ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ
ಯಾವ ಕ್ಷೇತ್ರದಲ್ಲಿ ನಿಂತರೂ ವೈರಿಗಳು ಒಂದಾಗುತ್ತಾರೆ..ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ..
Team Udayavani, Mar 24, 2023, 5:50 PM IST
ಮೈಸೂರು:ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಪುತ್ರ ಡಾ. ಯತೀಂದ್ರ ಅವರು ಉದಯವಾಣಿಗೆ ಶುಕ್ರವಾರ ತಿಳಿಸಿದ್ದಾರೆ.
ಹೈಕಮಾಂಡ್ ಕೋಲಾರ ಬೇಡ ವರುಣಾದಲ್ಲಿ ಸ್ಪರ್ಧಿಸಿ ಅಂತ ಹೇಳಿತ್ತು.ಈ ಸಮಯದಲ್ಲಿ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದರೆ ಕಾಂಗ್ರೆಸ್ ಗೆ ಹಿನ್ನಡೆ ಆಗುತ್ತೆ ಅಂತಾ ಅಲ್ಲಿನ ನಾಯಕರು ಹೇಳಿದ್ದಾರೆ.ಇವತ್ತಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಕೋಲಾರವನ್ನು ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣಾವನ್ನೂ ಬಿಡಲು ಆಗುವುದಿಲ್ಲ.ಹೀಗಾಗಿ ಸಿದ್ದರಾಮಯ್ಯ ಅವರು ಕೋಲಾರ – ವರುಣ ಎರಡು ಕ್ಷೇತ್ರದಲ್ಲೂ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದರು.
ವರುಣಾ ಒಂದರಲ್ಲಿ ನಿಂತು ಕೊಳ್ಳಿ ಎಂದು ನಾನು ಮೊದಲು ಸಲಹೆ ಕೊಟ್ಟಿದ್ದೆ.ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ. ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರದಲ್ಲಿ ನಿಂತರು ಅವರ ವೈರಿಗಳು ಒಂದಾಗಿ ಸೋಲಿಸಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ವಿರುದ್ದ ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಎಲ್ಲಿ ಯಾವಾಗ ನಿಂತರು ಶತ್ರುಗಳು ಒಂದಾಗುತ್ತಾರೆ. ಇದಕ್ಕೆಲ್ಲ ಹೆದರೋಕೆ ಆಗಲ್ಲ.ಸಿದ್ದರಾಮಯ್ಯ ಮಾಸ್ ಲೀಡರ್. ಆಕಸ್ಮಾತ್ ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯದ ಪರ ಕೆಲಸ ಮಾಡುತ್ತಾರೆ. ಇದನ್ನು ಸಹಿಸಲು ಬಲಪಂಥೀಯರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್