ಶಿವಮೊಗ್ಗ: ನಿಷೇಧಾಜ್ಞೆ ನಡುವೆಯೂ ರಾಷ್ಟ್ರ ಧ್ವಜ ಹಾರಾಟ: ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್ಪಿ
Team Udayavani, Feb 9, 2022, 3:17 PM IST
ಶಿವಮೊಗ್ಗ: ಇಂದು ಬೆಳಿಗ್ಗೆ ಎನ್ಎಸ್ಯುಐ ವಿದ್ಯಾರ್ಥಿಗಳು 144 ಸೆಕ್ಷನ್ ಜಾರಿ ಇದ್ದರೂ, ಕಾಲೇಜು ಆವರಣದಲ್ಲಿ ಸೇರಿ ರಾಷ್ಟ್ರಧ್ವಜ ಹಾರಿಸಿದ್ದು, ಕಾನೂನು ಉಲ್ಲಂಘಿಸಿದ್ದಕ್ಕೆ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಎಸ್ಪಿ ಬಿ.ಎಂ. ಲಕ್ಷ್ಮಿಪ್ರಸಾದ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಾದ್ಯಾಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಈಗಾಗಲೇ ನಿನ್ನೆ ಗಲಭೆ ಸಂಬಂಧ ಐವರನ್ನು ಬಂಧಿಸಲಾಗಿದೆ. ಬಂಧಿಸಿ ಕರೆದೊಯ್ಯುವ ವೇಳೆ, ಕೆಲವು ವಿದ್ಯಾರ್ಥಿಗಳು, ಪರಾರಿಯಾಗಿದ್ದು, ಅವರನ್ನು ಕೂಡ ವಶಕ್ಕೆ ಪಡೆಯಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಹಿಜಾಬ್-ಕೇಸರಿ ಶಾಲು ಗಲಾಟೆ ಹೆಚ್ಚಾದ ಹಿನ್ನೆಲೆ- ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಇದೀಗ ಯಾವುದೇ, ಆತಂಕವಿಲ್ಲದೇ ದಿನಚರಿ ನಡೆಯುತ್ತಿದೆ. ಅಂಗಡಿ ಮುಂಗಟ್ಟು ತೆರೆದು ವ್ಯಾಪಾರ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಹೈಕೋರ್ಟ್ ನಲ್ಲಿ ಹಿಜಾಬ್ ವಿವಾದ ವಿಚಾರಣೆ: ಬೆಂಗಳೂರು ಸೇರಿ ವಿವಿಧೆಡೆ ನಿಷೇಧಾಜ್ಞೆ ಜಾರಿ
ನಗರದಲ್ಲಿ ವರ್ತಕರು ವ್ಯಾಪಾರ ನಡೆಸಬಹುದು. ಯುವಕರು ಹೆಚ್ಚಾಗಿ ಸೇರುವ ಬೀಡ ಅಂಗಡಿ, ಟೀ ಶಾಪ್ ಗಳನ್ನು ಮುಚ್ಚಿಸಲಾಗಿದ್ದು, ಗುಂಪು ಗೂಡುವುದನ್ನು ತಡೆಯಲಾಗಿದೆ ಎಂದರು.
ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, 150 ಜನ ಪೊಲೀಸ್ ಸಿಬ್ಬಂಧಿ, 4 ಜನ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?