ಶಿವಮೊಗ್ಗ: ಓಂ ಶಕ್ತಿ ದೇಗುಲದಿಂದ ವಾಪಸ್ಸಾದ ಭಕ್ತರಿಗೆ ಕಡ್ಡಾಯ ತಪಾಸಣೆ
Team Udayavani, Jan 5, 2022, 2:37 PM IST
ಶಿವಮೊಗ್ಗ: ತಮಿಳುನಾಡಿನ ಓಂ ಶಕ್ತಿ ದೇಗುಲಕ್ಕೆ ತೆರಳಿದ್ದ ಭಕ್ತರು ಶಿವಮೊಗ್ಗಕ್ಕೆ ಇಂದು,ಬುಧವಾರ ವಾಪಸ್ಸಾಗುತ್ತಿದ್ದು, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಮಂಡ್ಯದಲ್ಲಿ ಓಂ ಶಕ್ತಿಗೆ ತೆರಳಿದ್ದ 30 ಕ್ಕೂ ಅಧಿಕ ಭಕ್ತರಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಶಿವಮೊಗ್ಗದಿಂದ ಒಟ್ಟು 82 ಬಸ್ಸಿನಲ್ಲಿ 4 ಸಾವಿರಕ್ಕೂ ಅಧಿಕ ಭಕ್ತರು ಓಂ ಶಕ್ತಿಗೆ ತೆರಳಿದ್ದರು.ಡಿಸೆಂಬರ್ 31 ರಂದು ತೆರಳಿದ್ದ ಭಕ್ತರು ಇಂದು ವಾಪಸ್ಸಾಗುತ್ತಿದ್ದು, ಜಿಲ್ಲಾಡಳಿತ, ಭಕ್ತರಿಗೆ ಕೋವಿಡ್ ತಪಾಸಣೆಗೆ ಒಳಪಡಿಸುತ್ತಿದೆ.
ನಗರದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ಕೋವಿಡ್ ತಪಾಸಣೆ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಯೊಬ್ಬರಿಗೂ ಸ್ಕ್ರೀನಿಂಗ್ ನಡೆಸಿ, ರ್ಯಾಪಿಡ್ ಟೆಸ್ಟ್ ನಡೆಸುತ್ತಿದ್ದಾರೆ. ಸ್ಕ್ರೀನಿಂಗ್ ಹಾಗು ರ್ಯಾಪಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಪತ್ತೆಯಾದರೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ನೆಗೆಟಿವ್ ಬಂದವರಿಗೆ ಹೋಂ ಕ್ವಾರಂಟೈನ್ ಗೆ ಒಳಪಡಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ