ಸಂಗೀತ ಮಾಂತ್ರಿಕ, ಖ್ಯಾತ ಸಂತೂರ್ ವಾದಕ ಪಂಡಿತ್ ಶಿವ ಕುಮಾರ್ ಶರ್ಮಾ ಇನ್ನಿಲ್ಲ
ಅವರು ದಿನಂಪ್ರತಿ ಡಯಾಲಿಸೀಸ್ ಗೆ ಒಳಗಾಗುತ್ತಿದ್ದರು ಕೂಡಾ ಚಟುವಟಿಕೆಯಿಂದ ಇದ್ದರು
Team Udayavani, May 10, 2022, 3:13 PM IST
ಮುಂಬಯಿ: ಭಾರತದ ಖ್ಯಾತ ಸಂಗೀತ ಮಾಂತ್ರಿಕ, ಸಂತೂರ್ ವಾದಕ ಪಂಡಿತ್ ಶಿವ ಕುಮಾರ್ ಶರ್ಮಾ (84ವರ್ಷ) ಮಂಗಳವಾರ (ಏ.10) ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಅಶ್ವತ್ಥ್ ನಾರಾಯಣ್ – ಎಂ.ಬಿ. ಪಾಟೀಲ್ ಭೇಟಿ ಈ ಬಗ್ಗೆ ಡಿಕೆಶಿ ಹೇಳಿದ್ದೇನು ?
ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಪ್ರಮುಖರಾಗಿದ್ದು, ಮುಂದಿನ ವಾರ ಭೋಪಾಲ್ ನಲ್ಲಿ ಅವರ ಸಂಗೀತ ಕಚೇರಿ ನಿಗದಿಯಾಗಿತ್ತು. ಆದರೆ ಇವರು ವಯೋ ಸಹಜ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿ ಹೇಳಿದೆ.
ಚಟುವಟಿಕೆಯಿಂದ ಇದ್ದ ಶರ್ಮಾ ಅವರಿಗೆ ಇಂದು ಬೆಳಗ್ಗೆ ಹೃದಯಾಘಾತ ಸಂಭವಿಸಿತ್ತು. ಅವರು ದಿನಂಪ್ರತಿ ಡಯಾಲಿಸೀಸ್ ಗೆ ಒಳಗಾಗುತ್ತಿದ್ದರು ಕೂಡಾ ಚಟುವಟಿಕೆಯಿಂದ ಇದ್ದಿರುವುದಾಗಿ ಕುಟುಂಬದ ಮೂಲಗಳು ಪಿಟಿಐಗೆ ವಿವರಿಸಿದೆ.
ಪದ್ಮ ವಿಭೂಷಣ ಪ್ರಶಸ್ತಿ ವಿಜೇತ ಶರ್ಮಾ ಅವರು ಜಮ್ಮುವಿನಲ್ಲಿ 1938ರಲ್ಲಿ ಜನಿಸಿದ್ದರು. ಜಮ್ಮು-ಕಾಶ್ಮೀರದ ಜಾನಪದ ವಾದ್ಯವಾದ ಸಂತೂರ್ ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ನುಡಿಸಿದ ಮೊದಲ ಭಾರತೀಯ ಸಂಗೀತಗಾರ ಎಂಬ ಹೆಗ್ಗಳಿಕೆ ಶರ್ಮಾ ಅವರದ್ದಾಗಿದೆ.
ಶರ್ಮಾ ಅವರ ಪುತ್ರ ರಾಹುಲ್ ಶರ್ಮಾ ಕೂಡಾ ಸಂತೂರ್ ವಾದಕರಾಗಿದ್ದಾರೆ. ಪಂಡಿತ್ ಶಿವಕುಮಾರ್ ಶರ್ಮಾ ಅವರ ನಿಧನ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ