BJP ಸೋಲಿಸಲು ಹೊಸ ರಂಗಕ್ಕೆ ಶ್ರೀಕಾರ: ಖರ್ಗೆ ನಿವಾಸದಲ್ಲಿ ನಿತೀಶ್, ತೇಜಸ್ವಿ ಭೇಟಿ
Team Udayavani, Apr 13, 2023, 7:50 AM IST
ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿಪಕ್ಷಗಳೆಲ್ಲ ಒಟ್ಟಾಗಿ ಸೆಣಸುವ ನಿಟ್ಟಿನಲ್ಲಿ ಹೊಸ ರಾಜಕೀಯ ರಂಗ ರಚನೆ ಮಾಡುವ ಹೊಸ ಪ್ರಯತ್ನ ಶುರುವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್ಜೆಡಿ ನಾಯಕ ಮತ್ತು ಡಿಸಿಎಂ ತೇಜಸ್ವಿ ಯಾದವ್ ಅವರು ಬುಧವಾರ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ವಿಪಕ್ಷಗಳನ್ನು ಒಂದೇ ವೇದಿಕೆಯ ವ್ಯಾಪ್ತಿಯಲ್ಲಿ ತರುವ ಬಗ್ಗೆ ಮಾತು ಕತೆಗಳನ್ನು ನಡೆಸಲಾಗಿದೆ. ಇದೇ ಮೊದಲ ಬಾರಿಗೆ ವಿಪಕ್ಷಗಳೆಲ್ಲವೂ ಒಟ್ಟಾಗುವ ಬಗ್ಗೆ ಮಾತುಕತೆಗಳು ನಡೆದಿವೆ.
ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ “ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭು ತ್ವದ ರಕ್ಷಣೆಗಾಗಿ ಎಲ್ಲ ವಿಪಕ್ಷಗಳೂ ಒಗ್ಗೂಡಲಿವೆ. ಮಾತ್ರವಲ್ಲದೆ, ದೇಶಕ್ಕೆ ಒಂದು ಹೊಸ ದಾರಿಯನ್ನು ತೋರಿಸಲಿವೆ” ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, “ವಿಪಕ್ಷಗಳೆಲ್ಲವೂ ಒಂದೇ ವೇದಿಕೆಯಡಿ ಬರಲಿದ್ದು, ಅಲ್ಲಿ ದೇಶಕ್ಕಾಗಿ ಒಂದು ದಿಕ್ಸೂಚಿ ಚಿಂತನೆಯ ಬಗ್ಗೆ ಚರ್ಚೆ ಮಾಡಿ ಅಂತಿಮಗೊಳಿಸಲಿವೆ. ಬಳಿಕ ಅದನ್ನು ದೇಶದ ಜನರ ಮುಂದೆ ಇರಿಸಲಿವೆ” ಎಂದರು. ಇದೊಂದು ಐತಿಹಾಸಿಕ ಹೆಜ್ಜೆ ಎಂದು ರಾಹುಲ್ ಗಾಂಧಿ ಹೇಳಿಕೊಂಡರು.
ಐಕ್ಯಮತದಲ್ಲಿ ಕೆಲಸಕ್ಕೆ ಸಿದ್ಧ: ಬಿಹಾರ ಸಿಎಂ ನಿತೀಶ್ ಮಾತನಾಡಿ “ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮುಂದುವರಿಯಲಿದೆ. ಮುಂದಿನ ಹಂತದಲ್ಲಿ ಎಲ್ಲರೂ ಕುಳಿತು ಮಾತಾಡಲಿದ್ದೇವೆ. ಬುಧವಾರದ ಸಭೆ ಎಲ್ಲದಕ್ಕೂ ಶ್ರೀಕಾರವಾಗಲಿದೆ” ಎಂದು ಹೇಳಿದ್ದಾರೆ.
ಖರ್ಗೆ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಡಿಸಿಎಂ ತೇಜಸ್ವಿ ಯಾದವ್, ರಾಹುಲ್ ಗಾಂಧಿ ಮತ್ತು ಇತರ ಪ್ರಮುಖರು ಮಧ್ಯಾಹ್ನದ ಭೋಜ ನವನ್ನೂ ಸವಿದಿದ್ದಾರೆ. ಡಿಎಂಕೆ ಹಾಗೂ ಇತರ ಪಕ್ಷಗಳ ಜತೆ ಮಾತನಾಡುವ ಹೊಣೆ ಖರ್ಗೆ ಅವರಿಗೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ