಬಂಗಾರಪ್ಪನವರಿಗೆ ಸೋಲಿಲ್ಲದ ಸರದಾರ ಎಂಬ ಹೆಸರು ತಂದುಕೊಟ್ಟಿದ್ದೇ ಈ ಕ್ಷೇತ್ರ. ಸಂಗತ ಸಮಾಜವಾದಿ ಪಕ್ಷ, ಸಂಯುಕ್ತ ಸಮಾಜವಾದಿ ಪಕ್ಷ, ಜನತಾ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ, ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದರೂ ಗೆಲುವು ಸಾಧಿಸಿರುವುದು ಅವರ ವಿಶೇಷ. 1967ರಿಂದ 1989ರವರೆಗೂ ನಿರಂತರವಾಗಿ ಬಂಗಾರಪ್ಪನವರೇ ಗೆಲುವು ಸಾಧಿಸಿದರು. ಅನಂತರ ಪುತ್ರ ಕುಮಾರ್‌ ಬಂಗಾರಪ್ಪ ಎರಡು ಬಾರಿ, ಇನ್ನೊಬ್ಬ ಪುತ್ರ ಮಧು ಬಂಗಾರಪ್ಪ ಒಂದು ಬಾರಿ ಗೆದ್ದಿದ್ದಾರೆ. ಬಂಗಾರಪ್ಪ ಕುಟುಂಬ ಹೊರತಾಗಿ ಗೆಲುವು ಸಾಧಿಸಿದ್ದು ಎಚ್‌.ಹಾಲಪ್ಪ ಮಾತ್ರ. ಜೆಡಿಎಸ್‌ನಲ್ಲಿದ್ದ ಮಧು ಬಂಗಾರಪ್ಪ ಈಗ ಕಾಂಗ್ರೆಸ್‌ನಲ್ಲಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಕುಮಾರ್‌ ಬಂಗಾರಪ್ಪ ಈಗ ಬಿಜೆಪಿಯಿಂದ ಶಾಸಕರಾಗಿದ್ದಾರೆ.

-ಶರತ್‌ ಭದ್ರಾವತಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.