ಗಿಲ್ ಶತಕದ ಕಮಾಲ್; ನ್ಯೂಜಿಲೆಂಡ್ ಗೆ ಸೋಲಿನ ಶಾಕ್ ನೀಡಿ ಸರಣಿ ಗೆದ್ದ ಟೀಮ್ ಇಂಡಿಯಾ


Team Udayavani, Feb 1, 2023, 10:12 PM IST

1-sadsadas

ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಮೂರು ಪಂದ್ಯಗಳ ಟಿ 20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಶುಭಮನ್ ಗಿಲ್ ಅವರ ಸ್ಪೋಟಕ ಶತಕದ ನೆರವಿನಿಂದ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ಗಿಲ್ ಅವರ ಅಜೇಯ 125 ರನ್,  ಹಾರ್ದಿಕ್ ಪಾಂಡ್ಯ ಅವರ ತ್ವರಿತ 30 ರನ್, ರಾಹುಲ್ ತ್ರಿಪಾಠಿ 44 ರನ್ ಮತ್ತು ಸೂರ್ಯ ಕುಮಾರ್ ಯಾದವ್ 24 ರನ್ ನೆರವಿದಿಂದ ಭಾರತವು ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 234ರನ್ ಗಳಿಸಿತು. ಗಿಲ್ 63 ಎಸೆತಗಳಲ್ಲಿ 125 ರನ್ ಗಳಿಸಿ ಭಾರತದ ಪರ ಗರಿಷ್ಠ ರನ್ ಗಳಿಸಿದರು. ನ್ಯೂಜಿಲೆಂಡ್ ಪರ ಮೈಕಲ್ ಬ್ರೇಸ್‌ವೆಲ್, ಬ್ಲೇರ್ ಟಿಕ್ನರ್ ಮತ್ತು ಇಶ್ ಸೋಧಿ ಕ್ರಮವಾಗಿ ತಲಾ ಒಂದು ವಿಕೆಟ್ ಪಡೆದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಭಾರತ ಆಟದ ಎರಡನೇ ಓವರ್‌ನಲ್ಲಿ ತಮ್ಮ ಸ್ಟಾರ್ ಓಪನರ್ ಇಶಾನ್ ಕಿಶನ್ ಅವರ ವಿಕೆಟ್ ಕಳೆದುಕೊಂಡಿದ್ದರಿಂದ ಕೆಟ್ಟ ಆರಂಭವನ್ನು ಪಡೆಯಿತು. ಶುಭಮನ್ ಗಿಲ್ ಎರಡನೇ ಓವರ್ ಅನ್ನು ಬೌಂಡರಿಯೊಂದಿಗೆ ಮುಗಿಸಿ ಮತ್ತೆ ಹಿಂತಿರುಗಿ ನೋಡಲಿಲ್ಲ 200 ಸ್ಟ್ರೈಕ್ ರೇಟ್ ಹೊಂದಿದ್ದ ಅವರು7 ಭರ್ಜರಿ ಸಿಕ್ಸರ್ ಮತ್ತು 12 ಬೌಂಡರಿಗಳನ್ನು ಬಾರಿಸಿದ್ದರು.

18ನೇ ಓವರ್‌ನಲ್ಲಿ ಭಾರತ 200 ರನ್ ಗಡಿ ದಾಟಿತು. ಗಿಲ್ ನಂತರ ಇನಿಂಗ್ಸ್‌ನ 19 ನೇ ಓವರ್‌ನಲ್ಲಿ ಲಿಸ್ಟರ್‌ನಿಂದ 17 ರನ್ ಗಳಿಸಿದರು. ಡೆರಿಲ್ ಮಿಚೆಲ್ ಎಸೆತದಲ್ಲಿ ಔಟಾದ ಕಾರಣ ಕ್ರೀಸ್‌ನಲ್ಲಿದ್ದ ಪಾಂಡ್ಯ ಅವರ ಆಟ ಕೊನೆಗೊಂಡಿತು. ಪಾಂಡ್ಯ 17 ಎಸೆತಗಳಲ್ಲಿ 30 ರನ್ ಗಳಿಸಿದ ನಂತರ ಪೆವಿಲಿಯನ್‌ಗೆ ಮರಳಿದರು. ಭಾರತ ಕೊನೆಯ ಓವರ್‌ನಲ್ಲಿ 6 ರನ್ ಗಳಿಸಲಷ್ಟೇ ಶಕ್ತವಾಯಿತು ಮತ್ತು 20 ಓವರ್‌ಗಳಲ್ಲಿ 234/4 ಸವಾಲಿನ ಮೊತ್ತವನ್ನು ದಾಖಲಿಸಿತು.

235 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ 12.1 ಓವರ್ ಗಳಲ್ಲಿ ಕೇವಲ 66 ರನ್ ಗಳಿಗೆ ಆಲೌಟಾಯಿತು. ಡೇರಿಲ್ ಮಿಚೆಲ್ 35 ಮತ್ತು ನಾಯಕ ಸ್ಯಾಂಟ್ನರ್ 13 ರನ್ ಹೊರತು ಪಡಿಸಿ ಉಳಿದ ಯಾವ ಆಟಗಾರನೂ ಒಂದಂಕಿ ದಾಟಲಿಲ್ಲ. ಪಾಂಡ್ಯ ಪಡೆ 168 ರನ್‌ಗಳ ಭಾರಿ ಜಯ ಸಾಧಿಸಿತು.

ಭಾರತದ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 4 ವಿಕೆಟ್ ಕಬಳಿಸಿದರೆ , ಅರ್ಷದೀಪ್ ಸಿಂಗ್, ಶಿವಂ ಮಾವಿ ಮತ್ತು ಉಮ್ರಾನ್ ಮಲಿಕ್ ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ

ipl o[pening

ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್‌ ಸಡಗರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

madhu

ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು