ಅಪ್ಪ ಸೋತಿಲ್ವಾ, ಮಗ ಸೋತಿಲ್ವಾ : ಹೆಚ್ ಡಿಕೆಗೆ ಸಿದ್ದರಾಮಯ್ಯ ತಿರುಗೇಟು
ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ದರು ಅಂತಾನೇ ಗೊತ್ತಿಲ್ಲ.
Team Udayavani, Jan 22, 2022, 4:06 PM IST
ಬೆಂಗಳೂರು : ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಶುಕ್ರವಾರ ಕಿಡಿ ಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಹೇಳಿಕೆಗೆ ರಿಯಾಕ್ಟ್ ಮಾಡುವುದಿಲ್ಲ.ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆಯಲ್ಲಿ ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಮತದಾರ ಕೊಟ್ಟ ತೀರ್ಪನ್ನ ನಾವು ಸ್ವೀಕಾರ ಮಾಡಬೇಕು ಎಂದರು.
ನಾನು ಸೋತಿದ್ದೇನೆ. ಅವರ ಅಪ್ಪ ಸೋತಿಲ್ವಾ, ಮಗ ಸೋತಿಲ್ವಾ,ಅಣ್ಣ ಸೋತಿಲ್ವಾ? ದೇವೇಗೌಡರು,ರೇವಣ್ಣ ಸೋತಿಲ್ವಾ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ : ಯೋಗ್ಯತೆ ಇಲ್ಲ, ಧಂ ಇಲ್ಲ,ವಿಷಸರ್ಪದಂತೆ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಆಕ್ರೋಶ
ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪು ಅಂತಿಮ. ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ದರು ಅಂತಾನೇ ಗೊತ್ತಿಲ್ಲ. ನಾನೇಕೆ ಇವರ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಲಿ. ಕಣ್ಣೀರು ಹಾಕಲಿ ಎಂದರು.
ಈಗ ರಾಜ್ಯದ ಜನರ ಮುಂದೆ ಕಣ್ಣಿರು ಹಾಕುತ್ತಿರುವುದು ಯಾರೆಂದು ಗೊತ್ತಿದೆ. ನಾನೇಕೆ ಕಣ್ಣಿರು ಹಾಕಲಿ. ಇವರ ಭಾಷೆ ಇವರ ರಾಜಕೀಯ ಸಂಸ್ಕೃತಿ ತೋರಿಸುತ್ತದೆ ಎಂದರು.
ವಿಕೆಂಡ್ ಕರ್ಪ್ಯೂ ನಿನ್ನೆ ವಾಪಸ್ ಪಡೆದಿದ್ದಾರೆ. ತೆರಿಗೆ ಈಗ ಏರಿಕೆ ಮಾಡುವುದು ಸರಿಯಲ್ಲ. ಕಾರ್ಪೊರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹಾಕಿ. ಜನಸಾಮಾನ್ಯರ ಮೇಲೆ ತೆರಿಗೆ ಹಾಕಬೇಡಿ.ಈಗಾಗಲೇ ಕರೋನದಿಂದ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ. ಸಣ್ಣಪುಟ್ಟ ಆದಾಯ ಇರುವವರಿಗೆ ತುಂಬಾ ಕಷ್ಟವಾಗಿದೆ.ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಮಂತ್ರಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯುತ್ ದರ, ಕುಡಿಯುವ ನೀರಿನ ದರ ಏರಿಕೆ ಮಾಡಬಾರದು ಎಂದರು.
ತಮಿಳುನಾಡಿನ ಹೊಗೇನಕಲ್ ಯೋಜನೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸಬೇಕು. ಈ ಬಗ್ಗೆ ಕಾನೂನು ತಜ್ಞ ರನ್ನ ಸರ್ಕಾರ ಸಂಪರ್ಕಿಸ ಬೇಕು.ತಮಿಳುನಾಡು ಯೋಜನಾ ವರದಿ ಸಿದ್ಧ ಮಾಡುತ್ತಾ ಇದೆ. ಕೇಂದ್ರ ಅದನ್ನ ಒಪ್ಪ ಬಾರದು. ಅದಕ್ಕೆ ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸ ಬೇಕು ಎಂದರು.
ಮೇಕೆದಾಟು ವಿಚಾರವಾಗಿ ಇನ್ನೂ 7 ದಿನ ಪಾದಯಾತ್ರೆ ಬಾಕಿ ಇದೆ. ಮೇಕೆದಾಟು ವಿಚಾರವಾಗಿ ಸುಪ್ರಿಂ ಕೋರ್ಟ್ ನಲ್ಲಿ ಯಾವುದೇ ಅಡ್ಡಿ ಇಲ್ಲ. ಈಗಾಗಲೇ ನ್ಯಾಯಾಧಿಕರಣ ತೀರ್ಪು ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!