Amritdhare: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕಾರ್ಯಾಚರಣೆ

ಶಿಶು ಮರಣ ಪ್ರಮಾಣ ಇಳಿಸಲು ಯತ್ನ - ರಾಜ್ಯದಲ್ಲಿ ಶೇ.68ರಷ್ಟು ಜೀವಾಮೃತ ಕೊರತೆ

Team Udayavani, Jun 8, 2023, 7:57 AM IST

breast milk

ಬೆಂಗಳೂರು: ತಾಯಿ ಎದೆ ಹಾಲಿನ ಕೊರತೆಯಿಂದ ಬಳಲುತ್ತಿರುವ ನವಜಾತ ಶಿಶುಗಳ ರಕ್ಷಣೆಗಾಗಿ ರಾಜ್ಯದಲ್ಲಿ ಹೊಸದಾಗಿ ನಾಲ್ಕು “ಅಮೃತಧಾರೆ” (ಹ್ಯೂಮನ್‌ ಮಿಲ್ಕ್ ಬ್ಯಾಂಕ್‌) ಕೇಂದ್ರಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಈ ಕೇಂದ್ರಗಳು ಮುಂದಿನ ಎರಡು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಿಸಲಿವೆ.
ಅಕಾಲಿಕವಾಗಿ ಹಾಗೂ ಕಡಿಮೆ ತೂಕದಿಂದ ಜನಿಸಿದ, ಎದೆ ಹಾಲು ಉತ್ಪಾದಿಸದ ತಾಯಂದಿರ ಹಾಗೂ ಹಲವು ಕಾರಣಗಳಿಂದ ತಾಯಂದಿರಿಂದ ದೂರ ಉಳಿದಿರುವ ಶೇ.68ರಷ್ಟು ಶಿಶುಗಳಿಗೆ ಎದೆ ಹಾಲಿನ ಕೊರತೆಯಿದೆ. ಇದನ್ನು ಸರಿಪಡಿಸಲು ಆರೋಗ್ಯ ಇಲಾಖೆ ಮೈಸೂರು, ಬೆಳಗಾವಿ, ಬೆಂಗಳೂರು, ಕಲಬುರಗಿಯಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ತೆರೆಯಲಿದ್ದು, ಪ್ರಸ್ತುತ ಅಗತ್ಯದ ಐಸ್‌ ಲೈನ್‌ ಶೀತಲೀಕರಣ ಯಂತ್ರ, ಮಿಕ್ಸಿಂಗ್‌ ಯಂತ್ರ, ಡ್ರೈಯರ್‌, ಪಾಶ್ಚರೀಕರಿಸುವ ಯಂತ್ರ, ಬ್ರೈಸ್ಟ್‌ ಪಂಪ್‌ ಖರೀದಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ.

ಎರಡು ವಿಭಾಗದಲ್ಲಿ ಸಂಗ್ರಹ
ಇಲ್ಲಿ ಸ್ವತಃ ತಾಯಿಯಿಂದ ಮಗುವಿಗೆ ಹಾಗೂ ದಾನಿ ತಾಯಿಯ ಹಾಲನ್ನು ಇತರ ಮಗುವಿಗೆ ನೀಡಲು ಅವಕಾಶ ನೀಡಲಾಗಿದೆ. ಸಂಗ್ರಹಿಸುವ ಹಾಲು ಪ್ರಾರಂಭಿಕ ಹಂತದಲ್ಲಿ ಸ್ಕ್ರೀನಿಂಗ್‌ ಹಾಗೂ ಪಾಶ್ಚರೀಕರಿಸಿ ರೋಗಾಣು ನಾಶ ಮಾಡಲಾಗುತ್ತದೆ. ಅನಂತರ ಬಾಟಲಿಯಲ್ಲಿ ಭದ್ರಗೊಳಿಸಿ 18 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಗರಿಷ್ಠ 6 ತಿಂಗಳ ಕಾಲ ಸಂಗ್ರಹಿಸಿ ಇಡಬಹುದಾಗಿದೆ. ಖಾಸಗಿ ಕೇಂದ್ರದಲ್ಲಿ ಪಾಶ್ಚರೀಕರಿಸಿದ 150 ಎಂ.ಎಲ್‌. ಹಾಲಿಗೆ 3000ರಿಂದ 4000 ರೂ. ಪಾವತಿಸಬೇಕು. ಆದರೆ ಸರಕಾರಿ ಆಸ್ಪತ್ರೆಯಲ್ಲಿ ಅಗತ್ಯವಿರುವ ಶಿಶುಗಳಿಗೆ ಉಚಿತವಾಗಿ ಒದಗಿಸಲಾಗುತ್ತದೆ.

ಯಾರು ಅರ್ಹರು?
ಅಗತ್ಯಕ್ಕಿಂತ ಹೆಚ್ಚು ಎದೆಹಾಲು ಹೊಂದಿರುವ ಎಲ್ಲ ಆರೋಗ್ಯವಂತ ತಾಯಂದಿರು ದಾನ ಮಾಡಬಹುದಾಗಿದೆ. ದಾನಿ ತಾಯಿಯನ್ನು ಮೊದಲಿಗೆ ಎಚ್‌ಐವಿ, ಹೆಪಟೈಟೀಸ್‌ ಬಿ ಹಾಗೂ ಸಿ, ವಿಡಿಆರ್‌ಎಲ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದವರು ಮಾತ್ರ ಎದೆ ಹಾಲು ದಾನ ಮಾಡಬಹುದು.

ಉಚಿತ ವಿತರಣೆ
ಒಂದು ವರ್ಷದಿಂದ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸರಕಾರಿ ಹಾಗೂ ಮಂಗಳೂರಿನ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಖಾಸಗಿ ಸಾರ್ವಜನಿಕ ಸಹಬಾಗಿತ್ವದಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ಸ್ಥಾಪಿಸಲಾಗಿದೆ. ಇದುವರೆಗೆ ಎರಡು ಕೇಂದ್ರದಲ್ಲಿ ಸುಮಾರು 300 ಲೀಟರ್‌ ಹಾಲು ಪಾಶ್ಚರೀಕರಿಸಿ 1000ಕ್ಕೂ ಅಧಿಕ ನವಜಾತ ಶಿಶುಗಳಿಗೆ ಉಚಿತವಾಗಿ ವಿತರಿಸಲಾಗಿದೆ. ಎರಡು ಕೇಂದ್ರದಲ್ಲಿ ಒಟ್ಟು ಪ್ರತಿ ದಿನ ಸರಾಸರಿ 120ಕ್ಕೂ ಅಧಿಕ ಮಂದಿ ದಾನಿಗಳು ಎದೆ ಹಾಲು ದಾನ ಮಾಡುತ್ತಾರೆ.

ಅಮೃತಧಾರೆ ಸೆಂಟರ್‌ ಮೂಲಕ ಸ್ವಯಂ ಪ್ರೇರಿತವಾಗಿ ದಾನ ಮಾಡಲು ಒಪ್ಪುವ ತಾಯಂದಿರ ಹಾಲನ್ನು ಪಾಶ್ಚರೀಕರಿಸಿ, ಪರೀಕ್ಷೆಗೆ ಒಳಗಾದ ಬಳಿಕವಷ್ಟೆ ಇನ್ನೊಂದು ಶಿಶುವಿಗೆ ಹಾಲನ್ನು ನೀಡಲಾಗುತ್ತದೆ. ಈ ಹಾಲನ್ನು ಸುಮಾರು 6 ತಿಂಗಳ ತನಕ ಸಂಗ್ರಹಿಸಿ ಇಡಬಹುದಾಗಿದೆ. ಮುಂದಿನ 2 ತಿಂಗಳೊಳಗಾಗಿ 4 ಹೊಸ ಕೇಂದ್ರಗಳು ರಾಜ್ಯದಲ್ಲಿ ಕಾರ್ಯಾಚರಿಸಲಿದೆ.
-ಡಾ| ಬಸವರಾಜ್‌ ದಾಬಾಡಿ, ಉಪನಿರ್ದೇಶಕ, ಮಕ್ಕಳ ಆರೋಗ್ಯ ಇಲಾಖೆ

~ ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

devegouda

Cauvery: ಮಧ್ಯಪ್ರವೇಶಿಸಿ: ನಮ್ಮ ನೆರವಿಗೆ ಬನ್ನಿ- ದೇವೇಗೌಡರಿಂದ ಪ್ರಧಾನಿಗೆ ಪತ್ರ

MP MLA FIGHT

Kolar: ಜನತಾ ದರ್ಶನದಲ್ಲಿ ಸಂಸದ, ಶಾಸಕರ ಜಟಾಪಟಿ

river…

Cauvery: ರಾಜ್ಯದಲ್ಲಿ ಮತ್ತಷ್ಟು ತೀವ್ರಗೊಂಡ ಕಾವೇರಿ ಗದ್ದಲ

dam

Cauvery: ತಮಿಳುನಾಡಿಗೆ ಹೆಚ್ಚಿದ ನೀರಿನ ಹರಿವು

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.