ರೈತರಂತೆಯೇ ನಾವೂ ಆತ್ಮಹತ್ಯೆ ಮಾಡಿಕೊಳ್ಳಬೇಕೇ : ದೈವಾರಾಧಕರ ಪ್ರಶ್ನೆ

ನೈಟ್ ಕರ್ಫ್ಯೂ, ವಾರಾಂತ್ಯ ಕರ್ಫ್ಯೂನಿಂದ ತೊಂದರೆಗಳ ಬಗ್ಗೆ ದೈವಾರಾಧಕರಿಂದ ಸಮಾಲೋಚನಾ ಸಭೆ

Team Udayavani, Jan 7, 2022, 6:36 PM IST

1-assa

ಕಾಪು : ಕೊರೊನಾ ಕಾರಣದ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂನಿಂದಾಗಿ ತೊಂದರೆಗೊಳಗಾಗಿರುವ ದೈವಾರಾಧಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಸರಕಾರ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಅಖಿಲ ಭಾರತ ದೈವಾರಾಧಕರ ಒಕ್ಕೂಟ ಉಡುಪಿ – ಮಂಗಳೂರು ಇವರ ವತಿಯಿಂದ ಪಾಂಗಾಳ ಗುಡ್ಡೆಗರಡಿಯಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪಾಂಗಾಳ ಗುಡ್ಡೆ ಗರಡಿಮನೆ ಸುಧಾಕರ ಡಿ. ಅಮೀನ್ ಮಾತನಾಡಿ, ದೈವಾರಾಧನೆ ಕ್ಷೇತ್ರವನ್ನು ಅವಲಂಭಿಸಿರುವ ಎಲ್ಲಾ ವರ್ಗದವರೂ ಕೊರೊನಾ‌ ಕಾರಣದಿಂದಾಗಿ ಎರಡು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದು, ಈ‌ ಪರಿಸ್ಥಿತಿ ಇದೀಗ ಮೂರ‌ನೇ ವರ್ಷಕ್ಕೆ ಕಾಲಿಟ್ಟಿದೆ. ದೈವಾರಾಧನೆಯ ಎಲ್ಲಾ ಆಚರಣೆಗಳೂ ಹಿಂದಿನಂತೆಯೇ ನಡೆಯುವಂತಾಗಲು ಅವಕಾಶ ಮಾಡಿ ಕೊಡುವಂತೆ ಜಿಲ್ಲೆಯ ಎಲ್ಲಾ‌ ಜನಪ್ರತಿನಿಧಿಗಳ ಬೆಂಬಲ ಪಡೆದು, ಅಧಿಕಾರಿ ವರ್ಗ ಮತ್ತು ಸರಕಾರಕ್ಕೆ ನಮ್ಮ ಬೇಡಿಕೆಗಳ ಬಗ್ಗೆ ಮನವಿ ನೀಡಬೇಕಿದೆ ಎಂದರು.

ಇದನ್ನೂ ಓದಿ :ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣ: ಯಕ್ಷಗಾನ ಕಲಾವಿದರ ಪ್ರತಿಭಟನೆ

ಅಖಿಲ ಭಾರತ ದೈವಾರಾಧಕರ ಒಕ್ಕೂಟದ ಉಪಾಧ್ಯಕ್ಷ ಯೋಗಿಶ್ ಪೂಜಾರಿ ಮಾತನಾಡಿ, ದೈವಾರಾಧನೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಾವೆಲ್ಲರೂ ಒಂದಾಗಬೇಕಿದೆ. ದೈವಾರಾಧನೆಗೆ ಬರುವ ಹದಿನಾರು ವರ್ಗದವರೂ ಹೋರಾಟದಲ್ಲಿ ಕೈ ಜೋಡಿಸುವ ಅಗತ್ಯವಿದೆ ಎಂದರು.

ಕುಕ್ಕೆಹಳ್ಳಿ ಕೊರಗಜ್ಜ ದೇವಸ್ಥಾನದ ಮುಖ್ಯಸ್ಥ ಕೃಷ್ಣ ಕುಲಾಲ್ ಮಾತನಾಡಿ, ಕೊರೊನಾ ಬೆದರಿಕೆಯೊಡ್ಡಿ ವೀಕೆಂಡ್ ಕರ್ಫ್ಯೂ ಹೇರಿಕೆಯ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಇದರೊಂದಿಗೆ ದೈವಾರಾಧನೆಯನ್ನು ಮುಗಿಸುವ ಹುನ್ನಾರ ನಡೆಯುತ್ತಿದೆ. ಹಿಂದೂ ಧರ್ಮದ ಪುರಾತನ ಸಂಪ್ರಧಾಯ, ಧಾರ್ಮಿಕ ಆಚರಣೆ, ಜನಪದೀಯ ಕಲೆಗಳನ್ನು ಮುಗಿಸಿ ಬಿಡುವ ತಂತ್ರಗಾರಿಕೆ ಎದ್ದು ತೋರುತ್ತಿದೆ ಎಂದರು‌.

ಕಾರ್ಕಳ ದೈವಾರಾಧಕರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ಮಾಳ ಮಾತನಾಡಿ, ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ನಾವೆಲ್ಲರೂ ಒಂದುಗೂಡ ಬೇಕಿದೆ. ದೈವಾರಾಧನೆ ಕೇವಲ ದೈವಾರಾಧಕರಿಗೆ ಸೀಮಿತವಾಗಿರದೇ, ಧಾರ್ಮಿಕ ಭಾವನೆಗಳನ್ನು ಹೊಂದಿರುವ ಮತ್ತು ಶಕ್ತಿಗಳ ಬಗ್ಗೆ ನಂಬಿಕೆ ಇಟ್ಟಿರುವ ಎಲ್ಲರಿಗೂ ಮೀಸಲಾಗಿದೆ. ದೈವಾರಾಧನೆ ಕ್ಷೇತ್ರದಲ್ಲಿ ತೊಡಗಿಕೊಂಡ ಕುಟುಂಬಗಳನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುವ ಮತ್ತು ಮಾನಸಿಕವಾಗಿ‌ ಕುಗ್ಗಿಸುವ ಪ್ರಯತ್ನವನ್ನು ಕೈ ಬಿಡುವಂತೆ ಜನಪ್ರತಿ‌ಧಿಗಳನ್ನು ಸೇರಿಸಿಕೊಂಡು, ಅಧಿಕಾರಿಗಳು ಮತ್ತು ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸೋಣ ಎಂದರು.

ಬೈರಂಪಳ್ಳಿ ಭೂತರಾಜ ದೇವಸ್ಥಾನದ ಮುಖ್ಯಸ್ಥ ಪ್ರವೀಣ್ ಶೆಟ್ಟಿ, ಹಿರಿಯಡಕ ಕಲ್ಕುಡ ದೈವಸ್ಥಾನದ ಮುಖ್ಯಸ್ಥ ಸುಧಾಕರ ಶೆಟ್ಟಿ ತಂಗಣ, ಹೆಬ್ರಿ ಘಟಕದ ಅಧ್ಯಕ್ಷ ಸುಕುಮಾರ್ ಪೂಜಾರಿ, ಕಾರ್ಕಳ ದೈವಾರಾಧಕರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ಮಾಳ, ದೊಡ್ಡಣ್ಣಗಯಡ್ಡೆ ಪಂಚ ಜುಮಾದಿ ದೇವಸ್ಥಾನದ ಗುರಿಕಾರ ನಿತಿನ್ ಪೂಜಾರಿ, ಪಾಣಾರ ಸಂಘದ ಜಿಲ್ಲಾಧ್ಯಕ್ಷ ಪಾಂಡು ಪಾಣಾರ, ಪಂಬದ ಸಮುದಾಯದ ಮುಖಂಡ ಮಾಧವ ಪಂಬದ, ನಲಿಕೆ ಸಮುದಾಯದ ಮುಖಂಡ ನಾರಾಯಣ ಪಾಣಾರ, ದೇವಾಡಿಗ ಸಮುದಾಯದ ಮುಖಂಡ ಉದಯ ಶೇರಿಗಾರ್ ಅಲೆವೂರು, ಪರವ ಸನುದಾಯದ ಮುಖಂಡ ನರಸಿಂಹ ಪರವ ಮೊದಲಾದವರು ಮಾತನಾಡಿದರು.

ಉಡುಪಿ, ಕಾರ್ಕಳ, ಹೆಬ್ರಿ, ಕಾಪು, ಬ್ರಹ್ಮಾವರ ತಾಲೂಕಿನ ವಿವಿಧೆಡೆಗಳ ದೈವಾರಾಧಕ ಸಂಘಟನೆಯ ಪದಾಧಿಕಾರಿಗಳು, ದೈವಾರಾಧಕರು, ಸಮುದಾಯಗಳ ಮುಖಂಡರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

ತುಳುನಾಡ ದೈವಾರಾಧಕರ ಸಂಘದ ಜಿಲ್ಲಾಧ್ಯಕ್ಷ ವಿನೋದ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದು, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.