ಪ್ರವಾದಿ ವಿರುದ್ಧ ಹೇಳಿಕೆ: ನೂಪುರ್ ಶರ್ಮಾ ಬಹಿರಂಗವಾಗಿ ದೇಶದ ಕ್ಷಮೆಯಾಚಿಸಬೇಕು: ಸುಪ್ರೀಂ
ಯಾವುದೇ ಪರಿಹಾರ ಬೇಕಿದ್ದರು ಹೈಕೋರ್ಟ್ ಮೆಟ್ಟಿಲೇರುವಂತೆ ಸೂಚಿಸಿದೆ.
Team Udayavani, Jul 1, 2022, 11:58 AM IST
ನವದೆಹಲಿ:ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ನೀಡಿರುವ ಹೇಳಿಕೆ ದೇಶಾದ್ಯಂತ ತೀವ್ರ ವಿವಾದಕ್ಕೆಡೆ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಅಮಾನತುಗೊಂಡಿದ್ದ ನೂಪುರ್ ಶರ್ಮಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಟೆಲಿವಿಷನ್ ಮೂಲಕ ನೂಪುರ್ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಶುಕ್ರವಾರ (ಜುಲೈ 01) ತಿಳಿಸಿದೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 17,070 ಕೋವಿಡ್ ಪ್ರಕರಣ ದೃಢ, 23 ಮಂದಿ ಸಾವು
ಪ್ರವಾದಿ ಪೈಗಂಬರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್ ಐಆರ್ ಗಳನ್ನು ತನಿಖೆಗಾಗಿ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನಿಮ್ಮ (ನೂಪುರ್) ಹೇಳಿಕೆಯಿಂದ ದೇಶದ ಭದ್ರತೆಗೆ ಧಕ್ಕೆ ಬಂದಿದೆ ಎಂದು ಹೇಳಿದ್ದು, ಆಕೆಯ ಮನವಿಯನ್ನು ವಜಾಗೊಳಿಸಿ, ಯಾವುದೇ ಪರಿಹಾರ ಬೇಕಿದ್ದರು ಹೈಕೋರ್ಟ್ ಮೆಟ್ಟಿಲೇರುವಂತೆ ಸೂಚಿಸಿದೆ.
ಈ ಅರ್ಜಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಿ, ಹಾಜರಾಗಲು ಯೋಗ್ಯವಾಗಿಲ್ಲ ಎಂದು ಆಕೆ ಭಾವಿಸಿದಂತಿದೆ ಎಂದು ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ. ಪಕ್ಷದ ವಕ್ತಾರರಾದವರು ಇಂತಹ ಹೇಳಿಕೆಗಳನ್ನು ನೀಡಬಾರದು. ಕೆಲವೊಮ್ಮೆ ಅಧಿಕಾರ ಎನ್ನುವುದು ಜನರ ತಲೆಗೆ ಏರುತ್ತದೆ. ಇದರಿಂದ ತಾವೇ ಸರ್ವಸ್ವ ಎಂದು ಭಾವಿಸುತ್ತಾರೆ. ಇಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ನೂಪುರ್ ವಿರುದ್ಧ ಪ್ರಕರಣ ಯಾಕೆ ದಾಖಲಿಸಿಲ್ಲ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ