ಗಿಲ್ ಶತಕದ ಕಮಾಲ್; ನ್ಯೂಜಿಲೆಂಡ್ ಗೆ ಸೋಲಿನ ಶಾಕ್ ನೀಡಿ ಸರಣಿ ಗೆದ್ದ ಟೀಮ್ ಇಂಡಿಯಾ


Team Udayavani, Feb 1, 2023, 10:12 PM IST

1-sadsadas

ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಮೂರು ಪಂದ್ಯಗಳ ಟಿ 20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಶುಭಮನ್ ಗಿಲ್ ಅವರ ಸ್ಪೋಟಕ ಶತಕದ ನೆರವಿನಿಂದ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ಗಿಲ್ ಅವರ ಅಜೇಯ 125 ರನ್,  ಹಾರ್ದಿಕ್ ಪಾಂಡ್ಯ ಅವರ ತ್ವರಿತ 30 ರನ್, ರಾಹುಲ್ ತ್ರಿಪಾಠಿ 44 ರನ್ ಮತ್ತು ಸೂರ್ಯ ಕುಮಾರ್ ಯಾದವ್ 24 ರನ್ ನೆರವಿದಿಂದ ಭಾರತವು ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 234ರನ್ ಗಳಿಸಿತು. ಗಿಲ್ 63 ಎಸೆತಗಳಲ್ಲಿ 125 ರನ್ ಗಳಿಸಿ ಭಾರತದ ಪರ ಗರಿಷ್ಠ ರನ್ ಗಳಿಸಿದರು. ನ್ಯೂಜಿಲೆಂಡ್ ಪರ ಮೈಕಲ್ ಬ್ರೇಸ್‌ವೆಲ್, ಬ್ಲೇರ್ ಟಿಕ್ನರ್ ಮತ್ತು ಇಶ್ ಸೋಧಿ ಕ್ರಮವಾಗಿ ತಲಾ ಒಂದು ವಿಕೆಟ್ ಪಡೆದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಭಾರತ ಆಟದ ಎರಡನೇ ಓವರ್‌ನಲ್ಲಿ ತಮ್ಮ ಸ್ಟಾರ್ ಓಪನರ್ ಇಶಾನ್ ಕಿಶನ್ ಅವರ ವಿಕೆಟ್ ಕಳೆದುಕೊಂಡಿದ್ದರಿಂದ ಕೆಟ್ಟ ಆರಂಭವನ್ನು ಪಡೆಯಿತು. ಶುಭಮನ್ ಗಿಲ್ ಎರಡನೇ ಓವರ್ ಅನ್ನು ಬೌಂಡರಿಯೊಂದಿಗೆ ಮುಗಿಸಿ ಮತ್ತೆ ಹಿಂತಿರುಗಿ ನೋಡಲಿಲ್ಲ 200 ಸ್ಟ್ರೈಕ್ ರೇಟ್ ಹೊಂದಿದ್ದ ಅವರು7 ಭರ್ಜರಿ ಸಿಕ್ಸರ್ ಮತ್ತು 12 ಬೌಂಡರಿಗಳನ್ನು ಬಾರಿಸಿದ್ದರು.

18ನೇ ಓವರ್‌ನಲ್ಲಿ ಭಾರತ 200 ರನ್ ಗಡಿ ದಾಟಿತು. ಗಿಲ್ ನಂತರ ಇನಿಂಗ್ಸ್‌ನ 19 ನೇ ಓವರ್‌ನಲ್ಲಿ ಲಿಸ್ಟರ್‌ನಿಂದ 17 ರನ್ ಗಳಿಸಿದರು. ಡೆರಿಲ್ ಮಿಚೆಲ್ ಎಸೆತದಲ್ಲಿ ಔಟಾದ ಕಾರಣ ಕ್ರೀಸ್‌ನಲ್ಲಿದ್ದ ಪಾಂಡ್ಯ ಅವರ ಆಟ ಕೊನೆಗೊಂಡಿತು. ಪಾಂಡ್ಯ 17 ಎಸೆತಗಳಲ್ಲಿ 30 ರನ್ ಗಳಿಸಿದ ನಂತರ ಪೆವಿಲಿಯನ್‌ಗೆ ಮರಳಿದರು. ಭಾರತ ಕೊನೆಯ ಓವರ್‌ನಲ್ಲಿ 6 ರನ್ ಗಳಿಸಲಷ್ಟೇ ಶಕ್ತವಾಯಿತು ಮತ್ತು 20 ಓವರ್‌ಗಳಲ್ಲಿ 234/4 ಸವಾಲಿನ ಮೊತ್ತವನ್ನು ದಾಖಲಿಸಿತು.

235 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ 12.1 ಓವರ್ ಗಳಲ್ಲಿ ಕೇವಲ 66 ರನ್ ಗಳಿಗೆ ಆಲೌಟಾಯಿತು. ಡೇರಿಲ್ ಮಿಚೆಲ್ 35 ಮತ್ತು ನಾಯಕ ಸ್ಯಾಂಟ್ನರ್ 13 ರನ್ ಹೊರತು ಪಡಿಸಿ ಉಳಿದ ಯಾವ ಆಟಗಾರನೂ ಒಂದಂಕಿ ದಾಟಲಿಲ್ಲ. ಪಾಂಡ್ಯ ಪಡೆ 168 ರನ್‌ಗಳ ಭಾರಿ ಜಯ ಸಾಧಿಸಿತು.

ಭಾರತದ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 4 ವಿಕೆಟ್ ಕಬಳಿಸಿದರೆ , ಅರ್ಷದೀಪ್ ಸಿಂಗ್, ಶಿವಂ ಮಾವಿ ಮತ್ತು ಉಮ್ರಾನ್ ಮಲಿಕ್ ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.